ಮಧ್ಯಪ್ರದೇಶ: ಬದುಕುಳಿಯಲಿಲ್ಲ 400 ಅಡಿ ಬೋರ್ವೆಲ್ಗೆ ಬಿದ್ದ 8 ವರ್ಷದ ಬಾಲಕ
ಬೇತುಲ್ ಡಿಸೆಂಬರ್ 10: ಡಿಸೆಂಬರ್ 6 ರಂದು ಮಧ್ಯಪ್ರದೇಶದ ಬೇತುಲ್ನಲ್ಲಿ 400 ಅಡಿ ಬೋರ್ವೆಲ್ಗೆ ಬಿದ್ದ 8 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. 65 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ 400 ಅಡಿ ಆಳದ ಬೋರ್ವೆಲ್ಗೆ ಬಿದ್ದ ಎಂಟು ವರ್ಷದ ಬಾಲಕ ತನ್ಮಯ್ ಸಾಹು ದೇಹವನ್ನು ಹೊರತೆಗೆಯಲಾಗಿದೆ. ಶವ ಪರೀಕ್ಷೆಗಾಗಿ ಆತನ ಮೃತದೇಹವನ್ನು ಬೇತುಲ್ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಪ್ರದೇಶದಾದ್ಯಂತ ಕಲ್ಲುಗಳ ಉಪಸ್ಥಿತಿಯು ನಾಲ್ಕು ದಿನಗಳಿಗಿಂತ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯನ್ನು ವಿಳಂಬಗೊಳಿಸಿತು.
ಜಮೀನಿನಲ್ಲಿ ಆಟವಾಡುತ್ತಿದ್ದ ಬಾಲಕ ಬೇರೆ ಹೊಲಕ್ಕೆ ಹೋಗಿ ತೆರೆದ ಬೋರ್ವೆಲ್ಗೆ ಬಿದ್ದಿದ್ದಾನೆ. ಬಾಲಕನನ್ನು ಹೊರತರಲು ಸಮಾನಾಂತರ ಸುರಂಗ ಕೊರೆಯಲು ಮಣ್ಣು ತೆಗೆಯುವ ಯಂತ್ರಗಳನ್ನು ತರಲಾಗಿತ್ತು.
#WATCH | Madhya Pradesh | 8-year-old Tanmay Sahu who fell into a 55-ft deep borewell on December 6 in Mandavi village of Betul district, has been rescued. According to Betul district administration, the child has died pic.twitter.com/WtLnfq3apc
— ANI (@ANI) December 10, 2022
ಶುಕ್ರವಾರ ತಡರಾತ್ರಿ ಅವರನ್ನು ಹೊರ ತೆಗೆಯುವವರೆಗೂ ತನ್ಮಯ್ ಸಾಹು 400 ಅಡಿ ಆಳದ ಬೋರ್ವೆಲ್ನ 55 ಅಡಿಗಳಲ್ಲಿ ಸಿಲುಕಿಕೊಂಡಿದ್ದನು. ಜಿಲ್ಲಾಡಳಿತದ ಪ್ರಕಾರ ಬಾಲಕನನ್ನು ಹೊರತೆಗೆಯುವಾಗಲೇ ಆತ ಮೃತಪಟ್ಟಿದ್ದನು. ಡಿಸೆಂಬರ್ 6 ರಂದು ಬಾಲಕ ಬೋರ್ವೆಲ್ಗೆ ಬಿದ್ದಿದ್ದ.

"ನಾವು ತಕ್ಷಣ ಸ್ಥಳಕ್ಕೆ ಧಾವಿಸಿದ್ದೇವೆ. ಅವರು ಉಸಿರಾಡುತ್ತಿದ್ದರು. ಬೋರ್ವೆಲ್ಗೆ ಬಿದ್ದ ದಿನ ನಾವು ಅವರ ಧ್ವನಿಯನ್ನು ಆಲಿಸಿದ್ದೇವೆ. ಡಿಸೆಂಬರ್ 6 ರಂದು ಸಂಜೆ 6 ಗಂಟೆಯಿಂದ ರಕ್ಷಣಾ ಕಾರ್ಯಾಚರಣೆ ಪ್ರಾರಂಭವಾಯಿತು" ಎಂದು ಬಾಲಕನ ತಂದೆ ಹೇಳಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಬಾಲಕನನ್ನು ರಕ್ಷಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್), ಗೃಹ ರಕ್ಷಕ ದಳ ಮತ್ತು ಸ್ಥಳೀಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಆದರೆ ದುರದೃಷ್ಟವಶಾತ್ ಬಾಲಕ ಬದುಕುಳಿಯಲಿಲ್ಲ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications