ಯಾವಾಗ ಬೇಕಾದರೂ ಸಬ್ಸಿಡಿ ಸಿಲಿಂಡರ್ ಪಡೆಯಿರಿ
ನವದೆಹಲಿ, ಆ.28 : ತಿಂಗಳಿಗೆ ಒಂದು ಸಬ್ಸಿಡಿ ಸಹಿತ ಅಡುಗೆ ಅನಿಲ ಸಿಲಿಂಡರ್ ಪೂರೈಸುವ ನಿರ್ಬಂಧವನ್ನು ಕೇಂದ್ರ ಸರ್ಕಾರ ಬುಧವಾರ ತೆರವುಗೊಳಿಸಿದೆ. ಇದರಿಂದಾಗಿ ತಿಂಗಳಿಗೆ ಕೇವಲ ಒಂದು ಸಿಲಿಂಡರ್ ಎನ್ನುವ ನಿರ್ಬಂಧವಿಲ್ಲದೇ, ವರ್ಷದಲ್ಲಿ ಯಾವಾಗ ಬೇಕಾದರೂ 12 ಸಬ್ಸಿಡಿ ಸಿಲಿಂಡರ್ಗಳನ್ನು ಗ್ರಾಹಕರು ಪಡೆಯಬಹುದಾಗಿದೆ.
ಬುಧವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಈ ಕುರಿತು ಮಾಹಿತಿ ನೀಡಿದ ಕಾನೂನು ಸಚಿವ ರವಿಶಂಕರ್ ಪ್ರಸಾದ್, ತಿಂಗಳಿಗೆ ಕೇವಲ ಒಂದು ಸಿಲಿಂಡರ್ ಎನ್ನುವ ನಿರ್ಬಂಧವಿಲ್ಲದೇ, ವರ್ಷದಲ್ಲಿ ಯಾವಾಗ ಬೇಕಾದರೂ 12 ಸಬ್ಸಿಡಿ ಸಿಲಿಂಡರ್ಗಳನ್ನು ಗ್ರಾಹಕರಿಗೆ ಪೂರೈಸಲು ಒಪ್ಪಿಗೆ ನೀಡಲಾಗಿದೆ ಎಂದರು.

ಹಿಂದೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರ 14.2 ಕೆ.ಜಿ ತೂಕದ ಸಬ್ಸಿಡಿಸಹಿತ ಎಲ್ಪಿಜಿ ಸಿಲಿಂಡರ್ಗಳ ಕೋಟಾವನ್ನು 9ರಿಂದ 12ಕ್ಕೆ ಹೆಚ್ಚಿಸಿ, ತಿಂಗಳಿಗೆ ಒಂದು ಸಿಲಿಂಡರ್ ಅನ್ನು ನೀಡುವ ತೀರ್ಮಾನವನ್ನು ಕಳೆದ ಫೆಬ್ರವರಿಯಲ್ಲಿ ತೆಗೆದುಕೊಂಡಿತ್ತು. ಈ ನಿರ್ಧಾರ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. [ಕರ್ನಾಟಕದಲ್ಲಿ ಸಿಲಿಂಡರ್ ಬೆಲೆ ಇಳಿಕೆ]
ಈ ತೀರ್ಮಾನದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಎನ್ಡಿಎ ಸರ್ಕಾರ, ಕೆಲವು ಸಲ ಗ್ರಾಹಕರಿಗೆ ಒಂದು ಸಿಲಿಂಡರ್ ಸಹ ಬೇಕಾಗುವುದಿಲ್ಲ. ಹಬ್ಬದ ಸಮಯದಲ್ಲಿ ಹೆಚ್ಚಿನ ಸಿಲಿಂಡರ್ಗಳು ಬೇಕಾಗುತ್ತದೆ. ತಿಂಗಳಿಗೆ ಒಂದು ಸಿಲಿಂಡರ್ ಪಡೆಯದೇ ಹೋದರೆ, ಅದನ್ನು ಮುಂದಿನ ದಿನಗಳಲ್ಲಿ ಪಡೆಯಲು ಜನರಿಗೆ ಆಗುತ್ತಿರಲಿಲ್ಲ. ಆದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಎಲ್ಲ ಗ್ರಾಹಕರ ಕುಟುಂಬಗಳೂ ಏಕ ರೂಪದಲ್ಲಿ ಇರುವುದಿಲ್ಲ. ಕೆಲವರಿಗೆ ತಿಂಗಳಿಗೆ ಒಂದು ಸಿಲಿಂಡರ್ ಸಾಕಾಗಬಹುದು. ಇನ್ನೂ ಕೆಲವರಿಗೆ ಮತ್ತೊಂದು ಸಿಲಿಂಡರ್ನ ಅಗತ್ಯವಿರುತ್ತದೆ. ಸರ್ಕಾರ ಸಿಲಿಂಡರ್ ಮಿತಿ ನಿರ್ಬಂಧವನ್ನು ಸಡಿಲಿಸಬೇಕು ಎಂದು ಜನರು ಒತ್ತಾಯಿಸಿದ್ದರು. ಸದ್ಯ ಸರ್ಕಾರ ಇದಕ್ಕೆ ಅಸ್ತು ಎಂದಿದೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications