Madhya Pradesh; ಬಿಜೆಪಿ ಲಾಡ್ಲಿ ಬೆಹ್ನಾ V/S ಕಾಂಗ್ರೆಸ್ ಗ್ಯಾರಂಟಿ!
ಭೋಪಾಲ್, ಡಿಸೆಂಬರ್ 03; ಮಧ್ಯಪ್ರದೇಶ ವಿಧಾನಸಭಾ ಚುನಾವಣೆ 2023ರಲ್ಲಿ ಬಿಜೆಪಿ ಭಾರೀ ಮುನ್ನಡೆ ಪಡೆದುಕೊಂಡಿದೆ. 2024ರ ಲೋಕಸಭೆ ಚುನಾವಣೆಗೆ ಪೂರ್ವದಲ್ಲಿ ನಡೆದಿರುವ ಈ ಚುನಾವಣೆ ಫಲಿತಾಂಶ ಹಲವು ಲೆಕ್ಕಾಚಾರಗಳಿಗೆ ಕಾರಣವಾಗಿದೆ.
ಭಾನುವಾರ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರ ಶುಕ್ರವಾರ ಮತದಾನ ನಡೆದಿತ್ತು. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 116. 1.21ರ ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಬಿಜೆಪಿ 162 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.

ರಾಜ್ಯದ ಮಾಜಿ ಮುಖ್ಯಮಂತ್ರಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಚಿಂದ್ವಾರಾ ಕ್ಷೇತ್ರದಲ್ಲಿ ಮುನ್ನಡೆ ಪಡೆದಿದ್ದಾರೆ. ಬಿಜೆಪಿಯ ನಾಯಕ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ 77,688 ಮತಗಳನ್ನು ಪಡೆಯುವ ಮೂಲಕ ಬುಧ್ನಿ ಕ್ಷೇತ್ರದಲ್ಲಿ 56,124 ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಲಾಡ್ಲಿ ಬೆಹ್ನಾ V/S ಕಾಂಗ್ರೆಸ್ ಗ್ಯಾರಂಟಿ; ಮಧ್ಯಪ್ರದೇಶ ರಾಜ್ಯದ ಈ ಬಾರಿಯ ಚುನಾವಣೆಯನ್ನು ಬಿಜೆಪಿಯ ಲಾಡ್ಲಿ ಬೆಹ್ನಾ V/S ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಎಂದು ವಿಶ್ಲೇಷಿಸಲಾಗುತ್ತಿದೆ. ಕರ್ನಾಟಕದ ಮಾದರಿಯಲ್ಲಿ ಹಲವು ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಘೋಷಣೆ ಮಾಡಿದರೂ ಸಹ ಅದು ಮತವಾಗಿ ಪರಿವರ್ತನೆಯಾಗಿಲ್ಲ ಎಂಬುದು ಫಲಿತಾಂಶದಿಂದ ಸಾಬೀತಾಗಿದೆ.
ಚುನಾವಣಾ ದಿನಾಂಕ ಘೋಷಣೆಯಾದ ತಕ್ಷಣವೇ ಮಾತನಾಡಿದ್ದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ರಾಜ್ಯದಲ್ಲಿ ಬಿಜೆಪಿ 5ನೇ ಬಾರಿಗೆ ಸರ್ಕಾರ ರಚನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಚುನಾವಣಾ ಪೂರ್ವ ಸಮೀಕ್ಷೆಗಳು ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಹೇಳಿತ್ತು.
ರಾಜ್ಯದ ಬಿಜೆಪಿ ಸರ್ಕಾರ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿತ್ತು. ಇದರಲ್ಲಿ 'ಲಾಡ್ಲಿ ಬೆಹ್ನಾ' ಯೋಜನೆಯೂ ಒಂದು. ಈ ವರ್ಷದ ಮಾರ್ಚ್ ತಿಂಗಳಿನಲ್ಲಿ ಸರ್ಕಾರ ಈ ಯೋಜನೆ ಘೋಷಣೆ ಮಾಡಿತು. ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 1,250 ರೂ. ಆರ್ಥಿಕ ಸಹಾಯ ನೀಡಲಾಗುತ್ತದೆ.
ಈ ಯೋಜನೆ ಮೇಲೆ ಬಿಜೆಪಿಗೆ ಭಾರೀ ನಂಬಿಕೆ ಇತ್ತು. ಲಾಡ್ಲಿ ಬೆಹ್ನಾ ಯೋಜನೆ ಫಲಾನುಭವಿಗಳಾದ ಸಹೋದರಿಯರು ನಮ್ಮನ್ನು ಬೆಂಬಲಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದ್ದರು. 2003, 2008, 2013 ಮತ್ತು 2020ರಲ್ಲಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿದ್ದ ಬಿಜೆಪಿ 2023ರಲ್ಲಿಯೂ ಸರ್ಕಾರ ರಚನೆ ಮಾಡುವತ್ತ ಹೆಜ್ಜೆ ಹಾಕಿದೆ.
ಕಾಂಗ್ರೆಸ್ ಈ ಬಾರಿಯ ಚುನಾವಣಾ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ 1,500 ಆರ್ಥಿಕ ಸಹಾಯ. 25 ಲಕ್ಷದ ತನಕ ಆರೋಗ್ಯ ವಿಮೆ, 2 ಲಕ್ಷದ ತನಕ ರೈತರ ಕೃಷಿ ಸಾಲ ಮನ್ನಾ, ಕ್ವಿಂಟಾಲ್ಗೆ 2,500 ರೂ. ದರದಲ್ಲಿ ಭತ್ತ ಖರೀದಿ. ಪ್ರತಿ ಮನೆಗೆ 100 ಯೂನಿಟ್ ಉಚಿತ ವಿದ್ಯುತ್ ಮುಂತಾದ ಭರವಸೆಗಳನ್ನು ನೀಡಿತ್ತು.
"ಬಿಜೆಪಿ ಸರ್ಕಾರ ರಚನೆ ಬಗ್ಗೆ ಯಾವುದೇ ಸಂದೇಹವಿಲ್ಲ. ಲಾಡ್ಲಿ ಬೆಹ್ನಾ ಯೋಜನೆಯ ಫಲಾನುಭವಿಗಳು ಬಿಜೆಪಿಯ ಗೆಲುವಿಗೆ ಇದ್ದ ಎಲ್ಲಾ ಅಡೆತಡೆಗಳನ್ನು ತೆಗೆದುಹಾಕಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಮಾಡಿರುವ ಕೆಲಸಗಳಿಗೆ ಜನರು ಅಶೀರ್ವಾದ ಮಾಡಲಿದ್ದಾರೆ" ಎಂದು ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದ್ದರು. ಫಲಿತಾಂಶ ನೋಡಿದರೆ ಅದು ಸತ್ಯ ಎಂಬುದು ತಿಳಿಯುತ್ತಿದೆ.
ಕಾಂಗ್ರೆಸ್ ನೀಡಿದ್ದ 500 ರೂ.ಗೆ ಸಿಲಿಂಡರ್, ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಉಚಿತ, ನಿರುದ್ಯೋಗಿ ಯುವಕರಿಗೆ 1,500 ರೂ.ನಿಂದ 3 ಸಾವಿರ ರೂ. ತನಕ ಭತ್ಯೆ, ಮಹಿಳೆಯರಿಗೆ ಉದ್ಯಮ ನಡೆಸಲು ಸಾಲ ಮುಂತಾದ ಗ್ಯಾರಂಟಿ ಯೋಜನೆಗಳು ಕರ್ನಾಟಕದಂತೆ ಪಕ್ಷಕ್ಕೆ ಗೆಲುವು ತಂದು ಕೊಡಲಿಲ್ಲ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications