Get Updates
Get notified of breaking news, exclusive insights, and must-see stories!

ಪ್ರಿಯಾಂಕಾ ಗಾಂಧಿ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಮಧ್ಯಪ್ರದೇಶ ಬಿಜೆಪಿ

ಭೋಪಾಲ್‌, ಆಗಸ್ಟ್ 12: ಮಧ್ಯಪ್ರದೇಶದ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದರ ವಿರುದ್ಧ ಭಾರತೀಯ ಜನತಾ ಪಕ್ಷದ ನಾಯಕರು ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರ ಆರೋಪವನ್ನು ಸುಳ್ಳು ಎಂದು ಹೇಳಿದ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ತಮ್ಮ ಆರೋಪ ಕುರಿತು ಕಾಂಗ್ರೆಸ್ ನಾಯಕರು ಪುರಾವೆ ಒದಗಿಸಬೇಕು. ಇಲ್ಲದಿದ್ದರೆ ರಾಜ್ಯ ಸರ್ಕಾರ ಮತ್ತು ಬಿಜೆಪಿಯು ಅವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುತ್ತದೆ ಎಂದು ಎಚ್ಚರಿಸಿದರು.

madhya-pradesh-bjp-warns

ಪ್ರಿಯಾಂಕಾ ಗಾಂಧಿ ಅವರು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ನಕಲಿ ಪತ್ರವನ್ನು ಉಲ್ಲೇಖಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ವಿ ಡಿ ಶರ್ಮಾ ಅವರು ಕಾಂಗ್ರೆಸ್ ನಾಯಕಿ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು. ಆದಾಗ್ಯೂ, ಬಿಜೆಪಿ ನೇತೃತ್ವದ ಸರ್ಕಾರವು ಭ್ರಷ್ಟವಾಗಿದೆ ಎಂದು ಸಾಬೀತುಪಡಿಸುತ್ತದೆ. ಆಡಳಿತರೂಢ ಪಕ್ಷವು ರಾಜಕೀಯ ಭಯೋತ್ಪಾದನೆಯನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದೆ.

ಮಧ್ಯಪ್ರದೇಶದ ಗುತ್ತಿಗೆದಾರರ ಒಕ್ಕೂಟವು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದು, 50% ಕಮಿಷನ್ ಪಾವತಿಸಿದ ನಂತರವೇ ಪಾವತಿಯನ್ನು ಪಡೆಯುಬೇಕಿದೆ ಎಂದು ದೂರಿದೆ ಎಂದು ಟ್ವಿಟರ್‌ನಲ್ಲಿ ಪ್ರಿಯಾಂಕಾ ಗಾಂಧಿ ಹೇಳಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರ 40% ಕಮಿಷನ್ ಸಂಗ್ರಹಿಸುತ್ತಿತ್ತು, ಮಧ್ಯಪ್ರದೇಶದಲ್ಲಿ ಬಿಜೆಪಿ ಭ್ರಷ್ಟಾಚಾರದ ತನ್ನದೇ ದಾಖಲೆಯನ್ನು ಮುರಿದು ಮುನ್ನಡೆದಿದೆ, 40% ಕಮಿಷನ್ ಸರ್ಕಾರವನ್ನು ಕರ್ನಾಟಕದ ಜನರು ಕಿತ್ತೊಗೆದರು, ಈಗ ಮಧ್ಯಪ್ರದೇಶದ ಜನರು 50% ಕಮಿಷನ್ ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕುತ್ತಾರೆ ಎಂದು ಅವರು ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮಿಶ್ರಾ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಯಾವುದೇ ಸಮಸ್ಯೆಯಿಲ್ಲದೆ ಅಸಹ್ಯಕರ ಮನಸ್ಥಿತಿಯೊಂದಿಗೆ ರಾಜಕೀಯ ಮಾಡುತ್ತಿದೆ. ರಾಜ್ಯ ಕಾಂಗ್ರೆಸ್ ನಾಯಕರು ಮೊದಲು ರಾಹುಲ್ ಗಾಂಧಿಯನ್ನು ಸುಳ್ಳು ಹೇಳುವಂತೆ ಮಾಡಿದರು ಮತ್ತು ಈಗ ಪ್ರಿಯಾಂಕಾ ಗಾಂಧಿಯನ್ನು ಸುಳ್ಳು ಟ್ವೀಟ್ ಮಾಡುವಂತೆ ಮಾಡಿದ್ದಾರೆ. ಪ್ರಿಯಾಂಕಾ ಜೀ, ನಿಮ್ಮ ಟ್ವೀಟ್‌ಗಳಿಗೆ ಪುರಾವೆ ನೀಡಿ, ಇಲ್ಲದಿದ್ದರೆ ಕ್ರಮಕ್ಕೆ ನಮಗೆ ಎಲ್ಲಾ ಆಯ್ಕೆಗಳಿವೆ ಎಂದು ಸಚಿವರು ಎಚ್ಚರಿಸಿದರು.

ಪ್ರಿಯಾಂಕಾ ಗಾಂಧಿ ಅವರು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಉಲ್ಲೇಖಿಸಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದ ವ್ಯಕ್ತಿ ಅಥವಾ ಗುತ್ತಿಗೆದಾರರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಅವರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಮುಖ್ಯಸ್ಥ ಶರ್ಮಾ, ಕಾಂಗ್ರೆಸ್ ಅಧಿಕಾರದ ದಾಹದಿಂದ ಕೂಡಿದೆ ಮತ್ತು ಸುಳ್ಳುಗಳನ್ನು ಹೇಳುವ ಮೂಲಕ ಚುಕ್ಕಾಣಿ ಹಿಡಿಯಲು ಹತಾಶವಾಗಿದೆ ಎಂದು ಆರೋಪಿಸಿದರು.

ಇದೊಂದು ಪಿತೂರಿಯಾಗಿದ್ದು, ಈ ಟ್ವೀಟ್‌ಗೆ ಸೈಬರ್ ಕ್ರೈಂ ಅಡಿಯಲ್ಲಿ ಬಿಜೆಪಿ ಕ್ರಮ ಕೈಗೊಳ್ಳುತ್ತದೆ. ಅವರಿಗೆ ಈ ಪತ್ರ ಎಲ್ಲಿಂದ ಬಂತು ಎಂದು ಆಕೆ ತಿಳಿಸಬೇಕು. ನೀವು (ಪ್ರಿಯಾಂಕಾ ಗಾಂಧಿ) ಮಧ್ಯಪ್ರದೇಶವನ್ನು ಮಾತ್ರವಲ್ಲದೆ ದೇಶವನ್ನು ನಕಲಿ ಪತ್ರದ ಆಧಾರದ ಮೇಲೆ ದಾರಿ ತಪ್ಪಿಸಿದ್ದೀರಿ ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+