Madhya Pradesh; ಮಧ್ಯಪ್ರದೇಶದ ಮುಖ್ಯಮಂತ್ರಿ ಯಾರು?
ಭೋಪಾಲ್, ಡಿಸೆಂಬರ್ 03; ಮಧ್ಯಪ್ರದೇಶ ವಿಧಾನಸಭಾ ಚುನಾವಣೆ 2023ರಲ್ಲಿ ಬಿಜೆಪಿ ಅಭೂತಪೂರ್ವ ಜಯಸಾಧಿಸಿದೆ. 5ನೇ ಬಾರಿಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ. ಆದರೆ ಮುಖ್ಯಮಂತ್ರಿ ಯಾರು?. ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅಥವ ಶಿವರಾಜ್ ಸಿಂಗ್ ಚೌವ್ಹಾಣ್?.
ಡಿಸೆಂಬರ್ 3ರ ಭಾನುವಾರ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರಂದು ಮತದಾನ ನಡೆದಿತ್ತು. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 116. ಈಗಾಗಲೇ ಬಿಜೆಪಿ 161 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ.

ರಾಜ್ಯದಲ್ಲಿ ಬಿಜೆಪಿ ಗೆಲುವಿನಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ಪಾತ್ರವನ್ನು ಯಾರೂ ಅಲ್ಲಗಳೆಯುವಂತಿಲ್ಲ. ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದಾಗ 22 ಶಾಸಕರು ಅವರ ಜೊತೆ ಹೋದರು. ಕಮಲ್ನಾಥ್ ಸರ್ಕಾರ ಬಹುಮತ ಕಳೆದುಕೊಂಡು ಪತನಗೊಂಡಿತು. ಈ ಬಾರಿ ಬಿಜೆಪಿ ಗೆಲುವಿನಲ್ಲಿಯೂ ಸಿಂಧಿಯಾ ಪ್ರಭಾವ ಕೆಲಸ ಮಾಡಿದೆ.
ಸಿಎಂ ಯಾರಾಗಲಿದ್ದಾರೆ?; ಜ್ಯೋತಿರಾಧಿತ್ಯ ಸಿಂಧಿಯಾ, ಶಿವರಾಜ್ ಸಿಂಗ್ ಚೌವ್ಹಾಣ್ ಇಬ್ಬರ ಹೆಸರು ಸಹ ಮುಖ್ಯಮಂತ್ರಿ ಹುದ್ದೆಗೆ ಕೇಳಿ ಬರುತ್ತಿದೆ. ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಚುನಾವಣೆಯನ್ನು ಎದುರಿಸಿದೆ.
ಭಾನುವಾರ ಬೆಳಗ್ಗೆ ಜ್ಯೋತಿರಾಧಿತ್ಯ ಸಿಂಧಿಯಾ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಇದುವರೆಗೆ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಫಲಿತಾಂಶ ಘೋಷಣೆಯಾದ ಬಳಿಕ ಈ ಕುರಿತು ಪಕ್ಷ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಹಲವು ಸವಾಲು ಎದುರಿಸಿತ್ತು. ಕೇಂದ್ರ ಸಚಿವರನ್ನು, ಸಂಸದರನ್ನು ಕಣಕ್ಕಿಳಿಸಿ ಪಕ್ಷ ಹೊಸ ತಂತ್ರ ರಚನೆ ಮಾಡಿತ್ತು. ಚುನಾವಣಾ ಪೂರ್ವ ಸಮೀಕ್ಷೆಗಳು ಬಿಜೆಪಿ ಸೋಲು ಕಾಣಲಿದೆ ಎಂದು ಹೇಳಿತ್ತು. ಆದರೆ ಚುನಾವಣಾ ಫಲಿತಾಂಶ ಬಿಜೆಪಿ ಪರವಾಗಿಯೇ ಬಂದಿದೆ.
2018ರ ಚುನಾವಣೆಯಲ್ಲಿ ಕಾಂಗ್ರೆಸ್ 114 ಕ್ಷೇತ್ರಗಳಲ್ಲಿ ಜಯಗಳಿಸಿತು. ಬಹುಮತ ಪಡೆಯಲು 2 ಸ್ಥಾನದ ಕೊರತೆ ಎದುರಾಯಿತು. ಆಗಲೂ ಪಕ್ಷದ ಗೆಲುವಿನಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ಪಾತ್ರ ದೊಡ್ಡದಿತ್ತು. ಅವರು ಮುಖ್ಯಮಂತ್ರಿಯಾಗಲಿದ್ದಾರೆ? ಎಂಬ ಲೆಕ್ಕಾಚಾರವಿತ್ತು. ಆದರೆ ಕಮಲ್ನಾಥ್ ಮುಖ್ಯಮಂತ್ರಿಯಾದರು.
ಜ್ಯೋತಿರಾಧಿತ್ಯ ಸಿಂಧಿಯಾ ಪಕ್ಷದ ವಿರುದ್ಧ ಬಂಡಾಯವೆದ್ದರು. ಬಿಜೆಪಿ ಸೇರಿದರು, 22 ಶಾಸಕರು ಅವರನ್ನು ಹಿಂಬಾಲಿಸಿದರು. ಕಮಲ್ನಾಥ್ ಸರ್ಕಾರ ಬಹುಮತ ಕಳೆದುಕೊಂಡು ಪತನಗೊಂಡಿತು. ಸಿಂಧಿಯಾ ಸಂಸದರಾಗಿ ಕೇಂದ್ರ ವಿಮಾನಯಾನ ಖಾತೆ ಸಚಿವರಾದರು.
ಈ ಬಾರಿಯ ಚುನಾವಣೆಗೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಶಿವರಾಜ್ ಸಿಂಗ್ ಚೌವ್ಹಾಣ್ ಮತ್ತು ಜ್ಯೋತಿರಾಧಿತ್ಯ ಸಿಂಧಿಯಾ ಇಬ್ಬರ ಹೆಸರು ಸಹ ಪ್ರಮುಖವಾಗಿ ಕೇಳಿ ಬರುತ್ತಿದೆ. ಆದರೆ ಯಾರು ಸಿಎಂ?.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications