16ರ ಲೋಕಸಭೆಯಲ್ಲಿ ಅತ್ಯಂತ ಕಿರಿಯ ಸಂಸದ ಯಾರು?
ನವದೆಹಲಿ, ಮೇ 17: ಭಾರತದ ಲೋಕಸಭೆಗೆ ಈಗ ಹದಿನಾರರ ಹರಯ. ಹಾಗಾದರೆ 16ರ ಲೋಕಸಭೆಗೆ ನಿನ್ನೆ ಆಯ್ಕೆಯಾದ ಅತಿ ಕಿರಿಯ ವಯಸ್ಸಿನ ಜನನಾಯಕ ಯಾರು ಎಂಬ ಕುತೂಹಲದ ಪ್ರಶ್ನೆಗೆ ಉತ್ತರ ಇಲ್ಲಿದೆ. ಈ ಮಧ್ಯೆ ಅತಿ ಹಿರಿಯ ನಾಯಕರು 82 ವರ್ಷದ ನಮ್ಮ ಎಚ್ ಡಿ ದೇವೇಗೌಡರು ಇರಬಹುದಾ?
ಅದಿರಲಿ ಹರಿಯಾಣಾದ ದುಷ್ಯಂತ್ ಚೌತಾಲಾ ಎಂಬ ಯುವಕ ಅತ್ಯಂತ ಕಿರಿಯ ಸಂಸದರಾಗಿ ಹೊರಹೊಮ್ಮಿದ್ದಾರೆ. ಈತನ ವಯಸ್ಸು ಕೇವಲ 26 ವರ್ಷ 1 ತಿಂಗಳು. ಅತ್ಯಂತ ಕಿರಿಯ ಸಂಸದ ದುಷ್ಯಂತ್ ಚೌತಾಲಾ ಅವರು ಪ್ರತಿನಿಧಿಸುತ್ತಿರುವ ಪಕ್ಷ ಇಂಡಿಯನ್ ನ್ಯಾಷನಲ್ ಲೋಕದಳ. ಕ್ಯಾಲಿಫೋರ್ನಿಯಾದ ಬೇಕರ್ಸ್ ಫೀಲ್ಡ್ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿದ್ದಾರೆ.
ದುಷ್ಯಂತ್ ಚೌತಾಲಾ ಅವರ ತಾತ ಓಂ ಪ್ರಕಾಶ್ ಚೌತಾಲಾ ಮತ್ತು ತಂದೆ ಅಯಜ್ ಚೌತಾಲಾ. ಮಾಜಿ ಉಪ ಪ್ರಧಾನಿ ದೇವಿ ಲಾಲರ ಮರಿಮೊಮ್ಮಗ. ಶಿಕ್ಷಕರ ನೇಮಕಾತಿ ಭ್ರಷ್ಟಾಚಾರ ಪ್ರಕರಣದಲ್ಲಿ ದುಷ್ಯಂತರ ತಾತ ಮತ್ತು ಅಪ್ಪ ಇಬ್ಬರಿಗೂ ಸಿಬಿಐ ಕೋರ್ಟ್ ಕಳೆದ ವರ್ಷ ಜೈಲು ಶಿಕ್ಷೆ ವಿಧಿಸಿದೆ. (ಲಂಚ: ಮಾಜಿ ಸಿಎಂ ಚೌತಾಲಾಗೆ 10 ವರ್ಷ ಜೈಲು)

ದುಷ್ಯಂತ್, ಹಿಸ್ಸಾರ್ ಲೋಕಸಭಾ ಕ್ಷೇತ್ರದಿಂದ ಆರಿಸಿಬಂದಿದ್ದಾರೆ. ಇಡೀ ದೇಶದಲ್ಲಿ ಮೋದಿ ಹವಾ ಬೀಸುತ್ತಿರುವಾಗ ಅದರ ವಿರುದ್ಧ ಈಜಿ ದುಷ್ಯಂತ್ ಚೌತಾಲಾ ಯಶಸ್ವಿಯಾಗಿ ಆಯ್ಕೆಯಾಗಿದ್ದಾರೆ. ಇವರು ಹರಿಯಾಣಾದ ಜನಹಿತ ಕಾಂಗ್ರೆಸ್ ಪಕ್ಷದ ಹಾಲಿ ಸಂಸದ ಕುಲದೀಪ್ ಸಿಂಗ್ ಬಿಶ್ನೋಯಿ ಅವರನ್ನು 31,847 ಮತಗಳಿಂದ ಮಣಿಸಿದ್ದಾರೆ.
ಅಂದಹಾಗೆ ಹಿಂದಿನ ಲೋಕಸಭೆಯಲ್ಲಿ ಲಕ್ಷದ್ವೀಪದ ಮೊಹಮದ್ ಹಮದುಲ್ಲಾ ಸಯೀದ್ ಅವರು ಅತ್ಯಂತ ಕಿರಿಯ ವಯಸ್ಸಿನ ಸಂಸದರಾಗಿದ್ದರು. ಕಾಂಗ್ರೆಸ್ಸಿನ ಮೊಹಮದ್ ಹಮದುಲ್ಲಾ ಸಯೀದ್ ಅವರಿಗೆ ಆಗ 27 ವರ್ಷ 1 ತಿಂಗಳಾಗಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications