ವೆಜ್ ಬಿರಿಯಾನಿಯಲ್ಲಿ ಮೂಳೆ: ಸಸ್ಯಾಹಾರಿಗೆ ಮಾಂಸಾಹಾರ ಬಡಿಸಿದ ಆರೋಪ, ಹೋಟೆಲ್ ಮಾಲೀಕನ ಮೇಲೆ ಕೇಸ್
ಭೋಪಾಲ್, ಡಿ. 28: ಸಸ್ಯಾಹಾರಿಗಳಿಗೆ ಮಾಂಸಾಹಾರ ಬಡಿಸಿದ ಆರೋಪದ ಮೇಲೆ ಮಧ್ಯಪ್ರದೇಶ ಪೊಲೀಸರು ಇಂದೋರ್ನಲ್ಲಿ ರೆಸ್ಟೋರೆಂಟ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮಧ್ಯಪ್ರದೇಶದ ಇಂದೋರ್ನ ವಿಜಯ್ ನಗರದ ಅಲ್ಬಾ ಬರಿಸ್ಟೋ ಹೋಟೆಲ್ನಲ್ಲಿ ವೆಜ್ ಬಿರಿಯಾನಿ ಬದಲಿಗೆ ಚಿಕನ್ ಬಿರಿಯಾನಿ ನೀಡಲಾಗಿದೆ. ಗ್ರಾಹಕರ ದೂರಿನ ಮೇರೆಗೆ ಪೊಲೀಸರು ಹೊಟೇಲ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮಾಹಿತಿ ಪ್ರಕಾರ, ಇಂದೋರ್ನ ಆಲ್ಬಾ ಬಾರಿಸ್ಟೋ ಹೋಟೆಲ್ನಲ್ಲಿ ವೆಜ್ ಬಿರಿಯಾನಿ ತಿನ್ನುವಾಗ ಯುವಕನೊಬ್ಬರಿಗೆ ಚಿಕನ್ ಮೂಳೆ ದೊರೆತಿದೆ. ನಂತರ ಗಲಾಟೆ ನಡೆದಿದೆ. ಅದೇ ಸಮಯದಲ್ಲಿ, ಹೋಟೆಲ್ ಮ್ಯಾನೇಜ್ಮೆಂಟ್ ವಿಷಯವನ್ನು ಮುಚ್ಚಿಹಾಕಲು ಪ್ರಯತ್ನಿಸಿದೆ. ಆದರೆ ಕೋಪಗೊಂಡ ಜನರು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದ್ದಾರೆ.

ಬ್ರಾಹ್ಮಣನಾಗಿದ್ದು ಗ್ರಾಹಕ ಆಕಾಶ್ ದುಬೆ ನೀಡಿರುವ ಊರಿನ ಹಿನ್ನೆಲೆ ರೆಸ್ಟೋರೆಂಟ್ ಮ್ಯಾನೇಜರ್, ಮಾಲೀಕನ ವಿರುದ್ಧ ದೂರು ದಾಖಲಾಗಿದೆ. ಬಾಲ್ಯದಿಂದ ಇಲ್ಲಿಯವರೆಗೆ ಮೊಟ್ಟೆಯನ್ನು ಮುಟ್ಟಿಲ್ಲ. ಹೋಟೆಲ್ಗೆ ಬಂದು ವೆಜ್ ಬಿರಿಯಾನಿ ಆರ್ಡರ್ ಮಾಡಿದ್ದೆ, ಆದರೆ ಕೊಟ್ಟ ಬಿರಿಯಾನಿಯಲ್ಲಿ ಚಿಕನ್ ಮೂಳೆಗಳು ಪತ್ತೆಯಾಗಿದೆ ಎಂದು ಆಕಾಶ್ ದುಬೆ ಹೇಳಿದ್ದಾರೆ.
ಈ ಬಗ್ಗೆ ರೆಸ್ಟೋರೆಂಟ್ ಮ್ಯಾನೇಜರ್ಗೆ ಅಲ್ಲಿಯೇ ದೂರು ನೀಡಲಾಯಿತು, ನಂತರ ರೆಸ್ಟೋರೆಂಟ್ ಸಿಬ್ಬಂದಿ ಕೈ ಮುಗಿದು ಕ್ಷಮೆಯಾಚಿಸಲು ಪ್ರಾರಂಭಿಸಿದ್ದರು, ತಪ್ಪು ಆಗಿದೆ, ಮುಂದೆ ಆಗುವುದಿಲ್ಲ ಎಂದು ಮತ್ತೆ ಮತ್ತೆ ಹೇಳುತ್ತಿದ್ದರು. ಆದರೂ ಆಕಾಶ್ ದುಬೆ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಆಕಾಶ್ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

"ವಿಜಯ್ ನಗರ ಪೊಲೀಸರು ರೆಸ್ಟೋರೆಂಟ್ ಮ್ಯಾನೇಜರ್ ಸ್ವಪ್ನಿಲ್ ಗುಜರಾತಿ ವಿರುದ್ಧ ಸೆಕ್ಷನ್ 298 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಪ್ರಸ್ತುತ, ಈ ವಿಷಯವನ್ನು ತನಿಖೆ ನಡೆಸಲಾಗುತ್ತಿದೆ, ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು" ಎಂದು ಉಪ ಪೊಲೀಸ್ ಆಯುಕ್ತ ಸಂಪತ್ ಉಪಾಧ್ಯಾಯ ತಿಳಿಸಿದ್ದಾರೆ.
ಇನ್ನು, ರೆಸ್ಟೊರೆಂಟ್ನಲ್ಲಿ ವೆಜ್ ಮತ್ತು ನಾನ್ ವೆಜ್ಗೆ ಒಂದೇ ಅಡುಗೆ ಮನೆಯಿದೆ ಎಂದು ಹಲವರು ಆರೋಪಿಸಿದ್ದಾರೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications