ದೇಶದ ಜನತೆಗೆ ಮೋದಿ ಭರ್ಜರಿ ಗಿಫ್ಟ್: ಅಡುಗೆ ಅನಿಲ ಬೆಲೆ 200 ಇಳಿಕೆ!?
ದೆಹಲಿ,ಆಗಸ್ಟ್ 29: ದೇಶದ ಜನತೆಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ.ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಪ್ರತಿ ಎಲ್ಪಿಜಿ ಸಿಲಿಂಡರ್ಗೆ ರೂ 200 ಹೆಚ್ಚುವರಿ ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.
ಆಗಸ್ಟ್ 30 ರಿಂದ 14 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ. ಆಗಸ್ಟ್ 30 ರಿಂದ 200 ರೂಪಾಯಿ ಇಳಿಕೆಯಾಗಲಿದ್ದು, ಕೇಂದ್ರ ಕ್ಯಾಬಿನೆಟ್ ಸಿಲಿಂಡರ್ ಇಳಿಕೆಗೆ ಅನುಮತಿ ನೀಡಿದೆ. ನಾಳೆಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಸಿಎನ್ಬಿಸಿಟಿ ವರದಿ ಪ್ರಕಾರ ಅಡುಗೆ ಅನಿಲ ಬೆಲೆಯಲ್ಲಿ 200 ರೂಪಾಯಿ ಇಳಿಕೆಯಾಗಲಿದೆ ಎಂದು ಇಂಡಿಯಾ ಟಿವಿ ನ್ಯೂಸ್ ವರದಿ ಮಾಡಿದೆ.

ಕಳೆದ ಕೆಲವು ತಿಂಗಳುಗಳಿಂದ ಬಹುತೇಕ ಎಲ್ಲ ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚೇ ಇರುವ ಕಾರಣ ಮಧ್ಯಮ ವರ್ಗದವರಿಗೆ ಇದೊಂದು ಸಂತಸದ ಸುದ್ದಿಯಾಗಿದೆ. ಎಲ್ಪಿಜಿ ದರ ಕಡಿತದಿಂದ ಜನರಿಗೆ ದೊಡ್ಡ ನೆಮ್ಮದಿ ಸಿಗಲಿದ್ದು, 14 ಕೆಜಿ ಎಲ್ಜಿಪಿ ಸಿಲಿಂಡರ್ನ ಪ್ರಸ್ತುತ ಬೆಲೆ ಸುಮಾರು 1,100 ರೂ.
ಸದ್ಯ 14.2 ಕೆಜಿ ಅಡುಗೆ ಗ್ಯಾಸ್ ಸಿಲಿಂಡರ್ ಬೆಲೆ ಕರ್ನಾಟಕದಲ್ಲಿ 1,105.50 ರೂಪಾಯಿ ಇದ್ದರೆ, ದೆಹಲಿಯಲ್ಲಿ 1053, ಮುಂಬೈನಲ್ಲಿ 1052.50 ರೂಪಾಯಿ, ಚೆನ್ನೈನಲ್ಲಿ 1079 ರೂಪಾಯಿ ದರವಿದೆ. ಈ ಬೆಲೆಯಲ್ಲಿ 200 ರೂಪಾಯಿ ಕಡಿತಗೊಳ್ಳಲಿದೆ ಎಂದು ವರದಿಯಾಗಿದೆ.

ಈ ವರ್ಷ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸಹಾಯಕವಾಗಲಿದೆ. ಪ್ರಮುಖ ರಾಜ್ಯಗಳು- ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನ ಈ ವರ್ಷದ ಕೊನೆಯಲ್ಲಿ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಮಾಡಲಾಗಿದೆ ಅನ್ನೋ ಮಾತುಗಳು ಕೇಳಿಬಂದಿದೆ.
ಆಗಸ್ಟ್ 27 ರ ಭಾನುವಾರದಂದು, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು 450 ರೂಗಳಿಗೆ ಗ್ಯಾಸ್ ಸಿಲಿಂಡರ್ಗಳನ್ನು ಒದಗಿಸುವುದು ಸೇರಿದಂತೆ ಹಲವಾರು ಚುನಾವಣಾ ಘೋಷಣೆಗಳನ್ನು ಮಾಡಿದರು. ಮಹಿಳೆಯರಿಗೆ ಪವಿತ್ರವಾದ ಶ್ರಾವಣ ಮಾಸದಲ್ಲಿ 450 ರೂ.ಗೆ ಅಡುಗೆ ಅನಿಲ ಸಿಗುತ್ತದೆ. ನಂತರ ಈ ನಿಟ್ಟಿನಲ್ಲಿ ಶಾಶ್ವತ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಹೇಳಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications