ಲಖನೌನ ಕಟ್ಟಡದಲ್ಲಿ ಅಡಗಿದ್ದ ಶಂಕಿತ ಐಸಿಸ್ ಉಗ್ರನ ಹತ್ಯೆ
ಲಖನೌ, ಮಾರ್ಚ್ 08 : ಉತ್ತರಪ್ರದೇಶದ ಲಖನೌನ ಕಟ್ಟಡವೊಂದರಲ್ಲಿ ಅಡಗಿ ಕುಳಿತು, ಯದ್ವಾತದ್ವಾ ಗುಂಡು ಹಾರಿಸುತ್ತಿದ್ದ ಶಂಕಿತ ಉಗ್ರ ಸೈಫುಲ್ಲಾನನ್ನು ಬುಧವಾರ ಬೆಳಗಿನ ಜಾವ ಹತ್ಯೆಗೈಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಧ್ಯಪ್ರದೇಶದಲ್ಲಿ ಮಂಗಳವಾರ ಭೋಪಾಲ್-ಉಜ್ಜಯಿನಿ ರೈಲಿನಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟದ ಹಿಂದೆ, ಐಸಿಸ್ ಸದಸ್ಯನಾಗಿರುವನೆನ್ನಲಾದ ಸೈಫುಲ್ಲಾನ ಕೈವಾಡವಿದೆ ಎಂದು ಪೊಲೀಸರು ಹೇಳಿದ್ದಾರೆ.
ಅಡಗಿದ್ದ ಸೈಫುಲ್ಲಾ ಮೇಲೆ ಗುಂಡು ಹಾರಿಸುವುದನ್ನು ನಿಲ್ಲಿಸಿ ಶರಣಾಗಬೇಕೆಂದು ಪೊಲೀಸರು ಆಗ್ರಹಿಸಿದ್ದರು. ಇದಕ್ಕೆ ಪ್ರತಿಯಾಗಿ, ನಾನು ಶರಣಾಗುವುದಿಲ್ಲ. ಆದರೆ, ಸಾವನ್ನಪ್ಪಲು ಇಚ್ಛಿಸುತ್ತೇನೆ ಎಂದು ಸೈಫುಲ್ಲಾ ಹೇಳಿದ್ದ.

ಇಷ್ಟಾದರೂ ಶರಣಾಗಲು ಇಚ್ಛಿಸದ ಆತನ ಮೇಲೆ ಚಿಲ್ಲಿ ಬಾಂಬ್ ಎಸೆಯಲಾಗಿತ್ತು. ಆತ ಪೊಲೀಸರ ಮೇಲೆ ಗುಂಡು ಹಾರಿಸುತ್ತಲೇ ಇದ್ದ. ಪೊಲೀಸರು ನಂತರ ಅನಿವಾರ್ಯವಾಗಿ ಆತನನ್ನು ಹತ್ಯೆಗೈಯಲೇಬೇಕಾಯಿತು.
ಆತ ಮಾಡುತ್ತಿದ್ದ ಕರೆಗಳ ಆಧಾರದ ಮೇಲೆ ಆತನ ಚಲನವಲನದ ಮೇಲೆ ನಿಗಾ ಇಡಲಾಗಿತ್ತು. ಸೈಫುಲ್ಲಾ ದಕ್ಷಿಣ ಭಾರತದಲ್ಲಿರುವ ಇನ್ನೊಬ್ಬ ಐಸಿಸ್ ಸದಸ್ಯನಿಗೆ ಕರೆ ಮಾಡಿದ್ದರಿಂದ ಆತ ಐಸಿಸ್ ಸದಸ್ಯ ಎಂಬುದು ಖಚಿತವಾಗಿತ್ತು.
ಮಧ್ಯಪ್ರದೇಶದಲ್ಲಿ ರೈಲಿನಲ್ಲಿ ಸ್ಫೋಟ ಸಂಭವಿಸಿದ ಕೂಡಲೆ ಆತ ಇನ್ನೊಬ್ಬನಿಗೆ ಕರೆ ಮಾಡಿ ಇದರ ಬಗ್ಗೆ ಮಾತನಾಡಿದ್ದ. ಈ ಘಟನೆಯ ಹಿಂದೆ ಸಿಮಿಯ ಕೈವಾಡವಿರುವುದರ ಬಗ್ಗೆ ಕೂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications