ಲವ್ ಜಿಹಾದ್ ಭಯೋತ್ಪಾದನೆಯ ಹೊಸ ರೂಪ: ಕೇಂದ್ರ ಸಚಿವ
ನವದೆಹಲಿ, ನವೆಂಬರ್ 30: ಲವ್ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ಸನಾತನ ಧರ್ಮವನ್ನು ಮುಗಿಸಲು ಸಂಚು ರೂಪಿಸುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮಂಗಳವಾರ ಆರೋಪಿಸಿದ್ದು, ಅದರ ವಿರುದ್ಧ ಅನುಯಾಯಿಗಳು ಒಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
ಮಾಜಿ ಶಾಸಕ ಕೃಷ್ಣಾನಂದ ರೈ ಅವರ ಪುಣ್ಯಸ್ಮರಣೆ ನಿಮಿತ್ತ ಇಲ್ಲಿನ ಮೊಹಮ್ಮದಾಬಾದ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಮಾತನಾಡಿದರು. ಭಯೋತ್ಪಾದನೆ ಲವ್ ಜಿಹಾದ್ ರೂಪದಲ್ಲಿ ಹೊಸ ರೂಪ ಪಡೆದುಕೊಂಡಿದೆ. ಭಾರತದಲ್ಲಿ ಸನಾತನ ಧರ್ಮವನ್ನು ನಾಶ ಮಾಡಲು ಭಾರೀ ಸಂಚು ರೂಪಿಸುತ್ತಿದೆ. ಹಾಗಾಗಿ ಅನುಯಾಯಿಗಳು ಒಗ್ಗೂಡಿ ಈ ಷಡ್ಯಂತ್ರವನ್ನು ವಿಫಲಗೊಳಿಸಬೇಕಾಗಿದೆ ಎಂದು ಅವರು ಹೇಳಿದರು.
ಜನಸಂಖ್ಯೆ ನಿಯಂತ್ರಣ ಕಾನೂನುಗಳನ್ನು ರೂಪಿಸುವ ಅಗತ್ಯವನ್ನು ಪ್ರತಿಪಾದಿಸಿದ ಸಿಂಗ್, ಇಂತಹ ನೀತಿಗಳು ದೇಶದ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ. ಚೀನಾದಲ್ಲಿ ಪ್ರತಿ ನಿಮಿಷಕ್ಕೆ 10 ಮಕ್ಕಳು ಜನಿಸುತ್ತಿದ್ದರೆ, ಭಾರತದಲ್ಲಿ ಪ್ರತಿ ನಿಮಿಷಕ್ಕೆ 31 ಶಿಶುಗಳು ಜನಿಸುತ್ತವೆ. ಈ ಕಾರಣದಿಂದಾಗಿ ಅಭಿವೃದ್ಧಿಯು ಇಲ್ಲಿಯವರೆಗೆ ತ್ವರಿತ ವೇಗದಲ್ಲಿ ನಡೆಯಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರಕ್ಕೆ ಮುಸ್ಲಿಂ ಸಮುದಾಯದ ಬಗ್ಗೆ ಯಾವುದೇ ದ್ವೇಷವಿಲ್ಲ. ಆದರೆ ಮೂಲಭೂತವಾದಿಗಳು ಸಮಾಜದಲ್ಲಿ ದ್ವೇಷವನ್ನು ಹರಡುತ್ತಿದ್ದಾರೆ. ಪಸ್ಮಾಂಡ ಮುಸ್ಲಿಮರು ಛತ್ ಪೂಜೆ ಮಾಡುವ ಗ್ರಾಮಗಳಿಗೆ ನಾನು ಭೇಟಿ ನೀಡಿದ್ದೇನೆ. ಮುಸ್ಲಿಮರ ಬಗ್ಗೆ ನಮಗೆ ಯಾವುದೇ ದ್ವೇಷವಿಲ್ಲ ಎಂದು ನಾನು ಮತ್ತೆ ಮತ್ತೆ ಹೇಳಿದ್ದೇನೆ. ನಿಷ್ಠುರವಾದಿಗಳೇ ಸಮಾಜದಲ್ಲಿ ವಿಷವನ್ನು ಹರಡುತ್ತಾರೆ ಎಂದರು.

ಓವೈಸಿಯಂತಹ ವ್ಯಕ್ತಿಗಳು ದೇಶಕ್ಕೆ ಅಪಾಯಕಾರಿ. ಬಿಹಾರದಲ್ಲಿ 'ಮಹಾಘಟಬಂಧನ್' ಕೇವಲ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತದೆ. ಇಂದು ಬಿಹಾರದಲ್ಲಿ ಮಹಾಘಟಬಂಧನ್ ಮಾಡಿಕೊಂಡಿರುವ ಪಕ್ಷಗಳು ಕೇವಲ ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತವೆ. ಕೇವಲ ಮುಸ್ಲಿಂ ಮತಗಳ ಬಗ್ಗೆ ಕಾಳಜಿ ವಹಿಸುತ್ತವೆ ಎಂದು ಅವರು ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications