ಮಚಿಲ್ ದುರಂತ : ಹುತಾತ್ಮರಾದ ಐವರು ಸೈನಿಕರು
ಜಮ್ಮು, ಜನವರಿ 30: ಹಿಮದಲ್ಲಿ ಸಿಲುಕಿ, ಆ ನಂತರ ರಕ್ಷಿಸಿದ್ದ ಐವರು ಸೈನಿಕರು ಮೃತಪಟ್ಟಿದ್ದಾರೆ. ಜಮ್ಮು-ಕಾಶ್ಮೀರದ ಮಚಿಲ್ ವಲಯದಲ್ಲಿ ಶನಿವಾರ ಹಿಮದಲ್ಲಿ ಸಿಲುಕಿದ ಸೈನಿಕರ ರಕ್ಷಣೆ ಮಾಡಲಾಗಿತ್ತು. ಶ್ರೀನಗರದ ಆಸ್ಪತ್ರೆಯಲ್ಲಿ ಅವರನ್ನು ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು.
ರಾಷ್ಟ್ರೀಯ ರೈಫಲ್ಸ್ ಗೆ ಸೇರಿದ ಈ ಐವರು ಸೈನಿಕರು ಗಡಿಯಲ್ಲಿ ಉಗ್ರರು ಒಳನುಸುಳದಂತೆ ನೋಡಿಕೊಳ್ಳುವ ಕರ್ತವ್ಯದಲ್ಲಿದ್ದರು. ಅ ವೇಳೆ ಹಿಮಕುಸಿತವಾಗಿ ಸಿಲುಕಿಕೊಂಡಿದ್ದರು. ಆ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಕಳೆದ ವಾರ ಜಮ್ಮು-ಕಾಶ್ಮೀರದಲ್ಲಿ ಭರೀ ಹಿಮಪಾತವಾಗಿತ್ತು. ಹಿರಿಯ ಅಧಿಕಾರಿಗಳು ಈ ಬಗ್ಗೆ ಎಚ್ಚರಿಕೆ ನೀಡಿದ್ದರು.[ಶ್ರೀನಗರದ ಕುಪ್ವಾರದಲ್ಲಿ ಹಿಮದಲ್ಲಿ ಸಿಲುಕಿಕೊಂಡ ಐವರು ಸೈನಿಕರು]

ವಿದ್ಯುತ್ ಹಾಗೂ ಫೋನ್ ಸಂಪರ್ಕ ಹಲವೆಡೆ ಕಡಿತವಾಗಿತ್ತು. ಕೆಲವು ಅಪಾಯಕಾರಿ ಪ್ರದೇಶಗಳಿಂದ ಜನರನ್ನು ಸ್ಥಳಾಂತರ ಮಾಡಲಾಗಿತ್ತು. ಕಳೆದ ಬುಧವಾರ ಗುರುಜ್ ವಲಯ ಮತ್ತು ಸೋನ್ ಮಾರ್ಗ್ ನಲ್ಲಿ ಸಂಭವಿಸಿದ ಅವಘಡದಲ್ಲಿ ಹದಿಮೈದು ಸೈನಿಕರು ಹಾಗೂ ಐವರು ನಾಗರಿಕರು ಮೃತಪಟ್ಟಿದ್ದರು.
ಹವಾಮಾನ ವೈಪರೀತ್ಯದ ಮಧ್ಯೆಯೂ ಕಳೆದ ಶನಿವಾರ ರಕ್ಷಣಾ ತಂಡಗಳು ಆರು ಸೈನಿಕರನ್ನು ರಕ್ಷಿಸಿ, ಸುರಕ್ಷಿತ ಪ್ರದೇಶಗಳಿಗೆ ಕರೆದೊಯ್ಯುವಲ್ಲಿ ಸಫಲವಾಗಿದ್ದವು. ಮೂವರು ಸೈನಿಕರ ಶವ ಪತ್ತೆಯಾಗಿದ್ದವು. ಮತ್ತೊಂದು ಅವಘಡದಲ್ಲಿ ಅದೇ ಪ್ರದೇಶದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದರು.[ಹಿಮ ಕುಸಿತ: ಇನ್ನೂ ನಾಲ್ವರು ಸೈನಿಕರ ಶವ ಪತ್ತೆ]

ಸೋನ್ ಮಾರ್ಗ್ ನಲ್ಲಿ ಸೇನಾ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ. ಬಾರಾಮುಲ್ಲಾದ ಉರಿ ವಲಯದಲ್ಲಿ ಅರವತ್ತು ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಆ ವ್ಯಕ್ತಿಯನ್ನು ಹಿಮಪಾತದಿಂದ ರಕ್ಷಿಸಿ, ಆಸ್ಪತ್ರೆಗೆ ಕರೆದೊಯ್ದರೂ ಆತ ಬದುಕಲಿಲ್ಲ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications