LPG Good News: ಶೀಘ್ರವೇ ಇವರಿಗೂ ಸಿಗಲಿದೆ ಎಲ್ಪಿಜಿ ಸಂಪರ್ಕ, ಇಲ್ಲಿದೆ ಗುಡ್ನ್ಯೂಸ್
ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ (ಪಿಎಂಯುವೈ) ಈಗಾಗಲೇ ಎಲ್ಪಿಜಿ ಸಿಲಿಂಡರ್ ಸಂಪರ್ಕಗಳನ್ನು ನೀಡಿದೆ. ಅಲ್ಲದೆ ಸಬ್ಸಿಡಿ ಮೂಲಕ ಮನೆ ಮನೆಗೆ ಎಲ್ಪಿಜಿ ಪೂರೈಕೆ ಮಾಡುತ್ತಿದೆ. ಇದೀಗ ವಾಯುಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ಉಜ್ವಲ ಯೋಜನೆಯಡಿ ಕೊಳಚೆ ಪ್ರದೇಶಗಳಲ್ಲಿ ವಾಸಿಸುವವರಿಗೂ ಎಲ್ಪಿಜಿ ಸಂಪರ್ಕಗಳನ್ನು ಒದಗಿಸಲು ಸರ್ಕಾರ ಮುಂದಾಗಿದೆ. ಮಾಲಿನ್ಯ ನಿಯಂತ್ರಣ ಹಾಗು ಸಾರ್ವಜನಿಕ ಆರೋಗ್ಯವನ್ನು ಸುಧಾರಿಸಲು ಸರ್ಕಾರವು ಉಜ್ವಲ ಯೋಜನೆಯನ್ನು ಕೊಳೆಗೇರಿ ನಿವಾಸಿಗಳಿಗೂ ವಿಸ್ತರಿಸಲಿದೆ ಎಂದು ವರದಿಯಾಗಿದೆ.
ಕೊಳಚೆ ಪ್ರದೇಶಗಳಲ್ಲಿ ಅಡುಗೆಗಾಗಿ ಒಲೆಗಳನ್ನು ಇಂದಿಗೂ ಬಳಕೆ ಮಾಡಲಾಗುತ್ತಿದೆ. ಇದರಿಂದ ವಾಯುಮಾಲಿನ್ಯ ಮಾತ್ರವಲ್ಲದೆ, ಆರೋಗ್ಯಕ್ಕೂ ಹಾನಿಕಾರಕ ಎಂದು ಹೇಳಲಾಗಿದೆ. ಶುದ್ಧ ಇಂಧನ ಮತ್ತು ಸುಸ್ಥಿರ ಜೀವನವನ್ನು ಉತ್ತೇಜಿಸಲು ಮಾಲಿನ್ಯಕಾರಕ ಅಡುಗೆ ಇಂಧನಗಳನ್ನು ಅವಲಂಬಿಸಿರುವ ಕುಟುಂಬಗಳನ್ನು ಗುರುತಿಸಲು ಕೊಳಚೆ ಪ್ರದೇಶಗಳಲ್ಲಿ ನಗರಾದ್ಯಂತ ಸಮೀಕ್ಷೆ ನಡೆಸುವಂತೆ ದೆಹಲಿ ಸಿಎಂ ರೇಖಾ ಗುಪ್ತಾ ದೆಹಲಿ ನಗರ ಆಶ್ರಯ ಸುಧಾರಣಾ ಮಂಡಳಿಗೆ ಸೂಚನೆ ನೀಡಿದ್ದಾರೆ.

ದೆಹಲಿ ಸರ್ಕಾರವು ಉಜ್ವಲ ಯೋಜನೆಯಡಿಯಲ್ಲಿ ಅಂತಹ ಮನೆಗಳಿಗೆ ಎಲ್ಪಿಜಿ ಸಂಪರ್ಕಗಳನ್ನು ಒದಗಿಸಲು ಯೋಜನೆ ರೂಪಿಸಿದೆ. ಈ ಕಾರ್ಯಕ್ರಮವು ವಿಶೇಷವಾಗಿ ಹೆಚ್ಚಿನ ಜನಸಂಖ್ಯಾ ಸಾಂದ್ರತೆಯಿರುವ ಪ್ರದೇಶಗಳಲ್ಲಿ. ಸಾರ್ವಜನಿಕ ಆರೋಗ್ಯವನ್ನು ಹೆಚ್ಚಿಸಲು ಮತ್ತು ವಾಯು ಮಾಲಿನ್ಯವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತದೆ ಎಂದು ಗುಪ್ತಾ ಹೇಳಿದ್ದಾರೆ. ಮಾಲಿನ್ಯ ನಿಯಂತ್ರಣ ಕಾರ್ಯ ಯುದ್ಧೋಪಾದಿಯಲ್ಲಿ ನಡೆಯುತ್ತಿದೆ ಎಂದು ಅವರು ಒತ್ತಿ ಹೇಳಿದ್ದಾರೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ) ಒಂದು ಪ್ರಮುಖ ಸರ್ಕಾರಿ ಯೋಜನೆಯಾಗಿದ್ದು, ಬಡತನ ರೇಖೆಗಿಂತ ಕೆಳಗಿರುವ ಮನೆಗಳಿಗೆ ಶುದ್ಧ ಅಡುಗೆ ಇಂಧನ ಎಲ್ಪಿಜಿ ಪೂರೈಸುತ್ತದೆ. ವಾಯು ಮಾಲಿನ್ಯ ಮತ್ತು ಸಂಬಂಧಿತ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುವ ಉರುವಲು, ಕಲ್ಲಿದ್ದಲು ಮತ್ತು ಹಸುವಿನ ಸಗಣಿ ಮೇಲಿನ ಅವಲಂಬನೆಯನ್ನು ಕಡಿತಗೊಳಿಸುವ ಮೂಲಕ ಮಹಿಳೆಯರು ಮತ್ತು ಮಕ್ಕಳನ್ನು ರಕ್ಷಿಸುವುದು ಈ ಯೋಜನೆಯ ಗುರಿ.
ಒಲೆಗಳು ಮತ್ತು ಕಲ್ಲಿದ್ದಲು ಬರ್ನರ್ಗಳಿಂದ ಬರುವ ಹೊಗೆಯು ವಾಯು ಮಾಲಿನ್ಯಕ್ಕೆ ಕಾರಣವಾಗುವುದಲ್ಲದೆ, ನಿವಾಸಿಗಳಿಗೆ ಗಂಭೀರ ಆರೋಗ್ಯ ಅಪಾಯಗಳನ್ನುಂಟುಮಾಡುತ್ತದೆ ಎಂದು ಸಿಎಂ ಗುಪ್ತಾ ಹೇಳಿದ್ದಾರೆ. ಕೊಳೆಗೇರಿಗಳಲ್ಲಿನ ಒಲೆಗಳು, ಬೆಂಕಿಗೂಡುಗಳಿಂದ ಹೊರಬರುವ ಹೊಗೆ ಪರಿಸರವನ್ನು ಕಲುಷಿತಗೊಳಿಸುತ್ತವೆ. ಅಲ್ಲಿ ವಾಸಿಸುವ ಕುಟುಂಬಗಳ ಆರೋಗ್ಯಕ್ಕೂ ಗಂಭೀರ ಅಪಾಯ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ನಗರ ಸ್ಥಳೀಯ ಸಂಸ್ಥೆಗಳು ಕಣಗಳನ್ನು ನಿಯಂತ್ರಿಸಲು ನೀರು ಸಿಂಪರಣೆ, ಯಾಂತ್ರಿಕ ಧೂಳು ನಿಗ್ರಹ ಮತ್ತು ರಸ್ತೆ ದುರಸ್ತಿ ಸೇರಿದಂತೆ ಲಭ್ಯವಿರುವ ಎಲ್ಲಾ ನೈರ್ಮಲ್ಯ ಸಂಪನ್ಮೂಲಗಳನ್ನು ಬಳಸುತ್ತಿವೆ. ಇದು ಮಾಲಿನ್ಯ ಮುಕ್ತ ದೆಹಲಿಗೆ ತಮ್ಮ ಆಡಳಿತದ ಬದ್ಧತೆ. ಎಲ್ಲ ನಿವಾಸಿಗಳಿಗೆ ಶುದ್ಧ ಗಾಳಿ ಮತ್ತು ಆರೋಗ್ಯಕರ ಜೀವನ ಪರಿಸ್ಥಿತಿಗಳನ್ನು ಖಚಿತಪಡಿಸಿಕೊಳ್ಳಲು ಇಲಾಖೆಗಳು ನಗರದಾದ್ಯಂತ ಸಮನ್ವಯ ಸಾಧಿಸುತ್ತಿವೆ ಎಂದಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ











Click it and Unblock the Notifications