ಮಧ್ಯಪ್ರದೇಶ: ಬೆಂಕಿ ಚೆಂಡು ಎಸೆತ ಆಚರಣೆ ವೇಳೆ 30 ಮಂದಿಗೆ ಗಾಯ
ಭೋಪಾಲ್, ಅ. 27: ಮಧ್ಯಪ್ರದೇಶದ ಇಂದೋರ್ನ ದೇಪಾಲ್ಪುರದ ಗೌತಮಪುರ ಗ್ರಾಮದಲ್ಲಿ ಬುಧವಾರ ಸಾಂಪ್ರದಾಯಿಕ ಬೆಂಕಿ ಚೆಂಡು (ಹಿಂಗೋಟ್ ವಾರ್) ಉತ್ಸವವನ್ನು ಆಚರಿಸುವಾಗ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜೊತೆಗೆ ಇತರ 23 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಕಿ ಚೆಂಡು ಆಚರಣೆಯು ಶತಮಾನಗಳ ಹಿಂದಿನ ಸಂಪ್ರದಾಯವಾಗಿದ್ದು, ಇದನ್ನು ಪ್ರತಿ ವರ್ಷ ದೀಪಾವಳಿಯ ಎರಡನೇ ದಿನದಂದು ಆಚರಿಸಲಾಗುತ್ತದೆ. ಈ ಬಾರಿ ದೀಪಗಳ ಹಬ್ಬದ ಮೂರನೇ ದಿನದಂದು ಹಳೆಯ ಸಂಪ್ರದಾಯವನ್ನು ಅನುಸರಿಸಲಾಗಿದೆ.
ಇಂದೋರ್ ಜಿಲ್ಲಾ ಕೇಂದ್ರದಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಗೌತಮಪುರ ಗ್ರಾಮದಲ್ಲಿ ಈ ಆಚರಣೆ ನಡೆಯುತ್ತದೆ. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ವರ್ಷಗಳಿಂದ ಈ ಸಂಪ್ರದಾಯವನ್ನು ಆಚರಿಸಿರಲಿಲ್ಲ.

"ಹಿಂಗೋಟ್ ಯುದ್ಧದ ಉತ್ಸವವನ್ನು ಆಯೋಜಿಸಲು ಜಿಲ್ಲಾಡಳಿತದಿಂದ ಪೊಲೀಸ್ ಪಡೆ, ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ಗಳನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಸಹ ಅಳವಡಿಸಲಾಗಿದೆ. ಉತ್ಸವವನ್ನು ನೋಡಲು ಸುಮಾರು ಸಾವಿರಾರು ಜನರು ಅಲ್ಲಿಗೆ ಭೇಟಿ ನೀಡುತ್ತಾರೆ, ಇದಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ವೀಕ್ಷಕರ ಸುರಕ್ಷತೆಗಾಗಿ ಎಲ್ಲಾ ಕಡೆಯಿಂದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ" ಎಂದು ದೇಪಾಲ್ಪುರ ಎಸ್ಡಿಎಂ ರವಿ ಕುಮಾರ್ ಹೇಳಿದ್ದರು.
ಹಿಂಗೋಟ್ ಒಂದು ಹಣ್ಣಾಗಿದ್ದು, ಅದನ್ನು ಕಿತ್ತು ಒಣಗಿಸಿ, ನಂತರ ಅದರಲ್ಲಿ ಗನ್ಪೌಡರ್ ತುಂಬಿಸಿ ಮರಕ್ಕೆ ಕಟ್ಟಲಾಗುತ್ತದೆ. ನಂತರ ಉತ್ಸವದ ಸಂಪ್ರದಾಯದ ಅಂಗವಾಗಿ ಅದನ್ನು ಬಳಸಲಾಗುತ್ತದೆ.

ಬುಧವಾರ ಸಂಜೆ ತುರ್ರಾ ಮತ್ತು ಕಲ್ಗಿ ಎಂಬ ಎರಡು ಗುಂಪುಗಳ 150 ಜನರು ಬೆಂಕಿ ಚೆಂಡು ಎಸೆತ ಉತ್ಸವದಲ್ಲಿ ಭಾಗವಹಿಸಿದ್ದರು. ಅವರು ಪರಸ್ಪರ ಹಿಂಗೋಟ್ ಅನ್ನು ಎಸೆದಾಡಿದ್ದಾರೆ. ಇದರಲ್ಲಿ ಏಳು ಜನರಿಗೆ ಗಂಭೀರ ಗಾಯಗಳಾಗಿವೆ, 23 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications