ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ; ಎಷ್ಟು ಹೆಚ್ಚಾಗಿದೆ?
ನವದೆಹಲಿ, ಜುಲೈ 01: ಇಂಧನ ಬೆಲೆ ಏರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ಗುರುವಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದೆ. ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಇದು ಮತ್ತೊಂದು ಹೊರೆಯಾಗಲಿದೆ.
Recommended Video

14.2 ಕೆ.ಜಿ. ಸಾಮರ್ಥ್ಯದ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 25.50 ರೂಪಾಯಿ ಏರಿಕೆ ಮಾಡಿದ್ದು, ನವದೆಹಲಿಯಲ್ಲಿ ಅನಿಲ ಸಿಲಿಂಡರ್ ಬೆಲೆ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ. 19 ಕೆ.ಜಿ ತೂಕದ ಸಿಲಿಂಡರ್ ಬೆಲೆಯನ್ನು 76 ರೂಪಾಯಿಗೆ ಏರಿಕೆ ಮಾಡಿದ್ದು, ದೆಹಲಿಯಲ್ಲಿ ಈ ಸಿಲಿಂಡರ್ ಬೆಲೆ 1,550ರೂಗೆ ತಲುಪಿದೆ.
ಪ್ರತಿ ತಿಂಗಳ ಮೊದಲ ದಿನ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಅನಿಲ ಸಿಲಿಂಡರ್ಗಳ ಬೆಲೆ ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆ ಮಾಡಬೇಕೇ ಬೇಡವೇ ಎಂಬುದನ್ನು ನಿರ್ಧರಿಸುತ್ತವೆ.

ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನಲ್ಲಿ ಅಡುಗೆ ಅನಿಲ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಏಪ್ರಿಲ್ನಲ್ಲಿ 10ರೂ ಬೆಲೆ ಇಳಿಕೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಯಾವುದೇ ಪರಿಷ್ಕರಣೆ ಮಾಡಿರಲಿಲ್ಲ. ಇದೀಗ ಜುಲೈ ತಿಂಗಳಿನಲ್ಲಿ 25.50 ರೂ ಬೆಲೆ ಏರಿಕೆ ಮಾಡಲಾಗಿದೆ.
ಮೆಟ್ರೋ ಸಿಟಿಗಳಲ್ಲಿ ಎಲ್ಪಿಜಿ ಸಿಲಿಂಡರ್ ದರ ಹೀಗಿದೆ:
ನವದೆಹಲಿಯಲ್ಲಿ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ.
ಮುಂಬೈನಲ್ಲಿ ಕೂಡ 834.50 ರೂಪಾಯಿಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆ 812 ರೂ ಇದ್ದದ್ದು ಈಗ 836.50 ರೂಗೆ ಹೆಚ್ಚಳವಾಗಿದೆ.
ಕೋಲ್ಕತ್ತಾದಲ್ಲಿ 835.50 ರೂ ಇದ್ದ ಸಿಲಿಂಡರ್ ಬೆಲೆ ಈಗ 861 ರೂಪಾಯಿಗೆ ಏರಿಕೆಯಾಗಿದೆ.
-
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
Bengaluru PG: ಬೆಂಗಳೂರಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ: ಪಿಜಿಗಳಲ್ಲಿ ಊಟ ಬಂದ್, ವೈರಲ್ ಪೋಸ್ಟ್ -
LPG ಪೂರೈಕೆ ವ್ಯತ್ಯಯ: ಬೆಂಗಳೂರಿನ ಪಿಜಿಗಳಲ್ಲೂ ಆಹಾರ ಪೂರೈಕೆ ಸ್ಥಗಿತದ ಭೀತಿ, ಆತಂಕದಲ್ಲಿ 10 ಲಕ್ಷ ಮಂದಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications