LPG Price Hike: ಎಲ್ಪಿಜಿ ಸಿಲಿಂಡರ್ ಬೆಲೆ ಭಾರೀ ಏರಿಕೆ ಸಾಧ್ಯತೆ, ಕಾರಣವೇನು?
ಇನ್ನೇನು ಈ ವರ್ಷ ಮುಗಿಯಲು ಒಂದು ತಿಂಗಳಷ್ಟೇ ಬಾಕಿ ಇದೆ. ಆದರೆ ಹೊಸ ವರ್ಷಕ್ಕೂ ಮೊದಲೇ ಎಲ್ಪಿಜಿ ಬಳಕೆದಾರರಿಗೆ ಶಾಕ್ ಕಾದಿದೆ. ವರದಿಗಳ ಪ್ರಕಾರ ಡಿಸೆಂಬರ್ ತಿಂಗಳಿನಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆಗಳು ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ. ಹೀಗಾಗಿ ನಿಮ್ಮ ಮನೆಯಲ್ಲಿ ಗ್ಯಾಸ್ ಖಾಲಿಯಾಗಿದ್ದಲ್ಲಿ, ತಕ್ಷಣವೇ ಮತ್ತೊಂದು ಬುಕಿಂಗ್ ಮಾಡುವುದು ಒಳ್ಳೆಯದು ಎಂದು ಹೇಳಲಾಗುತ್ತಿದೆ. ಎಲ್ಪಿಜಿ ದರ ಏರಿಕೆಗೆ ಕಾರಣವೇನು ಎಂಬ ಮಾಹಿತಿ ಇಲ್ಲಿದೆ.
ಕೇಂದ್ರ ಸರ್ಕಾರವು ಎಲ್ಪಿಜಿ ಸಿಲಿಂಡರ್ ಅನ್ನು ಸಬ್ಸಿಡಿ ಮೂಲಕ ಮನೆ ಮನೆಗೆ ವಿತರಣೆ ಮಾಡುತ್ತಿದೆ. ಈ ಸಬ್ಸಿಡಿಯಿಂದಾಗಿ ಈಗಾಗಲೇ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಭಾರಿ ಆರ್ಥಿಕ ಒತ್ತಡ ಹಾಗೂ ನಷ್ಟ ಎದುರಿಸುತ್ತಿವೆ. ಹೀಗಾಗಿ ಮುಂದಿನ ತಿಂಗಳುಗಳಲ್ಲಿ ಸಬ್ಸಿಡಿ ಹಣ ಬಿಡುಗಡೆ ಮಾಡಲು ಸಹ ಸರ್ಕಾರ ಸಜ್ಜಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ಎದುರಿಸುತ್ತಿರುವ ಈ ಆರ್ಥಿಕ ನಷ್ಟ ಸರಿದೂಗಿಸಲು ಬೆಲೆಗಳು ಏರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸರ್ಕಾರವು ಈಗಾಗಲೇ 30,000 ಕೋಟಿ ರೂಪಾಯಿ ಸಬ್ಸಿಡಿ ಪರಿಹಾರ ನೀಡಲಿದೆ. ಅಲ್ಲದೆ ಇತ್ತೀಚೆಗಷ್ಟೇ ಅಮೇರಿಕಾರದಿಂದಲೂ ಎಲ್ಪಿಜಿ ಆಮದು ಮಾಡಿಕೊಳ್ಳಲು ಭಾರತ ಸರ್ಕಾರ ಮಹತ್ವದ ಒಪ್ಪಂದ ಮಾಡಿಕೊಂಡಿದೆ. ಹೀಗಾಗಿ ಸಿಲಿಂಡರ್ಗಳ ವೆಚ್ಚ ಹೆಚ್ಚಾಗಿ ಬೆಲೆಗಳು ಏರುವ ನಿರೀಕ್ಷೆ ಇದೆ. ಇದರಿಂದ ಎಲ್ಪಿಜಿ ಬಳಕೆದಾರರ ಜೇಬು ಸುಡುವ ಸಾಧ್ಯತೆ ಇದೆ.
ನಷ್ಟ ಸರಿದೂಗಿಸಲು ಬೆಲೆ ಹೆಚ್ಚಳ?
ಸರ್ಕಾರವು ಮುಂಬರುವ ತಿಂಗಳುಗಳಲ್ಲಿ ಸಬ್ಸಿಡಿಗಳನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿರುವ ಸಮಯದಲ್ಲೇ ತೈಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಕಡಿಮೆ ವಸೂಲಿಯಿಂದ ಭಾರೀ ಆರ್ಥಿಕ ಒತ್ತಡವನ್ನು ಎದುರಿಸುತ್ತಿವೆ ಎಂದು ನುವಾಮಾ ರಿಸರ್ಚ್ನ ವರದಿ ಹೇಳಿದೆ. ಈ ತೈಲ ಕಂಪನಿಗಳಿಗೆ ಎಲ್ಪಿಜಿ ಸಂಬಂಧಿತ ನಷ್ಟವು ಪ್ರಸ್ತುತ 53,700 ಕೋಟಿ ರೂಪಾಯಿಗೂ ಹೆಚ್ಚು ಎಂದು ವರದಿ ತಿಳಿಸಿದೆ. ಹೀಗಾಗಿ ಸರ್ಕಾರದಿಂದ 12 ಕಂತುಗಳಲ್ಲಿ 30,000 ಕೋಟಿ ರೂಪಾಯಿಗಳ ಸಬ್ಸಿಡಿ ಪಡೆಯುವ ಸಾಧ್ಯತೆಯಿದೆ. ಈ ಸಮಾನ ಮಾಸಿಕ ಕಂತುಗಳನ್ನು ನವೆಂಬರ್ ತಿಂಗಳಿನಿಂದಲೇ ಪ್ರಾರಂಭಿಸಲು ಯೋಜಿಸಲಾಗಿದೆ. ಈ ಹಣ ಬಿಡುಗಡೆಯಾದ ನಂತರ ನೇರವಾಗಿ ಆದಾಯವಾಗಿ ದಾಖಲಾಗುತ್ತದೆ.
ಸಾಮಾನ್ಯವಾಗಿ ಚಳಿಗಾಲದ ತಿಂಗಳುಗಳಲ್ಲಿ ದಿನಬಳಕೆಯ ಎಲ್ಪಿಜಿ ಬೆಲೆಗಳು ಹೆಚ್ಚಾಗುತ್ತವೆ. ಸಬ್ಸಿಡಿ ಅಸ್ತಿತ್ವದಲ್ಲಿರುವ ಸಂಚಿತ ನಷ್ಟಗಳಲ್ಲಿ ಕೇವಲ ಶೇಕಡಾ 56ರಷ್ಟು ಮಾತ್ರವೇ ಭರಿಸಲಿದ್ದು, ಸಬ್ಸಿಡಿ ಬೆಂಬಲದೊಂದಿಗೆ ಕಂಪನಿಗಳಿಗೆ ಹಣಕಾಸಿನ ಅಂತರವು ಹೆಚ್ಚಾಗುವ ಸಾಧ್ಯತೆಯಿದೆ. ಎಲ್ಪಿಜಿ ಕಡಿಮೆ ಚೇತರಿಕೆ ಎಂದರೆ ಅದನ್ನು ಆಮದು ಮಾಡಿಕೊಳ್ಳುವ ಅಥವಾ ಸೋರ್ಸಿಂಗ್ ಮಾಡುವ ವೆಚ್ಚವು ಗ್ರಾಹಕರಿಗೆ ಲಭ್ಯವಿರುವ ಚಿಲ್ಲರೆ ಬೆಲೆಗಿಂತ ಹೆಚ್ಚಾದಾಗ ಉಂಟಾಗುವ ನಷ್ಟವಾಗಿದೆ. ಈ ನಷ್ಟ ಸರಿದೂಗಿಸಲು ಎಲ್ಪಿಜಿ ದರಗಳನ್ನು ಕೊಂಚ ಏರಿಸಬಹುದು ಎಂದು ವರದಿಯಾಗಿದೆ.
-
ದೇಶದ ಆದ್ಯತೆ ವಲಯಗಳಿಗೆ ಅನಿಲ ಪೂರೈಕೆಗೆ ರಿಲಯನ್ಸ್ ನಿಂದ ಗರಿಷ್ಠ ಉತ್ಪಾದನೆ -
ಹೋಟೆಲ್ ಬಂದ್ ಭೀತಿ, ಬೆಂಗಳೂರು ಸೇರಿ ಹಲವು ನಗರಗಳಲ್ಲಿ ಗ್ಯಾಸ್ ಇಲ್ಲದೆ ಪರದಾಟ... LPG Shortage -
ದೇಶದಲ್ಲಿ ನಿಜಕ್ಕೂ ಎಲ್ಪಿಜಿ ಕೊರತೆ ಇದೆಯೇ, ಗಾಬರಿ ಬೇಡ: ಕೃಷ್ಣ ಭಟ್ ಬರಹ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
LPG ಪೂರೈಕೆ ವ್ಯತ್ಯಯ: ಬೆಂಗಳೂರಿನ ಪಿಜಿಗಳಲ್ಲೂ ಆಹಾರ ಪೂರೈಕೆ ಸ್ಥಗಿತದ ಭೀತಿ, ಆತಂಕದಲ್ಲಿ 10 ಲಕ್ಷ ಮಂದಿ -
ಹುಬ್ಬಳ್ಳಿಗೂ ತಟ್ಟಿದ ಯುದ್ಧದ ಬಿಸಿ; ಗ್ಯಾಸ್ ಇಲ್ಲದೆ ಮಂಗಳವಾರ ರಾತ್ರಿಯಿಂದಲೇ ಹೋಟೆಲ್ಗಳು ಬಂದ್ ಸಾಧ್ಯತೆ -
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications