ಮಧ್ಯಪ್ರದೇಶ ಚುನಾವಣೆ: ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಗಮನಹರಿಸಿದ ಕಾಂಗ್ರೆಸ್!
ನವದೆಹಲಿ, ಮೇ. 31: ಮಧ್ಯಪ್ರದೇಶದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಘಟಕವು ಈ ವರ್ಷಾಂತ್ಯದಲ್ಲಿ ರಾಜ್ಯದಲ್ಲಿ ನಡೆಯಲಿರುವ ಚುನಾವಣೆಗೆ ಪೂರ್ವಭಾವಿಯಾಗಿ ಎಲ್ಲಾ 230 ವಿಧಾನಸಭಾ ಕ್ಷೇತ್ರಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಯೋಜಿಸಿದೆ. ಪಕ್ಷವನ್ನು ಹಿಂದೂ ವಿರೋಧಿ ಎಂದು ಬಿಂಬಿಸುವುದನ್ನು ವಿರೋಧಿಸಲು ಮತ್ತು ಪಕ್ಷದ ಮುಖಂಡರು, ನಾಯಕರ ಧಾರ್ಮಿಕತೆಯ ಬಗ್ಗೆ ಜಾಗೃತಿ ಮೂಡಿಸಲು ಈ ಕಾರ್ಯಕ್ರಮಗಳು ಎಂದು ಹೇಳಿದೆ.
ಈ ತಿಂಗಳ ಕರ್ನಾಟಕದಲ್ಲಿ ಕಾಂಗ್ರೆಸ್ನ ಚುನಾವಣಾ ಪ್ರಣಾಳಿಕೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಂಗಸಂಸ್ಥೆ ಬಜರಂಗದಳವನ್ನು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಕ್ಕೆ ಹೋಲಿಸುವುದು ಮತ್ತು ಆ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮದ ಪ್ರತಿಜ್ಞೆ ಮಾಡಿರುವುದು, ಸಮುದಾಯಗಳ ನಡುವೆ ದ್ವೇಷ ಹರಡುವ ಸಂಘಟನೆಗಳನ್ನು ನಿಷೇಧಿಸುವುದು ಸೇರಿದ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡುತ್ತು. ಇದು ಪಕ್ಷವನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಮತ್ತೆ ಬಳಸಲಾಗುತ್ತಿದೆ ಎಂದು ಹೆಸರು ಹೇಳಲು ಇಚ್ಛಿಸದ ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಮೂರು ದಶಕಗಳಲ್ಲಿ ತನ್ನ ಅತ್ಯುತ್ತಮ ಮತ ಹಂಚಿಕೆ ಮತ್ತು ಹೆಚ್ಚು ಸ್ಥಾನಗಳನ್ನು ದಾಖಲಿಸುವ ಮೂಲಕ ಅಧಿಕಾರಕ್ಕೆ ಬಂದಿದೆ. ಆಡಳಿತೆರೂಢ ಬಿಜೆಪಿಎಗ ಮುಖಭಂಗವಾಗಿದೆ. ಇದೇ ಕಾರಣಕ್ಕೆ ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ಕಾಂಗ್ರೆಸ್ನ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಕಾಂಗ್ರೆಸ್ ಅನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಆರಂಭಿಸಿದ್ದಯ, ಇದಕ್ಕೆ ಟಕ್ಕರ್ ನೀಡಲು ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದರು.
ಮತದಾರರನ್ನು ಓಲೈಸಲು ಮತ್ತು ಚುನಾವಣೆಗೆ ಮುನ್ನ ತನ್ನ ಕಾರ್ಯಸೂಚಿಯನ್ನು ಮುಂದಿಡಲು ಇಬ್ಬರು ಸ್ವಯಂ ಘೋಷಿತ ದೇವಮಾನವರನ್ನು ಕರೆತಂದು ಪ್ರಚಾರ ಮಾಡುತ್ತಿರುವ ಬಿಜೆಪಿಗಿಂತ ಭಿನ್ನವಾಗಿ, ಕಾಂಗ್ರೆಸ್ ಸಣ್ಣ ಆದರೆ ಪರಿಣಾಮಕಾರಿ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ ಎಂಬ ಮಾಹಿತಿ ಲಬ್ಯವಾಗಿದೆ.
2018 ರಲ್ಲಿ ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೆ ಮರಳುವ ಮೊದಲು ಕಾರ್ಯಕ್ರಮಗಳನ್ನು ಆಯೋಜಿಸಲು ಕಂಪ್ಯೂಟರ್ ಬಾಬಾ ಮತ್ತು ಮಿರ್ಚಿ ಬಾಬಾ ಅವರಂತಹ ಧಾರ್ಮಿಕ ಮುಖಂಡರನ್ನು ಕಾಂಗ್ರೆಸ್ ಬಳಸಿಕೊಂಡಿತು. ಎರಡು ವರ್ಷಗಳ ನಂತರ 22 ಶಾಸಕರು ಕಾಂಗ್ರೆಸ್ ತೊರೆದು ರಾಜ್ಯ ವಿಧಾನಸಭೆಗೆ ರಾಜೀನಾಮೆ ನೀಡಿದಾಗ ಅದು ಅಧಿಕಾರವನ್ನು ಕಳೆದುಕೊಂಡಿತು.

2014 ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 44 ಸ್ಥಾನಗಳನ್ನು ಗಳಿಸಿ ಅತ್ಯಂತ ಕೆಟ್ಟ ಪ್ರದರ್ಶನ ನೀಡಿದ ಕಾರಣಗಳಲ್ಲಿ ಹಿಂದೂ ವಿರೋಧಿ ಹಣೆಪಟ್ಟಿ ಕೂಡ ಒಂದು ಎಂದು 2014 ರಲ್ಲಿ ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ನೇತೃತ್ವದ ನಾಲ್ವರು ಸದಸ್ಯರ ಸಮಿತಿಯು ತಿಳಿಸಿತ್ತು.
2020 ರಲ್ಲಿ ರಾಜ್ಯದಲ್ಲಿ ಪಕ್ಷವು ಅಧಿಕಾರ ಕಳೆದುಕೊಂಡ ನಂತರ ಬಿಜೆಪಿಯ ಧರ್ಮದ ಬಳಕೆಯನ್ನು ಎದುರಿಸಲು ಆಧ್ಯಾತ್ಮಿಕ ಕಥೆಗಾರ್ತಿ ರಿಚಾ ಗೋಸ್ವಾಮಿ ಅವರ ನೇತೃತ್ವದಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರು ಜಿಲ್ಲಾ ಮತ್ತು ಬ್ಲಾಕ್ ಅಧ್ಯಕ್ಷರೊಂದಿಗೆ ಧಾರ್ಮಿಕ ಮತ್ತು ಉತ್ಸವ ಪ್ರಕಾಶ್ ವಿಭಾಗವನ್ನು ರಚಿಸಿದ್ದರು.
ಜಬಲ್ಪುರ ಮತ್ತು ಅಮರಕಂಟಕ್ನಲ್ಲಿ ಆಶ್ರಮವನ್ನು ಹೊಂದಿರುವ ಗೋಸ್ವಾಮಿ ಅವರು ಯಾವಾಗಲೂ ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿರುತ್ತಿದ್ದರು ಮತ್ತು ಕಮಲ್ ನಾಥ್ ಅವರ ಕೋರಿಕೆಯ ಮೇರೆಗೆ ಪಕ್ಷಕ್ಕೆ ಸೇರಿದ್ದಾರೆ ಎಂದು ಹೇಳಿದ್ದಾರೆ. "ನನಗೆ ಧಾರ್ಮಿಕ ಪ್ರದರ್ಶನದಲ್ಲಿ ನಂಬಿಕೆ ಇಲ್ಲ. ನಾನು ಎರಡು ವರ್ಷಗಳಿಂದ ಧಾರ್ಮಿಕ ಮತ್ತು ಉತ್ಸವ್ ಪ್ರಕಾಶ್ ಗಾಗಿ ಕೆಲಸ ಮಾಡುತ್ತಿದ್ದೇನೆ" ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಕಮಲ್ ನಾಥನನ್ನು ಹನುಮಂತನ ಭಕ್ತನೆಂದು ಬಿಂಬಿಸಿರುವ ಧಾರ್ಮಿಕ್ ಮತ್ತು ಉತ್ಸವ ಪ್ರಕೋಷ್ಠವು ಕಳೆದ ಎರಡು ವರ್ಷಗಳಲ್ಲಿ ರಾಜ್ಯಾದ್ಯಂತ 30 ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈ ವರ್ಷದ ಧಾರ್ಮಿಕ ಕಾರ್ಯಕ್ರಮಗಳ ವೆಚ್ಚವನ್ನು ಸ್ಥಳೀಯ ಪಕ್ಷದ ಮುಖಂಡರು ಭರಿಸಲಿದ್ದಾರೆ ಮತ್ತು ಸಾಮಾನ್ಯ ಜನರನ್ನು ಆಹ್ವಾನಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ಜೆಪಿ ಧನೋಪಿಯಾ ಹೇಳಿದ್ದಾರೆ.
ಚುನಾವಣಾ ಸಿದ್ಧತೆ ಕುರಿತ ಸಭೆಯ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ವಾರ ಮಧ್ಯಪ್ರದೇಶದಲ್ಲಿ 230 ಸ್ಥಾನಗಳಲ್ಲಿ 150 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಸರ್ಕಾರ ರಚಿಸುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿರುವ ಇತರ ಎರಡು ರಾಜ್ಯಗಳಾದ ರಾಜಸ್ಥಾನ ಮತ್ತು ಛತ್ತೀಸ್ಗಢದ ಜೊತೆಗೆ ಮಧ್ಯಪ್ರದೇಶ ಈ ವರ್ಷ ಚುನಾವಣೆ ಎದುರಿಸಲಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications