ಹೆಣ್ಣು ಮಕ್ಕಳ ಹೆಗಲಿಗೆ ನೊಗ ಹೊರಿಸಿದ ಬಡ ರೈತ
ಭೋಪಾಲ್, ಜುಲೈ 9: ಎತ್ತುಗಳನ್ನು ಕೊಳ್ಳಲು ಹಣವಿಲ್ಲದೆ ತನ್ನ ಹೆಣ್ಣು ಮಕ್ಕಳ ಮೂಲಕವೇ ರೈತರೊಬ್ಬರು ನೇಗಿಲು ಎಳೆಸಿದ ಮನಕಲಕುವ ಸುದ್ದಿಯೊಂದು ವರದಿಯಾಗಿದೆ. ಮಧ್ಯ ಪ್ರದೇಶದ ಸೆಹೋರೆ ಜಿಲ್ಲೆಯ ಬಸಂತಪುರಿ ಭಾಗಕ್ಕೆ ಸೇರಿದ ಪಂಗ್ರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದು ಭಾರತದ ಬಡ ರೈತರ ಆರ್ಥಿಕ ಬಿಕ್ಕಟ್ಟಿಗೆ ಕನ್ನಡಿ ಹಿಡಿಯುತ್ತಿದೆ.
ತನ್ನ ಜಮೀನಿನಲ್ಲಿ ಜೋಳದ ಬೆಳೆಗೆ ಹೂಟೆ ಮಾಡಲು ತನ್ನ ಇಬ್ಬರು ಹೆಣ್ಣುಮಕ್ಕಳ ಹೆಗಲಿಗೆ ಸರ್ದಾರ್ ಕಹ್ಲಾ ಎಂಬ ರೈತರು ನೊಗ ಹೊರಿಸಿದ್ದಾರೆ. ಹಣ ಕಾಸಿನ ಕೊರತೆಯಿಂದ ಶಾಲೆ ಬಿಟ್ಟ 14 ವರ್ಷದ ರಾಧಿಕಾ, 11 ವರ್ಷದ ಕುಂತಿ ಈತನ ಮಕ್ಕಳಾಗಿದ್ದು ಅವರ ಮೂಲಕವೇ ನೇಗಿಲು ಎಳೆಸಿ ನೆಲ ಉತ್ತಿದ್ದಾರೆ.

"ಕುಟುಂಬಕ್ಕೆ ಅಗತ್ಯ ಧಾನ್ಯ ಬೆಳೆಯಲು ಭೂಮಿ ಉಳುಮೆ ಮಾಡಬೇಕು. ಆದರೆ ಎತ್ತುಗಳನ್ನು ಖರೀದಿಸಲು ನಮ್ಮ ಬಳಿ ಸಾಕಷ್ಟು ಹಣವಿಲ್ಲ. ಇದರಿಂದ ಮಕ್ಕಳು ಸೇರಿದಂತೆ ನಾವೇ ಉಳುಮೆ ಮಾಡುತ್ತಿದ್ದೇವೆ," ಎಂದು ಬಡ ರೈತ ಸರ್ದಾರ್ ಕಹ್ಲಾ ಹೇಳಿದ್ದಾರೆ. ಆರ್ಥಿಕ ಕೊರತೆ ಕಾರಣ ನನ್ನ ಇಬ್ಬರು ಪುತ್ರಿಯರೂ ಶಾಲಾ ಶಿಕ್ಷಣವನ್ನು ತೊರೆದಿದ್ದಾರೆ ಎಂದು ಕಹ್ಲಾ ಸ್ಪಷ್ಟಪಡಿಸಿದ್ದಾರೆ.
Don't have enough money to buy oxen, ploughing fields to sow of maize crop. Daughter left studies after 8th standard: Sardar Barela, farmer pic.twitter.com/ofsRIa0DsA
— ANI (@ANI_news) July 9, 2017
ಈ ವಿಚಾರ ರಾಷ್ಟ್ರೀಯ ಸುದ್ದಿಯಾಗುತ್ತಿದ್ದಂತೆ ಬಸಂತಪುರಿಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಆಶಿಶ್ ಶರ್ಮಾ ಮಾತನಾಡಿದ್ದು, "ಈ ವಿಷಯ ಸಂಬಂಧ ಗಮನ ಹರಿಸಿಲಾಗುವುದು. ಸರ್ಕಾರಿ ಯೋಜನೆಗಳ ಅಡಿ ಅವರಿಗೆ ಸೂಕ್ತ ಸಹಾಯ ನೀಡಲಾಗುವುದು," ಎಂದು ಹೇಳಿದ್ದಾರೆ.
-
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
KSRTC: ಕನಕಪುರ-ಬೆಂಗಳೂರು ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ, 20 ವರ್ಷದ ಬಳಿಕ 4 ಬಸ್ ಸಂಚಾರ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ












Click it and Unblock the Notifications