Madhya Pradesh; ಮಧ್ಯಪ್ರದೇಶದಲ್ಲಿ ಮೊದಲ ಜಯ ದಾಖಲಿಸಿದ ಬಿಎಪಿ!
ಭೋಪಾಲ್, ಡಿಸೆಂಬರ್ 03; ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಸ್ಪಷ್ಟ ಬಹುಮತ ಪಡೆದು ರಾಜ್ಯದಲ್ಲಿ 5ನೇ ಬಾರಿಗೆ ಸರ್ಕಾರ ರಚನೆ ಮಾಡಲಿದೆ. ರಾಜ್ಯದಲ್ಲಿ ಬಿಎಪಿ ಪಕ್ಷ ಮೊದಲ ಬಾರಿಗೆ ಗೆಲ್ಲುವ ಮೂಲಕ ಖಾತೆ ತೆರೆದಿದೆ.
230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಭಾನುವಾರ ನಡೆಯುತ್ತಿದೆ. ನವೆಂಬರ್ 17ರಂದು ರಾಜ್ಯದಲ್ಲಿ ಮತದಾನ ನಡೆದಿತ್ತು. ಸರ್ಕಾರ ರಚನೆ ಮಾಡಲು ರಾಜ್ಯದಲ್ಲಿ ಪಡೆಯಬೇಕಾದ ಬೇಕಾದ ಮ್ಯಾಜಿಕ್ ನಂಬರ್ 116.

ಚುನಾವಣಾ ಆಯೋಗದ 5 ಗಂಟೆಯ ಮಾಹಿತಿಯಂತೆ ಬಿಜೆಪಿ 164 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಕಾಂಗ್ರೆಸ್ 65 ಮತ್ತು ಇತರ ಅಭ್ಯರ್ಥಿಗಳು 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಸರ್ಕಾರ ರಚನೆ ಮಾಡುವುದು ಖಚಿತವಾಗಿದ್ದು, ಮುಖ್ಯಮಂತ್ರಿ ಯಾರು? ಎಂಬುದು ಕುತೂಹಲ.
ಮೊದಲ ಜಯ ದಾಖಲಿಸಿದ ಬಿಎಪಿ; ಭಾರತೀಯ ಆದಿವಾಸಿ ಪಕ್ಷ (ಬಿಎಪಿ) ರತ್ಲಮ್ ಜಿಲ್ಲೆಯ ಸೈಲಾನಾ ಕ್ಷೇತ್ರದಲ್ಲಿ ಜಯಗಳಿಸಿವು ಮೂಲಕ ರಾಜ್ಯದಲ್ಲಿ ಗೆಲುವಿನ ಖಾತೆ ತೆರೆದಿದೆ. ಕಮಲೇಶ್ವರ್ ದೊಡಿಯಾರ್ 71,219 ಮತಗಳನ್ನು ಪಡೆಯುವ ಮೂಲಕ 4,618 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.
ಕ್ಷೇತ್ರದಲ್ಲಿ ಕಾಂಗ್ರೆಸ್ನ ಹರ್ಷ ವಿಜಯ್ ಗೆಹ್ಲೋಟ್ 66,601, ಬಿಜೆಪಿಯ ಸಂಗೀತಾ ವಿಜಯ್ 41,584 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ರಾಜಸ್ಥಾನದಲ್ಲಿ ಮುಖ್ಯ ಕಛೇರಿ ಹೊಂದಿರುವ ಬಿಎಪಿ ಪಕ್ಷ ಮೊದಲ ಬಾರಿಗೆ ಮಧ್ಯಪ್ರದೇಶದ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ.
ಭಾನುವಾರ ಬೆಳಗ್ಗೆ 8 ಗಂಟೆಗೆ ಮಧ್ಯಪ್ರದೇಶದಲ್ಲಿ ಮತ ಎಣಿಕೆ ಆರಂಭವಾಯಿತು. ಅಂಚೆ ಮತಗಳ ಎಣಿಕೆಯಲ್ಲಿ ಮೊದಲು 7 ಕ್ಷೇತ್ರಗಳಲ್ಲಿ ಕಾಂಗ್ರೆಸ್, 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿತ್ತು. ಬಳಿಕ ಫಲಿತಾಂಶದ ಚಿತ್ರಣ ಬದಲಾಗುತ್ತಾ ಹೋಯಿತು.
ಬಿಜೆಪಿ ನಾಯಕ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಬುಧ್ನಿ ಕ್ಷೇತ್ರದಲ್ಲಿ 1,64,951 ಮತಗಳನ್ನು ಪಡೆದು 104974 ಮತಗಳ ಅಂತರದಿಂದ ಕಾಂಗ್ರೆಸ್ನ ವಿಕ್ರಂ ಮಸ್ತಲ್ (59,977) ಶರ್ಮಾ ಸೋಲಿಸಿದ್ದಾರೆ.
ಕಾಂಗ್ರೆಸ್ನ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ 1,23,728 ಮತಗಳನ್ನು ಪಡೆದು 31,610 ಮತಗಳ ಅಂತರದಲ್ಲಿ ಬಿಜೆಪಿಯ ವಿವೇಕ್ ಬಂಟಿ ಶಾಹೂ ವಿರುದ್ಧ ಮುನ್ನಡೆಯನ್ನು ಪಡೆದಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಚುನಾವಣೆ ಎದುರಿಸಿವೆ. ಬಿಜೆಪಿ ರಾಜ್ಯದಲ್ಲಿ ಸ್ಪಷ್ಟ ಬಹುಮತ ಪಡೆಯುವುದರಿಂದ ಭಾರತೀಯ ಆದಿವಾಸಿ ಪಕ್ಷದ ಶಾಸಕರ ಬೆಂಬಲ ಸರ್ಕಾರಕ್ಕೆ ಅಗತ್ಯವಿಲ್ಲ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications