ಲಾಟರಿ ಹಗರಣ : ಕರ್ನಾಟಕಕ್ಕೂ ಬೆಂಗಾಲಕ್ಕೂ 4,500 ಕೋಟಿ ರು ಲಿಂಕ್
ಬೆಂಗಳೂರು, ಅ.01: ಕರ್ನಾಟಕದ ಬಹುಕೋಟಿ ಲಾಟರಿ ಹಗರಣದ ತನಿಖೆ ಸಿಬಿಐ ಮುಂದುವರೆಸಿದೆ. ಇತ್ತೀಚೆಗೆ ಪಶ್ಚಿಮ ಬಂಗಾಲದಲ್ಲಿ ಇತ್ತೀಚೆಗೆ ಸಿಕ್ಕ 70 ಕೋಟಿ ರು ಮೊತ್ತದ ಜಾಡು ಹಿಡಿದು ಹೊರಟ ಸಿಬಿಐಗೆ ಈ ಹಗರಣದ ಮೊತ್ತ 4,500 ಕೋಟಿ ರು ಮೌಲ್ಯ ದಾಟುತ್ತಿದೆ ಎಂದು ತಿಳಿದು ಬಂದಿದೆ.
ತಮಿಳುನಾಡು ಮೂಲದ ಸ್ಯಾಂಟಿಯಾಗೊ ಮಾರ್ಟಿನ್ ದೇಶದ ಇತರೆಡೆ ನಡೆದಿರುವ ಲಾಟರಿ ಹಗರಣಗಳನ್ನು ನಿಯಂತ್ರಿಸುತ್ತಿದ್ದಾನೆ ಎಂದು ಮಾರ್ಟಿನ್ ನ ಬಲಗೈ ಬಂಟ ಎಸ್ ನಾಗರಾಜನ್ ಬಾಯ್ಬಿಟ್ಟಿದ್ದಾನೆ. [ಲಾಟರಿ ಸಾಮ್ರಾಜ್ಯಕ್ಕೆ ಈತನೇ ಕಿಂಗ್]
ಮೊದಲಿಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದಾಗ ಸಿಕ್ಕಿದ್ದುಯ್ 30 ಕೋಟಿ ರು ಎನ್ನಲಾಗಿತ್ತು, ಅದರೆ, ನಂತರ 70 ಕೋಟಿ ರು ಲಭ್ಯವಾಯಿತು ಎಂದು ಜಂಟಿ ಕಾರ್ಯಾಚರಣೆ ನಂತರ ಜಾರಿ ನಿರ್ದೇಶನಾಲಯ ಪ್ರಕಟಿಸಿತ್ತು. ದಾಳಿ ವೇಳೆ ಸಿಕ್ಕ ಮೊತ್ತಕ್ಕೂ ಕರ್ನಾಟಕದ ಲಾಟರಿ ಹಗರಣಕ್ಕೂ ಲಿಂಕ್ ಇರುವುದನ್ನು ನಾಗರಾಜನ್ ಒಪ್ಪಿಕೊಂಡಿದ್ದಾನೆ.

ಕಿಂಗ್ ಪಿನ್ ಮಾರ್ಟಿನ್ ಬಳಿ ಹಲವಾರು ದೇಶಗಳ ನಕಲಿ ಪಾಸ್ ಪೋರ್ಟ್ ಗಳಿದ್ದು, ಸೌದಿ ಅರೇಬಿಯಾ ಹಾಗೂ ಯುಎಇ ಗಳಿಗೆ ಹೆಚ್ಚು ಬಾರಿ ಹೋಗಿ ಬಂದು ಮಾಡುತ್ತಾನೆ. ಸೌದಿಯಲ್ಲಿ ಈ ಹಗರಣದ ಮೊತ್ತವನ್ನು ಶೇಖರಿಸಲಾಗಿದೆ. ಇದಕ್ಕೆ ಮಧ್ಯವರ್ತಿಗಳಾಗಿ ಪಶ್ಚಿಮ ಬಂಗಾಲದ ವ್ಯಕ್ತಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಎಂದು ನಾಗರಾಜನ್ ಹೇಳಿದ್ದಾನೆ.[ಲಾಟರಿ ಕಿಂಗ್ ಪಿನ್ ಕೈ ಹಿಡಿದ ಪುಢಾರಿಗಳ ಗೆಳೆತನ]
2015ರ ಮೇ 26ರಂದು ಕರ್ನಾಟಕ ಸರ್ಕಾರ ಒಂದಂಕಿ ಲಾಟರಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿ ಆದೇಶ ಹೊರಡಿಸಿದೆ. ಕಿಂಗ್ ಪಿನ್ ಮಾರ್ಟಿನ್ ಅಲ್ಲದೆ ಪಾರಿರಾಜನ್ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿದೆ. ಪಾರಿರಾಜನ್ ನ್ಯಾಯಾಂಗ ಬಂಧನದಲ್ಲಿದ್ದರೆ, ಮಾರ್ಟಿನ್ ಸುಳಿವಿಲ್ಲ, ತನಿಖೆ ಮುಂದುವರೆದಿದೆ.
ಸುಮಾರು 7,000 ಕೋಟಿ ರು ಗೂ ಅಧಿಕ ಮೌಲ್ಯ ಲಾಟರಿ ಹಗರಣದಲ್ಲಿ ಸಿಕ್ಕಿಂ ಸರ್ಕಾರಕ್ಕೆ ಸುಮಾರು 4,500 ಕೋಟಿ ರು ನಷ್ಟವಾಗಿದೆ ಎಂದು ಸಿಬಿಐ ಹೇಳಿದೆ. ಕರ್ನಾಟಕದ ಸಿಬಿಐ ತನಿಖೆ ಈಗ ಮತ್ತೊಮ್ಮೆ ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳ ಲಾಟರಿ ದಂಧೆ ಕಿಂಗ್ ಪಿನ್ ಗಳತ್ತ ಕೂಡಾ ಕ್ಷ ಕಿರಣ ಬೀರುವ ಸಾಧ್ಯತೆ ನಿಚ್ಚಳವಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications