Get Updates
Get notified of breaking news, exclusive insights, and must-see stories!

ಲವ್ ಜಿಹಾದ್ ಭಯೋತ್ಪಾದನೆಯ ಹೊಸ ರೂಪ: ಕೇಂದ್ರ ಸಚಿವ

ನವದೆಹಲಿ, ನವೆಂಬರ್‌ 30: ಲವ್ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ಸನಾತನ ಧರ್ಮವನ್ನು ಮುಗಿಸಲು ಸಂಚು ರೂಪಿಸುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮಂಗಳವಾರ ಆರೋಪಿಸಿದ್ದು, ಅದರ ವಿರುದ್ಧ ಅನುಯಾಯಿಗಳು ಒಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಮಾಜಿ ಶಾಸಕ ಕೃಷ್ಣಾನಂದ ರೈ ಅವರ ಪುಣ್ಯಸ್ಮರಣೆ ನಿಮಿತ್ತ ಇಲ್ಲಿನ ಮೊಹಮ್ಮದಾಬಾದ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಮಾತನಾಡಿದರು. ಭಯೋತ್ಪಾದನೆ ಲವ್ ಜಿಹಾದ್ ರೂಪದಲ್ಲಿ ಹೊಸ ರೂಪ ಪಡೆದುಕೊಂಡಿದೆ. ಭಾರತದಲ್ಲಿ ಸನಾತನ ಧರ್ಮವನ್ನು ನಾಶ ಮಾಡಲು ಭಾರೀ ಸಂಚು ರೂಪಿಸುತ್ತಿದೆ. ಹಾಗಾಗಿ ಅನುಯಾಯಿಗಳು ಒಗ್ಗೂಡಿ ಈ ಷಡ್ಯಂತ್ರವನ್ನು ವಿಫಲಗೊಳಿಸಬೇಕಾಗಿದೆ ಎಂದು ಅವರು ಹೇಳಿದರು.

ಜನಸಂಖ್ಯೆ ನಿಯಂತ್ರಣ ಕಾನೂನುಗಳನ್ನು ರೂಪಿಸುವ ಅಗತ್ಯವನ್ನು ಪ್ರತಿಪಾದಿಸಿದ ಸಿಂಗ್, ಇಂತಹ ನೀತಿಗಳು ದೇಶದ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ. ಚೀನಾದಲ್ಲಿ ಪ್ರತಿ ನಿಮಿಷಕ್ಕೆ 10 ಮಕ್ಕಳು ಜನಿಸುತ್ತಿದ್ದರೆ, ಭಾರತದಲ್ಲಿ ಪ್ರತಿ ನಿಮಿಷಕ್ಕೆ 31 ಶಿಶುಗಳು ಜನಿಸುತ್ತವೆ. ಈ ಕಾರಣದಿಂದಾಗಿ ಅಭಿವೃದ್ಧಿಯು ಇಲ್ಲಿಯವರೆಗೆ ತ್ವರಿತ ವೇಗದಲ್ಲಿ ನಡೆಯಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು.

Love Jihad is a new form of terrorism: Union Minister Giriraj Singh

ಕೇಂದ್ರ ಸರ್ಕಾರಕ್ಕೆ ಮುಸ್ಲಿಂ ಸಮುದಾಯದ ಬಗ್ಗೆ ಯಾವುದೇ ದ್ವೇಷವಿಲ್ಲ. ಆದರೆ ಮೂಲಭೂತವಾದಿಗಳು ಸಮಾಜದಲ್ಲಿ ದ್ವೇಷವನ್ನು ಹರಡುತ್ತಿದ್ದಾರೆ. ಪಸ್ಮಾಂಡ ಮುಸ್ಲಿಮರು ಛತ್ ಪೂಜೆ ಮಾಡುವ ಗ್ರಾಮಗಳಿಗೆ ನಾನು ಭೇಟಿ ನೀಡಿದ್ದೇನೆ. ಮುಸ್ಲಿಮರ ಬಗ್ಗೆ ನಮಗೆ ಯಾವುದೇ ದ್ವೇಷವಿಲ್ಲ ಎಂದು ನಾನು ಮತ್ತೆ ಮತ್ತೆ ಹೇಳಿದ್ದೇನೆ. ನಿಷ್ಠುರವಾದಿಗಳೇ ಸಮಾಜದಲ್ಲಿ ವಿಷವನ್ನು ಹರಡುತ್ತಾರೆ ಎಂದರು.

Love Jihad is a new form of terrorism: Union Minister Giriraj Singh

ಓವೈಸಿಯಂತಹ ವ್ಯಕ್ತಿಗಳು ದೇಶಕ್ಕೆ ಅಪಾಯಕಾರಿ. ಬಿಹಾರದಲ್ಲಿ 'ಮಹಾಘಟಬಂಧನ್' ಕೇವಲ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತದೆ. ಇಂದು ಬಿಹಾರದಲ್ಲಿ ಮಹಾಘಟಬಂಧನ್‌ ಮಾಡಿಕೊಂಡಿರುವ ಪಕ್ಷಗಳು ಕೇವಲ ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತವೆ. ಕೇವಲ ಮುಸ್ಲಿಂ ಮತಗಳ ಬಗ್ಗೆ ಕಾಳಜಿ ವಹಿಸುತ್ತವೆ ಎಂದು ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+