Madhya Pradesh; ಕಮಲ್ ನಾಥ್ ರಾಜೀನಾಮೆ, ಸುಳ್ಳು ಎಂದ ಕಾಂಗ್ರೆಸ್!
ಭೋಪಾಲ್, ಡಿಸೆಂಬರ್ 08; ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ. 230 ಸದಸ್ಯ ಬಲದ ವಿಧಾನಸಭೆಯಲ್ಲಿ 163 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮರಳಿ ಅಧಿಕಾರವನ್ನು ಪಡೆದಿದೆ. ಕಾಂಗ್ರೆಸ್ 66 ಕ್ಷೇತ್ರದಲ್ಲಿ ಗೆದ್ದಿದೆ.
ನವೆಂಬರ್ 17ರಂದು ಒಂದೇ ಹಂತದಲ್ಲಿ ಮಧ್ಯಪ್ರದೇಶ ರಾಜ್ಯದ ವಿಧಾನಸಭೆಗೆ ಮತದಾನ ನಡೆದಿತ್ತು. ಶೇ 76.22ರಷ್ಟು ದಾಖಲೆಯ ಮತದಾನವಾಗಿತ್ತು. ಡಿಸೆಂಬರ್ 3ರ ಭಾನುವಾರ ಚುನಾವಣಾ ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿ 163, ಕಾಂಗ್ರೆಸ್ 66 ಮತ್ತು ಬಿಎಪಿ ಪಕ್ಷ 1 ಸ್ಥಾನದಲ್ಲಿ ಜಯಗಳಿಸಿದೆ.

ಮಧ್ಯಪ್ರದೇಶ ರಾಜ್ಯದ ಚುನಾವಣೆಯ ಸೋಲಿಗೆ ಮಾಜಿ ಮಖ್ಯಮಂತ್ರಿ, ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಹೊಣೆ ಎಂದು ಹಲವು ನಾಯಕರು ಆರೋಪ ಮಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಅವರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿಗಳು ಹಬ್ಬಿದೆ.
ವರದಿ ತಳ್ಳಿ ಹಾಕಿದ ಕಾಂಗ್ರೆಸ್; 77 ವರ್ಷದ ಕಮಲ್ ನಾಥ್ ರಾಜ್ಯ ಕಾಂಗ್ರೆಸ್ನ ಹಿರಿಯ ನಾಯಕರು. ರಾಜ್ಯದ ಮಾಜಿ ಮುಖ್ಯಮಂತ್ರಿ. ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಅವರು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ವರದಿಯನ್ನು ಕಾಂಗ್ರೆಸ್ ತಳ್ಳಿ ಹಾಕಿದೆ.
ಬುಧವಾರ ನವದೆಹಲಿಯಲ್ಲಿ ಕಮಲ್ ನಾಥ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿದ್ದರು. ಆಗ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರ ನೇಮಕದ ಕುರಿತು ಪಕ್ಷ ಶೀಘ್ರವೇ ತೀರ್ಮಾನ ಕೈಗೊಳ್ಳಲಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆದರೆ ಕಾಂಗ್ರೆಸ್ನ ರಾಜ್ಯ ಘಟಕ ಮತ್ತು ಹೈಕಮಾಂಡ್ ಸಹ ಇದು ಸುಳ್ಳು ಸುದ್ದಿ ಎಂದು ಹೇಳಿದೆ.
ಡಿಸೆಂಬರ್ 5ರಂದು ಮಾಜಿ ಮಖ್ಯಮಂತ್ರಿ ಕಮಲ್ ನಾಥ್ಗೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪಕ್ಷ ಸೂಚನೆ ನೀಡಿದೆ ಎಂಬ ಸುದ್ದಿ ಹಬ್ಬಿತ್ತು. ಈ ಸುದ್ದಿಯ ನಡುವೆಯೇ ಕಮಲ್ ನಾಥ್ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ್ದರು.
ಈ ಬಾರಿಯ ಮಧ್ಯಪ್ರದೇಶ ರಾಜ್ಯದ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಅಂದಾಜಿಸಿದ್ದವು. 2024ರ ಲೋಕಸಭೆ ಚುನಾವಣೆಗೂ ಮೊದಲು ಚುನಾವಣೆ ನಡೆದ ರಾಜ್ಯಗಳಲ್ಲಿ ಮಧ್ಯಪ್ರದೇಶ ಸಹ ಒಂದು.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ ಎಂದು ವರದಿಗಳು ಹೇಳಿದ್ದವು. ಆದರೆ ಪ್ರತಿಪಕ್ಷ ಕಾಂಗ್ರೆಸ್ ಕಮಲ್ ನಾಥ್ ನೇತೃತ್ವದಲ್ಲಿ ಜನರ ಬೆಂಬಲಗಳಿಸುವಲ್ಲಿ ವಿಫಲವಾಗಿದೆ. ಬಿಜೆಪಿ 163 ಕ್ಷೇತ್ರಗಳಲ್ಲಿ ಜಯಗಳಿಸಿ ಸ್ಪಷ್ಟ ಬಹುಮತ ಪಡೆದಿದೆ.
ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಜನರ ಆಕ್ರೋಶವಿದ್ದರೂ ಕಾಂಗ್ರೆಸ್ ಪಕ್ಷ ಜನರ ಜೊತೆ ನಿಲ್ಲುವಲ್ಲಿ, ಆಡಳಿತ ಪಕ್ಷದ ವಿರುದ್ಧ ಬೃಹತ್ ಹೋರಾಟ ನಡೆಸಿ, ಜನಾಂದೋಲನ ನಡೆಸುವಲ್ಲಿ ವಿಫಲವಾಗಿದೆ ಎಂಬುದು ಆರೋಪ. ಆದ್ದರಿಂದ ಪಕ್ಷ ಚುನಾವಣೆಯಲ್ಲಿ ಸೋಲು ಕಂಡಿದೆ.
ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ರನ್ನು ಬದಲಾವಣೆ ಮಾಡಿ, 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಅಧ್ಯಕ್ಷರನ್ನು ನೇಮಕ ಮಾಡಬೇಕು. ಯುವ ನಾಯಕರಿಗೆ ಮಣೆ ಹಾಕಬೇಕು ಎಂಬುದು ಬೇಡಿಕೆಯಾಗಿದೆ. ಇಂತಹ ಸಮಯದಲ್ಲಿಯೇ ಕಮಲ್ ನಾಥ್ ರಾಜೀನಾಮೆ ಸುದ್ದಿ ಹೊರಬಂದಿದೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಆದರೆ ಪಕ್ಷದ ಹಿರಿಯ ನಾಯಕರಾದ ಕಮಲ್ ನಾಥ್ ಚಿಂದ್ವಾರಾ ಕ್ಷೇತ್ರದಲ್ಲಿ ಎದುರಾಳಿಯಾಗಿದ್ದ ಬಿಜೆಪಿಯ ವಿವೇಕ್ ಬಂಟಿ ಶಾಹೂ ವಿರುದ್ಧ 36,594 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕ್ಷೇತ್ರದಲ್ಲಿ ಕಮಲ್ನಾಥ್ 1,32,302 ಮತಗಳನ್ನು ಪಡೆದರು. ವಿವೇಕ್ ಬಂಟಿ ಶಾಹೂ 95,708 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ರಾಜ್ಯದಲ್ಲಿ ಕುತೂಹಲ ಕೆರಳಿಸಿದ್ದ ಕ್ಷೇತ್ರದಲ್ಲಿ ಚಿಂದ್ವಾರಾ ಸಹ ಒಂದಾಗಿತ್ತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications