ಲಖನೌನ ಕಟ್ಟಡದಲ್ಲಿ ಅಡಗಿದ್ದ ಶಂಕಿತ ಐಸಿಸ್ ಉಗ್ರನ ಹತ್ಯೆ
ಲಖನೌ, ಮಾರ್ಚ್ 08 : ಉತ್ತರಪ್ರದೇಶದ ಲಖನೌನ ಕಟ್ಟಡವೊಂದರಲ್ಲಿ ಅಡಗಿ ಕುಳಿತು, ಯದ್ವಾತದ್ವಾ ಗುಂಡು ಹಾರಿಸುತ್ತಿದ್ದ ಶಂಕಿತ ಉಗ್ರ ಸೈಫುಲ್ಲಾನನ್ನು ಬುಧವಾರ ಬೆಳಗಿನ ಜಾವ ಹತ್ಯೆಗೈಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಧ್ಯಪ್ರದೇಶದಲ್ಲಿ ಮಂಗಳವಾರ ಭೋಪಾಲ್-ಉಜ್ಜಯಿನಿ ರೈಲಿನಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟದ ಹಿಂದೆ, ಐಸಿಸ್ ಸದಸ್ಯನಾಗಿರುವನೆನ್ನಲಾದ ಸೈಫುಲ್ಲಾನ ಕೈವಾಡವಿದೆ ಎಂದು ಪೊಲೀಸರು ಹೇಳಿದ್ದಾರೆ.
ಅಡಗಿದ್ದ ಸೈಫುಲ್ಲಾ ಮೇಲೆ ಗುಂಡು ಹಾರಿಸುವುದನ್ನು ನಿಲ್ಲಿಸಿ ಶರಣಾಗಬೇಕೆಂದು ಪೊಲೀಸರು ಆಗ್ರಹಿಸಿದ್ದರು. ಇದಕ್ಕೆ ಪ್ರತಿಯಾಗಿ, ನಾನು ಶರಣಾಗುವುದಿಲ್ಲ. ಆದರೆ, ಸಾವನ್ನಪ್ಪಲು ಇಚ್ಛಿಸುತ್ತೇನೆ ಎಂದು ಸೈಫುಲ್ಲಾ ಹೇಳಿದ್ದ.

ಇಷ್ಟಾದರೂ ಶರಣಾಗಲು ಇಚ್ಛಿಸದ ಆತನ ಮೇಲೆ ಚಿಲ್ಲಿ ಬಾಂಬ್ ಎಸೆಯಲಾಗಿತ್ತು. ಆತ ಪೊಲೀಸರ ಮೇಲೆ ಗುಂಡು ಹಾರಿಸುತ್ತಲೇ ಇದ್ದ. ಪೊಲೀಸರು ನಂತರ ಅನಿವಾರ್ಯವಾಗಿ ಆತನನ್ನು ಹತ್ಯೆಗೈಯಲೇಬೇಕಾಯಿತು.
ಆತ ಮಾಡುತ್ತಿದ್ದ ಕರೆಗಳ ಆಧಾರದ ಮೇಲೆ ಆತನ ಚಲನವಲನದ ಮೇಲೆ ನಿಗಾ ಇಡಲಾಗಿತ್ತು. ಸೈಫುಲ್ಲಾ ದಕ್ಷಿಣ ಭಾರತದಲ್ಲಿರುವ ಇನ್ನೊಬ್ಬ ಐಸಿಸ್ ಸದಸ್ಯನಿಗೆ ಕರೆ ಮಾಡಿದ್ದರಿಂದ ಆತ ಐಸಿಸ್ ಸದಸ್ಯ ಎಂಬುದು ಖಚಿತವಾಗಿತ್ತು.
ಮಧ್ಯಪ್ರದೇಶದಲ್ಲಿ ರೈಲಿನಲ್ಲಿ ಸ್ಫೋಟ ಸಂಭವಿಸಿದ ಕೂಡಲೆ ಆತ ಇನ್ನೊಬ್ಬನಿಗೆ ಕರೆ ಮಾಡಿ ಇದರ ಬಗ್ಗೆ ಮಾತನಾಡಿದ್ದ. ಈ ಘಟನೆಯ ಹಿಂದೆ ಸಿಮಿಯ ಕೈವಾಡವಿರುವುದರ ಬಗ್ಗೆ ಕೂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications