Madhya Pradesh; ಸೋತ, ಗೆದ್ದ ಬಿಜೆಪಿ ಕೇಂದ್ರ ಸಚಿವರು, ಸಂಸದರು
ಭೋಪಾಲ್, ಡಿಸೆಂಬರ್ 03; ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರ ಪಡೆಯಲಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿ ಎಂಬ ಚುನಾವಣಾ ಪೂರ್ವ ಸಮೀಕ್ಷೆಗಳು ಸುಳ್ಳಾಗಿವೆ. ಬಿಜೆಪಿ ಸರ್ಕಾರ ರಚನೆಯಾದರೆ ಮುಖ್ಯಮಂತ್ರಿ ಯಾರು? ಎಂಬ ಚರ್ಚೆಗಳು ಆರಂಭವಾಗಿವೆ.
ಭಾನುವಾರ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರಂದು ಮತದಾನ ನಡೆದಿತ್ತು. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 116.

ಚುನಾವಣಾ ಆಯೋಗದ 4 ಗಂಟೆಯ ಮಾಹಿತಿಯಂತೆ ಬಿಜೆಪಿ 168 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಕಾಂಗ್ರೆಸ್ 61 ಮತ್ತು ಇತರೆ ಅಭ್ಯರ್ಥಿಗಳು 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಚುನಾವಣಾ ಕಣಕ್ಕೆ ಕೇಂದ್ರ ಸಚಿವರು, ಸಂಸದರನ್ನು ಕಣಕ್ಕಿಳಿಸಿದ ಬಿಜೆಪಿ ತಂತ್ರ ಫಲ ನೀಡಿದೆಯೇ? ಇಲ್ಲಿದೆ ಮಾಹಿತಿ.
ಮುನ್ನಡೆ, ಹಿನ್ನಡೆ; ಕೇಂದ್ರ ಸಚಿವ ನರೇಂದ್ರ ಸಿಂಗ್ ಥೋಮರ್ ದಿಮಾನಿ ಕ್ಷೇತ್ರದಿಂದ ವಿಧಾನಸಭೆ ಚುನಾವಣಾ ಕಣಕ್ಕಿಳಿದಿದ್ದಾರೆ. ಸದ್ಯದ ಮಾಹಿತಿಯಂತೆ 5,357 ಮತಗಳ ಅಂತರದಲ್ಲಿ ಅವರು ಮನ್ನಡೆಯಲ್ಲಿದ್ದಾರೆ. ಗೆಲ್ಲುವುದು ಸಹ ಬಹತೇಕ ಖಚಿತವಾಗಿದೆ.
ನರಸಿಂಗಪುರ ಕ್ಷೇತ್ರದಿಂದ ಸ್ಪರ್ಧಿಸಿರುವ ಮತ್ತೊಬ್ಬ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ 15,684 ಮತಗಳ ಮುನ್ನಡೆಯನ್ನು ಪಡೆದಿದ್ದಾರೆ. ಮತ್ತೊಬ್ಬ ಕೇಂದ್ರ ಸಚಿವ ಫಗ್ಗಾನ್ ಸಿಂಗ್ ಕುಲಸ್ತೆ ನಿವಾಸ್ ಕ್ಷೇತ್ರದಲ್ಲಿ 11,216 ಮತಗಳ ಹಿನ್ನಡೆಯಲ್ಲಿದ್ದಾರೆ.
ಮಧ್ಯಪ್ರದೇಶ ವಿಧಾನಸಭೆ ಚುನಾವಣಾ ಕಣದಲ್ಲಿ ಮೂವರು ಕೇಂದ್ರ ಸಚಿವರು, ಏಳು ಸಂಸದರು ಇದ್ದಾರೆ. ಲೋಕಸಭೆ ಚುನಾವಣೆಗೆ ಸುಮಾರು 6 ತಿಂಗಳು ಬಾಕಿ ಇರುವುದು, ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳಬೇಕು ಎಂಬ ಪಕ್ಷದ ತಂತ್ರಕ್ಕೆ ಈ ದಾಳ ಉರುಳಿಸಲಾಗಿದೆ.
ನಾಲ್ಕು ಬಾರಿಯ ಸಂಸದ ಗಣೇಶ್ ಸಿಂಗ್ ಸಾತ್ನಾ ಕ್ಷೇತ್ರದಲ್ಲಿ ಕಣದಲ್ಲಿದ್ದು 666 ಮತಗಳಿಂದ ಹಿನ್ನಡೆಯಲ್ಲಿದ್ದಾರೆ. 2018ರಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಸೋಲು ಕಂಡಿತ್ತು.
ರಾಕೇಶ್ ಸಿಂಗ್ ಜಬಲ್ಪುರ ಕ್ಷೇತ್ರದಲ್ಲಿ ಕಣದಲ್ಲಿದ್ದಾರೆ. 23,000 ಮತಗಳ ಅಂತರದಲ್ಲಿ ಮುನ್ನಡೆ ಕಂಡುಕೊಂಡಿದ್ದಾರೆ. ಸಂಸದ ರಿತಿ ಪಾಠಕ್ ಮೊದಲ ಬಾರಿಗೆ ಸಿಧಿ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. 8,300 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಸಹ ವಿಧಾನಸಭೆ ಚುನಾವಣೆ ಕಣಕ್ಕಿಳಿದಿದ್ದಾರೆ. ಸಾಮೂಹಿಕ ನಾಯಕತ್ವದ ಜಪ ಮಾಡಿದ ಬಿಜೆಪಿ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶವನ್ನೇ ಪಡೆದಿದೆ.
ಚುನಾವಣಾ ಆಯೋಗದ ಅಧಿಕೃತ ಘೋಷಣೆ ಬಳಿಕ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಿದೆ? ಎಂಬುದು ತಿಳಿಯಲಿದೆ. ಈಗ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಎಂಬ ಚರ್ಚೆಗಳು ಆರಂಭವಾಗಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications