Madhya Pradesh; ಮಧ್ಯಪ್ರದೇಶ ಚುನಾವಣೆ ಗೆದ್ದ ರಾಷ್ಟ್ರೀಯ ನಾಯಕ!
ಭೋಪಾಲ್, ಡಿಸೆಂಬರ್ 03; ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಅಂದಾಜಿಸಿದಂತೆ ಫಲಿತಾಂಶ ಬಂದಿಲ್ಲ. 230 ಸದಸ್ಯ ಬಲದ ವಿಧಾನಸಭೆಯಲ್ಲಿ ಸಂಜೆ 7.40ರ ಮಾಹಿತಿಯಂತೆ ಬಿಜೆಪಿ 164 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಕಾಂಗ್ರೆಸ್ 65 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ.
ರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಹಲವು ಹೊಸ ತಂತ್ರವನ್ನು ರೂಪಿಸಿತ್ತು. ಇನ್ನೂ 125 ಕ್ಷೇತ್ರಗಳ ಚುನಾವಣಾ ಫಲಿತಾಂಶ ಅಧಿಕೃತವಾಗಿ ಚುನಾವಣಾ ಆಯೋಗದಿಂದ ಘೋಷಣೆಯಾಗಬೇಕಿದೆ. ರಾತ್ರಿ 10 ಗಂಟೆಯ ವೇಳೆಗೆ ಅಂತಿಮ ಚಿತ್ರಣ ಲಭ್ಯವಾಗುವ ನಿರೀಕ್ಷೆ ಇದೆ.

ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 65 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಭಾರತೀಯ ಆದಿವಾಸಿ ಪಕ್ಷ 1 ಸ್ಥಾನದಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಗೆಲುವಿನ ಖಾತೆಯನ್ನು ತೆರೆದಿದೆ.
ಚುನಾವಣೆ ಗೆದ್ದ ರಾಷ್ಟ್ರೀಯ ನಾಯಕ; ಬಿಜೆಪಿ ಈ ಬಾರಿಯ ಚುನಾವಣೆಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾರನ್ನು ಕಣಕ್ಕಿಳಿಸಿತ್ತು. ಇಂಧೋರ್-1 ಕ್ಷೇತ್ರದಲ್ಲಿ ಅವರು ಜಯಗಳಿಸಿದ್ದಾರೆ.
ಮೂವರು ಕೇಂದ್ರ ಸಚಿವರು, 7 ಸಂಸದರು ಮತ್ತು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರನ್ನು ಬಿಜೆಪಿ ಕಣಕ್ಕಿಳಿಸುವ ಮೂಲಕ ಅಚ್ಚರಿಯನ್ನು ಮೂಡಿಸಿತ್ತು. ಕೈಲಾಶ್ ವಿಜಯವರ್ಗಿಯಾ ಅವರು 1,58,123 ಮತಗಳನ್ನು ಪಡೆದು 57,939 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕ್ಷೇತ್ರದಲ್ಲಿ ಕಾಂಗ್ರೆಸ್ನ ಸಂಜಯ್ ಶುಕ್ಲಾ ಕೈಲಾಶ್ ಎದುರಾಳಿಯಾಗಿದ್ದರು. ಅವರು 100184 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ರಾಷ್ಟ್ರೀಯ ನಾಯಕರನ್ನು ಕಣಕ್ಕಿಳಿಸಿದ ಬಗ್ಗೆ ಎದ್ದಿದ್ದ ಚರ್ಚೆಗಳಿಗೆ ಕೈಲಾಶ್ ಗೆಲುವಿನ ಮೂಲಕ ಉತ್ತರವನ್ನು ನೀಡಿದ್ದಾರೆ.
ಕೈಲಾಶ್ ವಿಜಯವರ್ಗಿಯ ಮಧ್ಯಪ್ರದೇಶದ 2023ರ ಚುನಾವಣೆಯಲ್ಲಿ ಗಮನ ಸೆಳೆದಿದ್ದ ಬಿಜೆಪಿಯ ಅಭ್ಯರ್ಥಿಗಳಲ್ಲಿ ಒಬ್ಬರು. ಅವರು ಇಂಧೋರ್ನ ಮಾಜಿ ಮೇಯರ್ ಸಹ ಹೌದು. ಇದುವರೆಗೂ ಕೈಲಾಶ್ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇದುವರೆಗೂ ಯಾವುದೇ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋಲು ಕಂಡಿರಲಿಲ್ಲ.
ರಾಷ್ಟ್ರ ರಾಜಕೀಯಕ್ಕೆ ಹೋಗುವ ಮೊದಲು ಅವರು 12 ವರ್ಷಗಳ ಕಾಲ ರಾಜ್ಯದ ವಿವಿಧ ಖಾತೆಗಳ ಸಚಿವರಾಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಮತ್ತೆ ಗೆಲುವು ಕಂಡಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಪ್ರಬಲ ಖಾತೆಯನ್ನೇ ಅವರು ಪಡೆಯಲಿದ್ದಾರೆ.
ಮಧ್ಯಪ್ರದೇಶದ ರಾಜ್ಯದಲ್ಲಿ ಬಿಜೆಪಿ ಗೆಲುವು ಅಭೂತಪೂರ್ವ ಗೆಲುವು ಸಾಧಿಸುವುದು ಮಾತ್ರವಲ್ಲ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಬುಧ್ನಿ ಕ್ಷೇತ್ರದಲ್ಲಿ 1,64,951 ಮತಗಳನ್ನು ಪಡೆದು 104974 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಆದರೆ ಅವರು ಮುಖ್ಯಮಂತ್ರಿಯಾಗಲಿದ್ದಾರೆಯೇ? ಕಾದು ನೋಡಬೇಕಿದೆ.
ಶಿವರಾಜ್ ಸಿಂಗ್ ಚೌವ್ಹಾಣ್ ಎದುರಾಳಿಯಾದ ಕಾಂಗ್ರೆಸ್ನ ವಿಕ್ರಂ ಮಸ್ತಲ್ ಶರ್ಮಾ 59,997 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ರಾಜ್ಯದ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಆದರೆ ಪಕ್ಷದ ರಾಜ್ಯಾಧ್ಯಕ್ಷ ಕಮಲ್ ನಾಥ್ ಚಿಂದ್ವಾರಾ ಕ್ಷೇತ್ರದಲ್ಲಿ 1,29,829 ಮತಗಳನ್ನು ಪಡೆದು 35009 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅಂತಿಮ ಚುನಾವಣಾ ಫಲಿತಾಂಶ ಇನ್ನೂ ಘೋಷಣೆಯಾಗಬೇಕಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications