ಮೆಟ್ರೋ ನಿಲ್ದಾಣದಲ್ಲಿ ಪ್ರೇಮಿಗಳ ಲಿಪ್ಲಾಕ್; ವಿಡಿಯೋ ಭಾರೀ ವೈರಲ್
Metro Station: ಮೆಟ್ರೋ ವಿಚಾರ ಆಗಾಗ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಇದೀಗ ಪ್ರೇಮಿಗಳಿಬ್ಬರು ತಮಗೇ ಅರಿವಿಲ್ಲದಂತೆ ಮೆಟ್ರೋ ನಿಲ್ದಾಣದಲ್ಲೇ ಒಬ್ಬರಿಗೊಬ್ಬರು ಲಿಪ್ ಕಿಸ್ ಕೊಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಹಾಗಾದರೆ ಈ ಘಟನೆ ನಡೆದಿರುವುದು ಎಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಒಂದು ಕಡೆ ನಿಜವಾದ ಪ್ರೇಮಕ್ಕೆ ಕಣ್ಣಿಲ್ಲ ಕುರುಡು ಅಂತೆಲ್ಲ ಹೇಳುತ್ತಾರೆ. ಮತ್ತೊಂದೆಡೆ ಇನ್ನೂ ಕೆಲವರು ತಮಗೇ ಸರಿವಿಲ್ಲದೇ ಎಲ್ಲೆದರಲ್ಲೇ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ತೋರುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ. ಕೆಲ ಅಂಧ ಪ್ರೇಮಿಗಳು, ರೈಲು, ಮೆಟ್ರೋ, ಬಸ್, ಪಾರ್ಕ್ ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಯಾರೇ ಇದ್ದರೂ ತಲೆಕೆಡಸಿಕೊಳ್ಳದೇ ತಮಗೆಷ್ಟಬಂದಂತೆ ಅಸಭ್ಯ ವರ್ತನೆ ತೋರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿಬಿಟ್ಟಿದೆ.

ಇದೀಗ ಮೆಟ್ರೋ ನಿಲ್ದಾಣದಲ್ಲಿ ಪ್ರೇಮಿಗಳಿಬ್ಬರು ಯಾವುದಕ್ಕೂ ಕ್ಯಾರೆ ಅನ್ನದೇ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರೆದುರೇ ಪರಸ್ಪರ ಬಿಗಿಯಾಗಿ ತಬ್ಬಿಕೊಂಡು ರೊಮ್ಯಾನ್ಸ್ ಮಾಡುವ ಮೂಲಕ ಒಬ್ಬರಿಗೊಬ್ಬರು ಕಿಸ್ ಕೊಟ್ಟುಕೊಳ್ಳುತ್ತಿರುವ ಘಟನೆ ಕೋಲ್ಕತ್ತಾದ ಕಾಳಿಘಾಟ್ ಮೆಟ್ರೋ ನಿಲ್ದಾಣದಲ್ಲಿ ನಡೆಸಿದೆ. ಇನ್ನು ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಈ ಪ್ರೇಮಿಗಳಿಬ್ಬರ ಅಸಭ್ಯ ವರ್ತನೆಗೆ ನೆಟ್ಟಿಗರು ಕೆಂಡಕಾರುತ್ತಿದ್ದಾರೆ.
ಶುಭಾಂಗಿ ಪಂಡಿತ್ (Babymishra_) ಪಂಡಿತ್ ಎಂಬವರು ಈ ವಿಡಿಯೋವನ್ನು ತಮ್ಮ ಟ್ವೀಟ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಮೆಟ್ರೋ ನಿಲ್ದಾಣದಲ್ಲಿದ್ದ ಪ್ರಯಾಣಿಕರ ಎದುರಲ್ಲೇ ಪ್ರೇಮಿಗಳಿಬ್ಬರು ಪರಸ್ಪರ ತಬ್ಬಿಕೊಂಡು ರೊಮ್ಯಾನ್ಸ್ ಮಾಡುತ್ತಿರುವಂತಹ ದೃಶ್ಯವನ್ನು ಕಾಣಬಹುದಾಗಿದೆ.
ಇನ್ನು ಈ ವಿಡಿಯೋವನ್ನು ಡಿಸೆಂಬರ್ 15ರಂದು ಹಂಚಿಕೊಳ್ಳಲಾಗಿದ್ದು, ಇದನ್ನು ವೀಕ್ಷಣೆ ಮಾಡಿದಂತಹ ನೆಟ್ಟಿಗರು ಆ ಅಂಧ ಪ್ರೇಮಿಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಒಬ್ಬರು ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ವರ್ತಿಸುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಮತ್ತೊಬ್ಬ ಬಳಕೆದಾರರು ಸಾರ್ವಜನಿಕ ಸ್ಥಳಗಳಲ್ಲಿ ಸಭ್ಯ ರೀತಿಯಲ್ಲಿ ವರ್ತಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಎಂಬ ಕಾಮೆಂಟ್ ಬಾಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೆಲವು ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ತೋರುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗುತ್ತಲೇ ಇದ್ದಾರೆ. ಅಲ್ಲದೆ, ಇಂತಹ ವಿಡಿಯೋಗಳನ್ನು ಗಮನಿಸಿದಂತಹ ಕೆಲ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಸವನ್ನು ಅರ್ಧಕ್ಕೆ ನಿಲ್ಲಿಸಿದ ಉದಾಹರಣೆಗಳಿವೆ. ಹೀಗೆ ಯಾರೋ ಒಬ್ಬರು ಮಾಡಿದ ಇಂತಹ ಕೆಲವರ ಅಸಭ್ಯದ ಕೆಲಸಗಳು ಏನೂ ತಪ್ಪು ಮಾಡದ ಬೇರೆ ವಿದ್ಯಾರ್ಥಿಗಳ ಭವಿಷ್ಯದ ಮೇಲೂ ಕೆಟ್ಟ ಪರಿಣಾಮ ಬೀರುವ ಸಾಧ್ಯತೆಗಳಿವೆ. ಒಟ್ಟಿನಲ್ಲಿ ಮಕ್ಕಳು ಏನೇ ಕೆಟ್ಟ ಕೆಲಸ ಮಾಡಿದರೂ ಕೂಡ ಕೊನೆಗೆ ಕಪ್ಪು ಚುಕ್ಕಿ ಬರುವುದೇ ಪೋಷಕರ ಬುಡಕ್ಕೆ.
ಇಂತಹ ಘಟನೆಗಳನ್ನು ಕಂಡಂತಹ ಕೆಲ ಪೋಷಕರು ತಮ್ಮ ಏನೂ ತಪ್ಪು ಮಾಡದಂತಹ ತಮ್ಮ ಮಕ್ಕಳ ವಿದ್ಯಾಭ್ಯಾಸವನ್ನೂ ಕೂಡ ಅರ್ಧಕ್ಕೆ ನಿಲ್ಲಿಸುವ ಮಟ್ಟಕ್ಕೆ ಇಳಿದಿರುವ ಉದಾಹರಣೆಗಳಿವೆ. ಈ ದೃಷ್ಟಿಯಲ್ಲಾದರೂ ವಿದ್ಯಾರ್ಥಿಗಳು ಎಚ್ಚೆತ್ತುಕೊಂಡು ತಮ್ಮ ತಂದೆ-ತಾಯಂದಿರ ಆಸೆಯಂತೆ ಕೆಟ್ಟ ದಾರಿ ಹಿಡಿಯದೇ ಉತ್ತಮ ವಿದ್ಯಾಭ್ಯಾಸ ಮಾಡುವ ಉನ್ನತ ಮಟ್ಟಕ್ಕೆ ಸಾಗಬೇಕೆನ್ನುವುದೇ ನಮ್ಮ ಆಶಯ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications