Get Updates
Get notified of breaking news, exclusive insights, and must-see stories!

ಮಧ್ಯಪ್ರದೇಶ: ದಲಿತನ ಕೊಲೆ, ತಾಯಿಯನ್ನು ವಿವಸ್ತ್ರಗೊಳಿಸಿ ದೌರ್ಜನೆ ಪ್ರಕರಣ- 8 ಆರೋಪಿಗಳ ಬಂಧನ

ಮಧ್ಯಪ್ರದೇಶದ ಸಾಗರ್‌ನಲ್ಲಿ ದಲಿತ ವ್ಯಕ್ತಿಯನ್ನು ಹೊಡೆದು ಕೊಂದು, ತಾಯಿಯನ್ನು ವಿವಸ್ತ್ರಗೊಳಿಸಿದ ಘಟನೆಗೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. 2019ರಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ ಸಂತ್ರೆಸ್ತೆಯ ಸಹೋದರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜೊತೆಗೆ ಇದನ್ನು ತಡೆಯಲು ಬಂದ ಆತನ ತಾಯಿಯನ್ನು ವಿವಸ್ತ್ರಗೊಳಿಸಿ ಕ್ರೂರತೆ ಮೆರೆಯಲಾಗಿದೆ.

ಲೈಂಗಿಕ ಕಿರುಕುಳ ಪ್ರಕರಣವನ್ನು ಹಿಂತೆಗೆದುಕೊಳ್ಳುವ ವಿಚಾರದಲ್ಲಿ ದಲಿತ ವ್ಯಕ್ತಿ ಮತ್ತು ಆರೋಪಿಗಳ ನಡುವೆ ವಾಗ್ವಾದ ನಡೆದು ಈ ಘಟನೆ ಸಂಭವಿಸಿದೆ. ಬಳಿಕ ಗುರುವಾರ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

Madhya Pradesh: Dalits murder, mother stripped - 8 accused arrested

ಸಂತ್ರಸ್ತೆಯ ಸಹೋದರ 18 ವರ್ಷದ ನಿತಿನ್ ಅಹಿರ್ವಾರ್, ತನ್ನ ಸಹೋದರಿ ದಾಖಲಿಸಿದ ಲೈಂಗಿಕ ಕಿರುಕುಳ ಪ್ರಕರಣವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಥಳಿಸಿ ಕೊಲ್ಲಲ್ಪಟ್ಟಿದ್ದಾರೆ. ದೂರು ಹಿಂಪಡೆಯುವಂತೆ ಆರೋಪಿ ಸಂತ್ರಸ್ತೆಯ ಸಹೋದರಿಯ ಮೇಲೆ ಒತ್ತಡ ಹೇರುತ್ತಿದ್ದ.

ಆರೋಪಿ ವಿಕ್ರಮ್ ಸಿಂಗ್ ಠಾಕೂರ್ ಮೊದಲು ಸಂತ್ರಸ್ತೆಯ ಮನೆಯನ್ನು ಧ್ವಂಸಗೊಳಿಸಿ ನಂತರ ಆತನನ್ನು ಕೊಲೆ ಮಾಡಿದ್ದಾನೆ. ಸಂತ್ರಸ್ತೆಯ ತಾಯಿ ಮಧ್ಯಪ್ರವೇಶಿಸಲು ಬಂದಾಗ ಅವಳನ್ನು ವಿವಸ್ತ್ರಗೊಳಿಸಿದ್ದಾನೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಮುಖಂಡರು ಸೇರಿದಂತೆ ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಬಂಧಿಸಲು ಪೊಲೀಸ್ ತಂಡಗಳು ವಿವಿಧೆಡೆ ಶೋಧ ನಡೆಸುತ್ತಿವೆ.

Madhya Pradesh: Dalits murder, mother stripped - 8 accused arrested

ಹೆಸರಿಸಲಾದ ಒಂಬತ್ತು ಆರೋಪಿಗಳು ಮತ್ತು ಮೂರ್ನಾಲ್ಕು ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸರು ತಂಡಗಳನ್ನು ರಚಿಸಿದ್ದಾರೆ.

ಹೆಚ್ಚುವರಿ ಎಸ್ಪಿ ಸಂಜೀವ್ ಉಯಿಕೆ ಪ್ರಕಾರ, "ಸೆಕ್ಷನ್ 307 ರ ಅಡಿಯಲ್ಲಿ ಪ್ರಮುಖ ಆರೋಪಿ ಸೇರಿದಂತೆ ಒಂಬತ್ತು ವ್ಯಕ್ತಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಬಲಿಪಶುವಿನ ಮರಣದ ನಂತರ, ಸೆಕ್ಷನ್ 302 ಮತ್ತು SC/ST ಕಾಯಿದೆಯನ್ನು ಸಹ ಅನ್ವಯಿಸಲಾಗಿದೆ." ಆರೋಪಿಗಳಲ್ಲಿ ಒಬ್ಬನಾದ ಕೋಮಲ್ ಸಿಂಗ್ ಇನ್ನೂ ತಲೆಮರೆಸಿಕೊಂಡಿದ್ದಾನೆ.

ಸಂತ್ರಸ್ತೆಯ ಸಹೋದರಿಯ ಪ್ರಕಾರ, ಆರೋಪಿಗಳಾದ ಕೋಮಲ್ ಸಿಂಗ್, ವಿಕ್ರಮ್ ಸಿಂಗ್ ಮತ್ತು ಆಜಾದ್ ಸಿಂಗ್ ಅವರ ಮನೆಗೆ ಬಂದು ಲೈಂಗಿಕ ಕಿರುಕುಳ ಪ್ರಕರಣವನ್ನು ಹಿಂಪಡೆಯುವಂತೆ ಮನವೊಲಿಸಿದರು. ಆದರೆ, ಸಂತ್ರಸ್ತೆಯ ತಾಯಿ ನಿರಾಕರಿಸಿದಾಗ ಆಕೆಗೆ ಬೆದರಿಕೆ ಹಾಕಿ ಮನೆಯನ್ನು ಧ್ವಂಸಗೊಳಿಸಿದ್ದಾರೆ.

"ಅವರು ಮನೆಯಿಂದ ಹೊರಬಂದು ಗ್ರಾಮದ ಬಸ್ ನಿಲ್ದಾಣದ ಬಳಿ ನಿತಿನ್ ಅವರನ್ನು ಭೇಟಿಯಾಗಿ ಥಳಿಸಲು ಪ್ರಾರಂಭಿಸಿದರು. ನನ್ನ ತಾಯಿ ಮಧ್ಯಪ್ರವೇಶಿಸಲು ಅಲ್ಲಿಗೆ ಹೋದಾಗ, ಅವರು ಅವಳನ್ನೂ ಹೊಡೆದು ವಿವಸ್ತ್ರಗೊಳಿಸಿದರು. ಅವರನ್ನು ಬಿಟ್ಟುಬಿಡಿ ಎಂದು ನಾನು ಮನವಿ ಮಾಡಿದೆ. ಆದರೆ, ನನ್ನ ಮೇಲೆ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ನಾನು ಕಾಡಿನೊಳಗೆ ಓಡಿ ಪೊಲೀಸರನ್ನು ಸಹಾಯಕ್ಕಾಗಿ ಕರೆದಿದ್ದೇನೆ ಎಂದು ಸಂತ್ರಸ್ತೆಯ ಸಹೋದರಿ ಬಹಿರಂಗಪಡಿಸಿದ್ದಾರೆ.

ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಘಟನೆಯ ಬಗ್ಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಘಟನೆಯು "ಬಿಜೆಪಿ ಮತ್ತು ಅದರ ಸರ್ಕಾರದ ದ್ವಂದ್ವ ಗುಣವನ್ನು" ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

"ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇತ್ತೀಚೆಗೆ ಸಂತ ಗುರು ರವಿದಾಸ್ ಜಿ ಅವರ ಸ್ಮಾರಕಕ್ಕೆ ಬಹಳ ವೈಭವ ಮತ್ತು ಪ್ರದರ್ಶನದೊಂದಿಗೆ ಅಡಿಪಾಯ ಹಾಕಿದರು. ಅದೇ ಪ್ರದೇಶದಲ್ಲಿ, ಅವರ ಭಕ್ತರ ಮೇಲಿನ ದೌರ್ಜನ್ಯಗಳು ಮಿತಿಯಿಲ್ಲದಂತೆ ನಡೆಯುತ್ತಿವೆ. ಇದು ಬಿಜೆಪಿ ಮತ್ತು ಅದರ ಸರ್ಕಾರದ ದ್ವಂದ್ವ ಸ್ವಭಾವಕ್ಕೆ ಜೀವಂತ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ ಈ ಭಯಾನಕ ಘಟನೆ ನಡೆದಿದೆ'' ಎಂದು ಟ್ವೀಟ್ ಮಾಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+