ಕಡಿಮೆ ಬೆಲೆಗೆ ಎಲ್ಪಿಜಿ ಸಿಲಡರ್ ಪಡೆಯೋದೇಗೆ? ಇಲ್ಲಿವೆ ಅನುಸರಿಸಬೇಕಾದ ಸರಳ ಮಾರ್ಗಗಳು
LPG Price Cut: ದಿನದಿಂದ ದಿನಕ್ಕೆ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಮತ್ತೊಂದೆಡೆ, ಇಂತಹದ್ಧರದಲ್ಲೂ ಕಡಿಮೆ ಬೆಲೆಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆಯಬಹುದು. ಇಲ್ಲಿರುವ ಸರಳ ಮಾರ್ಗಗಳನ್ನು ಅನುಸರಿಸಿದ್ರೆ ಮಾತ್ರ ಈ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಕೇಂದ್ರ ಸರ್ಕಾರ ಜನರಿಗೆ ಅನುಕೂನ ಆಗುವಂತೆ ಹೊಸ ಯೋಜನೆಗಳನ್ನು ಜಾರಿ ಮಾಡುತ್ತಲಿರುತ್ತದೆ. ಈಗಾಗಲೇ ಹಲವು ಪ್ರಮುಖ ಯೋಜನೆಗಳನ್ನು ತಂದಿದ್ದು, ಇವುಗಳಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯೂ ಒಂದಾಗಿದೆ. ಈ ಯೋಜನೆ ಮೂಲಕ ಎಲ್ಪಿಜಿ ಸಿಲಿಂಡರ್ಗಳ ಸಂಪರ್ಕವನ್ನು ಒದಗಿಸಲಾಗುತ್ತದೆ. ಈ ಯೋಜನೆಯನ್ನು 2016ರಲ್ಲಿ ಆರಂಭಿಸಲಾಯಿತು.

ಈಗಿರುವ ಪ್ರಸ್ತುತ ಪಿಎಂ ಉಜ್ವಲ ಯೋಜನೆಯಡಿಯಲ್ಲಿ 25,00,000 ಹೊಸ ಸಿಲಿಂಡರ್ ಸಂಪರ್ಕ ಒದಗಿಸಲು ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಗೆ 676 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಪ್ರತಿ ಸಿಲಿಂಡರ್ ಬಳಕೆದಾರರಿಗೆ 300 ರೂಪಾಯಿಗಳ ಅನುದಾನವನ್ನ ನೀಡಲಾಗುತ್ತದೆ.
ಪಿಎಂ ಉಜ್ವಲ ಯೋಜನೆಯಲ್ಲಿ ಫಲಾನುಭವಿಗಳಿಗೆ ಸಿಲಿಂಡರ್, ಅನಿಲ ಒತ್ತಡ ನಿಯಂತ್ರಕ, ಸುರಕ್ಷಾ ಮೃದು ಕೊಳವೆ ಮತ್ತು ಸ್ಟೌವ್ ಅನ್ನು ಉಚಿತವಾಗಿ ನೀಡಲಾಗುತ್ತದೆ. ಫಲಾನುಭವಿಗಳಿಗೆ ಮೊದಲ ಸಿಲಿಂಡರ್ ಹಾಗೂ ಸ್ಟೌವ್ಗೆ ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ. ಇದರ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ.
ಈ ಯೋಜನೆ ಪಡೆಯಲು ಇರಬೇಕಾದ ಅರ್ಹತೆಗಳು
* ಬಡ ಕುಟುಂಬಕ್ಕೆ ಸೇರಿದ ಮತ್ತು ಮನೆಯಲ್ಲಿ ಎಲ್ಪಿಜಿ ಸಂಪರ್ಕ ಹೊಂದಿರದ ವಯಸ್ಕ ಮಹಿಳೆಯರಾಗಿರಬೇಕು.
* ಎಸ್ಇಸಿಸಿ 2011 ಪಟ್ಟಿಯ ಪ್ರಕಾರ ಅರ್ಹರಾಗಿರಬೇಕು.
* ಪ್ರಧಾನ ಮಂತ್ರಿ ಆವಾಸ್ ಯೋಜನೆ, ಅಂತ್ಯೋದಯ ಅನ್ನ ಯೋಜನೆ (AAY), ಅರಣ್ಯವಾಸಿಗಳು, ಅತ್ಯಂತ ಹಿಂದುಳಿದ ವರ್ಗಗಳು (MBC), ಬುಡಕಟ್ಟು ಜನಾಂಗದವರು, ನದಿ ದ್ವೀಪಗಳಲ್ಲಿ ವಾಸಿಸುವ ಜನರು ಅರ್ಹರಾಗಿರುತ್ತಾರೆ.
ಬೇಕಾಗುವ ಅಗತ್ಯ ದಾಖಲೆಗಳು
* ಆಧಾರ್ ಕಾರ್ಡ್
* ಪಡಿತರ ಚಿಟಿ
* ವಿಳಾಸ ಪುರಾವೆ
* ಪಾಸ್ಪೋರ್ಟ್ ಗಾತ್ರದ ಛಾಯಾಚಿತ್ರ
* ಬ್ಯಾಂಕ್ ವಿವರ
ಅರ್ಜಿ ಸಲ್ಲಿಸುವ ವಿಧಾನಗಳು
* ಅರ್ಜಿಯನ್ನು ಆನ್ಲೈನ್ ಮೂಲಕ ಯೋಜನೆಯ ಅಧಿಕೃತ ಅಂತರ್ಜಾಲ ತಾಣ http://www.pmuy.gov.in/e-kyc.htmlಗೆ ಭೇಟಿ ನೀಡಿ.
* ಇಂಡೇನ್, ಭಾರತ್ ಗ್ಯಾಸ್, ಎಚ್ಪಿ ಗ್ಯಾಸ್ ತೈಲ ಕಂಪನಿ ಹೆಸರನ್ನು ಆಯ್ಕೆ ಮಾಡಿ
* ಸಂಪರ್ಕದ ಪ್ರಕಾರವನ್ನು ಆಯ್ಕೆ ಮಾಡಿ
* ರಾಜ್ಯ, ಜಿಲ್ಲೆ ಮತ್ತು ವಿತರಕರ ಹೆಸರನ್ನು ಆಯ್ಕೆ ಮಾಡಿ
* ಮೊಬೈಲ್ ಸಂಖ್ಯೆ ಹಾಗೂ ಒಟಿಪಿ ನಮೂದಿಸಿ
* ವಲಸೆ ಕುಟುಂಬದವರಾಗಿದ್ದರೆ, ಹೌದು ಅಥವಾ ಇಲ್ಲ ಆಯ್ಕೆ ಮಾಡಿ
* ರೇಷನ್ ಕಾರ್ಡ್ ಮಾಹಿತಿಯನ್ನು ಭರ್ತಿ ಮಾಡಿ
* ವರ್ಗವನ್ನು ಆಯ್ಕೆ ಮಾಡಿ
* ಕುಟುಂಬದ ವಿವರ, ವೈಯಕ್ತಿಯ ವಿವರ, ವಿಳಾಸ ಹಾಗೂ ಬ್ಯಾಂಕ್ ವಿವರಗಳನ್ನು ಭರ್ತಿ ಮಾಡಿ.
* ಗ್ರಾಮ/ನಗರವನ್ನು ಆಯ್ಕೆ ಮಾಡಿ ಅರ್ಜಿ ಸಲ್ಲಿಸಿ
* ನೋಂದಣಿ ಸಂಖ್ಯೆ ಪಡೆದು ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ
ಹೀಗೆ ಕೆಂದ್ರ ಸರ್ಕಾರ ಬಡವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯಡಿಯಲ್ಲಿ ಬರುವ ಗ್ರಾಹಕರು ಪ್ರತಿ ತಿಂಗಳು ಸಬ್ಸೀಡಿಯನ್ನು ಕೂಡ ಪಡೆಯುತ್ತಿದ್ದಾರೆ. ಇದರಿಂದ ಬಡವರಿಗೆ ತುಂಬಾ ಸಹಾಯ ಆದಂತಾಗಲಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications