ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಉದ್ವಿಗ್ನತೆಯಿಂದಾಗಿ ಎದುರಾಗಿದ್ದ ಅಡುಗೆ ಅನಿಲ ಪೂರೈಕೆ ವ್ಯತ್ಯಯದ ಆತಂಕಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು (ಎಲ್ಪಿಜಿ) ಹೊತ್ತ 'ಶಿವಾಲಿಕ್' ಹಡಗು ಯುದ್ಧ ಪೀಡಿತ ಹೊರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿ ಸೋಮವಾರ ಸಂಜೆ ಗುಜರಾತ್ನ ಮುಂದ್ರಾ ಬಂದರನ್ನು ತಲುಪಿದೆ. ಇದು ಕೇವಲ ಗುಜರಾತ್ಗೆ ಮಾತ್ರವಲ್ಲ, ಕರ್ನಾಟಕದ ಮಂಗಳೂರಿಗೂ ಹಾಗೂ ದಕ್ಷಿಣ ಭಾರತದ ಎಲ್ಪಿಜಿ ಬಳಕೆದಾರರಿಗೂ ದೊಡ್ಡ ಮಟ್ಟದ ನೆಮ್ಮದಿ ತಂದಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ಗಾಗಿ (IOCL) ಸುಮಾರು 46 ಸಾವಿರ ಮೆಟ್ರಿಕ್ ಟನ್ ಎಲ್ಪಿಜಿಯನ್ನು ಹೊತ್ತು ತಂದಿರುವ ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾದ ಈ 'ಶಿವಾಲಿಕ್' ಹಡಗು, ಮೊದಲ ಹಂತವಾಗಿ ಮುಂದ್ರಾ ಬಂದರಿನಲ್ಲಿ 20 ಸಾವಿರ ಟನ್ ಎಲ್ಪಿಜಿಯನ್ನು ಇಳಿಸಲಿದೆ. ಮುಂದ್ರಾ ಬಂದರಿನಲ್ಲಿ ಈ ಪ್ರಮಾಣದ ಅನಿಲವನ್ನು ಸುರಕ್ಷಿತವಾಗಿ ಖಾಲಿ ಮಾಡಲು ಕನಿಷ್ಠ ಒಂದು ದಿನ ಬೇಕಾಗಲಿದೆ.

ತದನಂತರ ಹಡಗು ತನ್ನ ಮುಂದಿನ ಪ್ರಯಾಣವನ್ನು ಆರಂಭಿಸಲಿದ್ದು, ಉಳಿದ 26 ಸಾವಿರ ಟನ್ ಎಲ್ಪಿಜಿಯೊಂದಿಗೆ ನವಮಂಗಳೂರು ಬಂದರಿಗೆ ಬರಲಿದೆ. ಮುಂದ್ರಾ ಬಂದರಿನಿಂದ ಹೊರಟು ಮಂಗಳೂರು ತಲುಪಲು ಸರಾಸರಿ ಮೂರರಿಂದ ನಾಲ್ಕು ದಿನಗಳ ಸಮಯ ಬೇಕಾಗಬಹುದು ಎಂದು ನವಮಂಗಳೂರು ಬಂದರು ಪ್ರಾಧಿಕಾರದ ಉನ್ನತ ಮೂಲಗಳು ದೃಢಪಡಿಸಿವೆ.
ಈ ಮಹತ್ವದ ಬೆಳವಣಿಗೆ ಕುರಿತು ನವದೆಹಲಿಯಲ್ಲಿ ಮಾಹಿತಿ ನೀಡಿರುವ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿನ್ಹಾ ಅವರು, "ಮಧ್ಯಪ್ರಾಚ್ಯದ ಬಿಕ್ಕಟ್ಟಿನ ನಡುವೆಯೂ ನಮ್ಮ ಹಡಗುಗಳ ಸುರಕ್ಷಿತ ಆಗಮನಕ್ಕೆ ಎಲ್ಲ ರೀತಿಯ ಅತ್ಯಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶಿವಾಲಿಕ್ ಹಡಗಿನ ಸರಕು ಇಳಿಕೆಯಲ್ಲಿ ಯಾವುದೇ ವಿಳಂಬವಾಗದಂತೆ ನೋಡಿಕೊಳ್ಳಲು ಮುಂದ್ರಾ ಬಂದರಿನಲ್ಲಿ ಆದ್ಯತೆಯ ಬರ್ತಿಂಗ್ (ಲಂಗರು ಹಾಕುವ ಪ್ರಕ್ರಿಯೆ) ಮತ್ತು ತ್ವರಿತ ದಾಖಲಾತಿ ವಿಲೇವಾರಿ ವ್ಯವಸ್ಥೆಯನ್ನು ಮಾಡಲಾಗಿದೆ" ಎಂದು ಸ್ಪಷ್ಟಪಡಿಸಿದ್ದಾರೆ.
#WATCH | Gujarat: LPG tanker Shivalik, which crossed the Strait of Hormuz, reaches Mundra Port. pic.twitter.com/tVXvWunqba
— ANI (@ANI) March 16, 2026
ಭಾರತದ ಇಂಧನ ಭದ್ರತೆಯ ದೃಷ್ಟಿಯಿಂದ ಬರುತ್ತಿರುವುದು ಕೇವಲ ಶಿವಾಲಿಕ್ ಹಡಗು ಮಾತ್ರವಲ್ಲ. ಅಡುಗೆ ಅನಿಲ ಹೊತ್ತ ಮತ್ತೊಂದು ಪ್ರಮುಖ ಹಡಗು 'ನಂದಾದೇವಿ' ಮಂಗಳವಾರ ಬೆಳಿಗ್ಗೆ ಗುಜರಾತ್ನ ಕಾಂಡ್ಲಾ ಬಂದರನ್ನು ತಲುಪುವ ನಿರೀಕ್ಷೆಯಿದೆ. ಇದರ ಜೊತೆಗೆ, ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ (ಯುಎಇ) ಸುಮಾರು 81,000 ಟನ್ ಮುರ್ಬನ್ ಕಚ್ಚಾ ತೈಲವನ್ನು ಸಾಗಿಸುತ್ತಿರುವ ಭಾರತೀಯ ಧ್ವಜ ಹೊಂದಿರುವ 'ಜಗ್ ಲಾಡ್ಕಿ' ಹಡಗು ಕೂಡ ಸುರಕ್ಷಿತವಾಗಿ ಭಾರತದತ್ತ ಪ್ರಯಾಣ ಬೆಳೆಸಿದ್ದು, ಶೀಘ್ರದಲ್ಲೇ ಬಂದರನ್ನು ತಲುಪುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪರ್ಷಿಯನ್ ಕೊಲ್ಲಿ ಪ್ರದೇಶದಲ್ಲಿ ಸದ್ಯ ಯಾವುದೇ ಹೊಸ ಸಂಘರ್ಷದ ಅಥವಾ ಹಡಗುಗಳ ಮೇಲಿನ ದಾಳಿಯ ಘಟನೆಗಳು ಕಳೆದ 24 ಗಂಟೆಗಳಲ್ಲಿ ವರದಿಯಾಗಿಲ್ಲ. ಪ್ರಸ್ತುತ ಹಾರ್ಮುಜ್ ಜಲಸಂಧಿಯ ಪಶ್ಚಿಮಕ್ಕೆ 22 ಸರಕು ಸಾಗಣೆ ಹಡಗುಗಳು ಸ್ಥಾನ ಪಡೆದಿವೆ. ಒಟ್ಟಾರೆಯಾಗಿ ಭಾರತೀಯ ಧ್ವಜವನ್ನು ಹೊಂದಿರುವ 22 ವಾಣಿಜ್ಯ ಹಡಗುಗಳು ಪರ್ಷಿಯನ್ ಕೊಲ್ಲಿಯಲ್ಲಿ ಸಂಪೂರ್ಣ ಸುರಕ್ಷಿತವಾಗಿವೆ ಹಾಗೂ ಅವುಗಳಲ್ಲಿರುವ ಒಟ್ಟು 611 ಭಾರತೀಯ ನಾವಿಕರು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿದ್ದಾರೆ ಎಂಬುದು ಸಚಿವಾಲಯದ ಸ್ಪಷ್ಟನೆಯಾಗಿದೆ. ಇದು ನಾವಿಕರ ಕುಟುಂಬಗಳಿಗೂ ಮತ್ತು ಇಲಾಖೆಗೂ ನಿರಾಳತೆ ತಂದಿದೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಕರ್ನಾಟಕದ ಕರಾವಳಿಯಲ್ಲಿ ಕಾಣದ ಅಗ್ನಿಕುಂಡದ ಮೇಲೆ ಘನತ್ಯಾಜ್ಯ ವಿಲೇವಾರಿಗೆ ವೀರಾವೇಶದ ಜಿದ್ದಾಜಿದ್ದಿ: ರಾಜಾರಾಂ ತಲ್ಲೂರು ಬರಹ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್













Click it and Unblock the Notifications