Middle Class : ಮೇಡಂ, ಸ್ವಲ್ಪ ಮಧ್ಯಮ ವರ್ಗದವರನ್ನೂ ನೋಡಿ ಪ್ಲೀಸ್ ಟ್ವೀಟ್: ನಿರ್ಮಲಾ ಸೀತಾರಾಮನ್ ಹೇಳಿದ್ದೇನು
ದೇಶದಲ್ಲಿ ಬೆಲೆ ಏರಿಕೆ ಮಿತಿ ಮೀರಿದೆ. ಅಗತ್ಯ ಹಾಗೂ ಸಣ್ಣ ಸಣ್ಣ ವಸ್ತುಗಳ ಮೇಲೆಯೂ ಕೇಂದ್ರ ಸರ್ಕಾರ ಟ್ಯಾಕ್ಸ್ ಹಾಕುತ್ತಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದವರಿಗೆ ಜೀವನ ಸಾಗಿಸಲು ಕಷ್ಟವಾಗುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಲ್ಲೇ ಇದೆ. ಇದೀಗ ಈ ಬಗ್ಗೆ ನೆಟ್ಟಿಗರೊಬ್ಬರು ನಿರ್ಮಲಾ ಸೀತಾರಾಮನ್ ಅವರಿಗೆ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪ್ರಶ್ನೆ ಮಾಡಿದ್ದು, ಮೇಡಂ ಪ್ಲೀಸ್ ಸ್ವಲ್ಪ ಮಧ್ಯಮ ವರ್ಗದವರನ್ನೂ ನೋಡಿ ಎಂದಿದ್ದಾರೆ. ಇದಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಹ ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದಾರೆ. ನೆಟ್ಟಿಗರ ಟ್ವೀಟ್ಗೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ...
ನಿರ್ಮಲಾ ಸೀತಾರಾಮನ್ ಅವರು ಟ್ಯಾಕ್ಸ್ ಚರ್ಚೆ ಹಾಗೂ ಟ್ಯಾಕ್ಸ್ ವಿವರಣೆಯ ವಿಚಾರದಲ್ಲಿ ಸದಾ ಸುದ್ದಿಯಲ್ಲಿ ಇರುತ್ತಾರೆ. ಕೆಲವೊಮ್ಮೆ ಅವರ ಹೇಳಿಕೆ, ಮಾತುಗಳು ಭಾರೀ ಟ್ರೋಲ್ ಆಗಿದ್ದೂ ಸಹ ಇದೆ. ಆದರೆ, ಇದೀಗ ನಿರ್ಮಲಾ ಸೀತಾರಾಮನ್ ಅವರು ಹೇಳಿರುವ ಮಾತು ಮಧ್ಯಮ ವರ್ಗದವರಲ್ಲಿ ಹೊಸ ನಿರೀಕ್ಷೆಯನ್ನು ಹಾಗೂ ತೆರಿಗೆ ಭಾರ ಇಳಿಕೆಯಾಗುವ ಆಸೆ ಹುಟ್ಟಿಕೊಂಡಿದೆ.

ಕಳೆದ ಕೆಲವು ವರ್ಷಗಳಿಂದ ಮಧ್ಯಮ ವರ್ಗದವರಿಗೆ ತೆರಿಗೆ ಭಾರ ಹೆಚ್ಚಾಗ್ತಿದೆ. ಆದಾಯಕ್ಕೂ ಆಗುವ ಖರ್ಚಿಗೂ ಒಂದಕ್ಕೊಂದು ಸಂಬಂಧವಿಲ್ಲ. ದುಡಿಯುವುದಕ್ಕಿಂತ ಖರ್ಚಾಗುವುದೇ ಜಾಸ್ತಿ ಎನ್ನುವ ದುಃಖವನ್ನು ಮಧ್ಯಮ ವರ್ಗದವರು ತೋಡಿಕೊಳ್ಳುತ್ತಲ್ಲೇ ಇದ್ದಾರೆ. ದೇಶದ ಮಧ್ಯಮ ವರ್ಗದವರ ಪರವಾಗಿ ವ್ಯಕ್ತಿಯೊಬ್ಬರು ನಿರ್ಮಲಾ ಸೀತಾರಾಮನ್ ಅವರನ್ನು ನಯವಾಗಿ ಪ್ರಶ್ನೆ ಮಾಡಿದ್ದಾರೆ.
ತುಷಾರ್ ಶರ್ಮಾ ಎನ್ನುವವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಪೋಸ್ಟ್ ವಿವರ ಈ ರೀತಿ ಇದೆ. ನಿರ್ಮಲಾ ಸೀತಾರಾಮನ್ ಮೇಡಂ, ದೇಶಕ್ಕೆ ನೀವು ನೀಡುತ್ತಿರುವ ಕೊಡುಗೆ ಹಾಗೂ ನಿಮ್ಮ ಪ್ರಯತ್ನವನ್ನು ನಾವು ಪ್ರಶಂಸಿಸುತ್ತೇವೆ. ನೀವು ಸದಾ ನಮ್ಮ ಮೆಚ್ಚುಗೆಯನ್ನು ಹೊಂದಿದ್ದೀರಿ. ಆದರೆ, ಮಧ್ಯಮ ವರ್ಗದವರಿಗೂ ಒಂದಿಷ್ಟು ಪರಿಹಾರ ನೀಡುವ ಬಗ್ಗೆ ಯೋಚಿಸಿ. ಇದು ನನ್ನ ವಿನಮ್ರ ವಿನಂತಿಯಾಗಿದೆ. ಭಾರತವು ಎದುರಿಸುತ್ತಿರುವ ಅಪಾರ ಸವಾಲುಗಳನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಆದರೆ, ಇದು ಕೇವಲ ನನ್ನ ಸವಿನಯ ಮನವಿಯಾಗಿದೆ ಎಂದಿದ್ದಾರೆ.
ನಿರ್ಮಲಾ ಸೀತಾರಾಮನ್ ಟ್ವೀಟ್: ಈ ಟ್ವೀಟ್ಗೆ ನಿರ್ಮಲಾ ಅವರು ಸಹ ಅಷ್ಟೇ ತಾಳ್ಮೆಯಿಂದಲೇ ಪ್ರತಿಕ್ರಿಯಿಸಿದ್ದಾರೆ. ನಿಮ್ಮ ಮಾತು ಮತ್ತು ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದಕ್ಕೆ ಧನ್ಯವಾದಗಳು. ನೀವು ಹೇಳಿರುವ (ಎತ್ತಿರುವ) ಸಮಸ್ಯೆಗಳನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ಜನರಿಗೆ ಸ್ಪಂದಿಸುವ ಸರ್ಕಾರವಾಗಿದೆ.
ಜನರ ಧ್ವನಿಯನ್ನು ಕೇಳಿ, ಪರಿಹಾರ ನೀಡುತ್ತಿದ್ದೇವೆ. ಈಗಿಮ ಪರಿಸ್ಥಿತಿ ಅರ್ಥ ಮಾಡಿಕೊಂಡಿದ್ದಕ್ಕೆ ನಿಮಗೆ ಮತ್ತೊಮ್ಮೆ ಧನ್ಯವಾದ. ನೀವು ಕೊಟ್ಟಿರುವ ಮಾಹಿತಿಯು ಅತ್ಯಂತ ಅತ್ಯಮೂಲ್ಯವಾಗಿದೆ ಎಂದು ಹೇಳಿದ್ದಾರೆ.
Thank you for your kind words and your understanding. I recognise and appreciate your concern.
— Nirmala Sitharaman (@nsitharaman) November 17, 2024
PM @narendramodi ‘s government is a responsive government. Listens and attends to people’s voices. Thanks once again for your understanding. Your input is valuable. https://t.co/0C2wzaQtYx
ಈ ಮೂಲಕ ಮಧ್ಯಮ ವರ್ಗದವರ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಅರಿವಿದ್ದು. ಮುಂದಿನ ದಿನಗಳಲ್ಲಿ ಮಧ್ಯಮ ವರ್ಗದವರಿಗೆ ರಿಲೀಫ್ ಸಿಗಬಹುದು ಎಂದು ನಿರೀಕ್ಷೆ ಮಾಡಲಾಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications