Madhya Pradesh; ಮಧ್ಯಪ್ರದೇಶ ಸಿಎಂ ಚೌವ್ಹಾಣ್ ಗೆಲುವಿನ ಅಂತರ ಎಷ್ಟು?
ಭೋಪಾಲ್, ಡಿಸೆಂಬರ್ 03; ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆ 2023ರ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಸ್ಪಷ್ಟ ಬಹುಮತ ಪಡೆದು ರಾಜ್ಯದಲ್ಲಿ ಅಧಿಕಾರ ಪಡೆದಿದೆ. ರಾಜ್ಯದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಬುಧ್ನಿ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಭಾನುವಾರ ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯಿತು. ಚುನಾವಣಾ ಆಯೋಗದ ವೆಬ್ಸೈಟ್ ಪ್ರಕಾರ ಸಂಜೆ 5.40ರ ವೇಳೆಗೆ ಬಿಜೆಪಿ 166, ಕಾಂಗ್ರೆಸ್ 63, ಇತರರು 1 ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ.

ರಾಜ್ಯದ ಆಡಳಿತ ಪಕ್ಷ ಬಿಜೆಪಿ ಸ್ಪಷ್ಟ ಬಹುಮತ ಪಡೆದು ರಾಜ್ಯದಲ್ಲಿ 5ನೇ ಬಾರಿಗೆ ಸರ್ಕಾರ ರಚನೆ ಮಾಡಲಿದೆ. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 116.
ಚೌವ್ಹಾಣ್ ಗೆಲುವು; ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಬುಧ್ನಿ ಕ್ಷೇತ್ರದಲ್ಲಿ 1,64,951 ಮತಗಳನ್ನು ಪಡೆದು ಜಯಗಳಿಸಿದ್ದಾರೆ. 104974 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಎದುರಾಳಿಯಾದ ಕಾಂಗ್ರೆಸ್ನ ವಿಕ್ರಂ ಮಸ್ತಲ್ ಶರ್ಮಾ 59,997 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
2024ರ ಲೋಕಸಭಾ ಚುನಾವಣೆಗೆ ಮೊದಲು ವಿಧಾನಸಭೆ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ಮಧ್ಯಪ್ರದೇಶ ಒಂದಾಗಿತ್ತು. ಈ ಬಾರಿ ರಾಜ್ಯದಲ್ಲಿ ದಾಖಲೆಯ 76.22ರಷ್ಟು ಮತದಾನವಾಗಿತ್ತು. ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಪಕ್ಷ ಬಿಜೆಪಿ ಚುನಾವಣಾ ಪೂರ್ವ ಸಮೀಕ್ಷೆಗಳನ್ನು ಸುಳ್ಳಾಗಿಸಿ, ಸರ್ಕಾರ ರಚನೆ ಮಾಡಲಿದೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಬುಧ್ನಿ ಕ್ಷೇತ್ರದಲ್ಲಿ 2ನೇ ಸುತ್ತಿನಲ್ಲಿ 7388, ಮೂರನೇ ಸುತ್ತಿನಲ್ಲಿ 17181, 4ನೇ ಸುತ್ತಿನಲ್ಲಿ 26452, 8ನೇ ಸುತ್ತಿನಲ್ಲಿ 61569, 10ನೇ ಸುತ್ತಿನಲ್ಲಿ 77688, 13ನೇ ಸುತ್ತಿನಲ್ಲಿ 100578, 17ನೇ ಸುತ್ತಿನಲ್ಲಿ 126899 ಮತಗಳ ಅಂತರವನ್ನು ಕಾಯ್ದುಕೊಂಡರು.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರು ಸಹ ಶಿವರಾಜ್ ಸಿಂಗ್ ಚೌವ್ಹಾಣ್ ಮುಖ್ಯಮಂತ್ರಿಯಾಗಲಿದ್ದಾರೆಯೇ? ಎಂಬುದನ್ನು ಕಾದು ನೋಡಬೇಕು. ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಹೆಸರು ಸಹ ಮುಖ್ಯಮಂತ್ರಿ ಹುದ್ದೆಗೆ ಕೇಳಿ ಬರುತ್ತಿದೆ.
ಶಿವರಾಜ್ ಸಿಂಗ್ ಚೌವ್ಹಾಣ್ ವಿರುದ್ಧ ಪಕ್ಷದಲ್ಲಿಯೇ ಅಸಮಾಧಾನವಿದೆ ಎಂಬ ಮಾತಿದೆ. ಅಲ್ಲದೇ ಬಿಜೆಪಿ ಈ ಬಾರಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಚುನಾವಣೆ ಎದುರಿಸಿದೆ. ಆದ್ದರಿಂದ ಮತ್ತೆ ಅವರನ್ನು ಸಿಎಂ ಮಾಡುವುದಿಲ್ಲ ಎಂಬ ಮಾತಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications