ಟಿಕೆಟ್ ಹಂಚಿಕೆಗೂ ಮುನ್ನವೇ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ
ಭೋಪಾಲ್, ಅಕ್ಟೋಬರ್ 29: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಇನ್ನೊಂದು ತಿಂಗಳು ಬಾಕಿ ಉಳಿದಿದ್ದು, ಟಿಕೆಟ್ ಹಂಚಿಕೆಯ ಭರಾಟೆ ಆರಂಭವಾಗಿದೆ.
ಸದ್ಯದಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳ್ಳಲಿದ್ದು, ಅದಕ್ಕೂ ಮುನ್ನವೇ ಕಾಂಗ್ರೆಸ್ ಪಾಳೆಯದಲ್ಲಿ ಅಸಮಾಧಾನ ಭುಗಿಲೆದ್ದಿದೆ.
ಟಿಕೆಟ್ ಹಂಚಿಕೆಯ ಸಮಯದಲ್ಲಿ ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸಲಾಗುತ್ತಿದೆ ಎಂಬ ಆಕ್ರೋಶವೂ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಚುನಾವಣೆಯ ಕೊನೆಯ ಕ್ಷಣಗಳಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳಿಗೆ ಕಾರಣವಾದರೆ ಅಚ್ಚರಿಯಿಲ್ಲ.
ಮಧ್ಯಪ್ರದೇಶ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದೆ. ಸದ್ಯದಲ್ಲೇ ಅದು ಬಿಡುಗಡೆಯಾಗಲಿದ್ದು, ಈ ಪಟ್ಟಿಯನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೇ ಅಂತಿಮಗೊಳಿಸಿದ್ದಾರೆ.

ಯಾರ್ಯಾರಿಗೆ ಟಿಕೆಟ್ ಭಾಗ್ಯ?!
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಜೊತೆ ಬಿಎಸ್ಪಿ ಮೈತ್ರಿ ಮಾಡಿಕೊಳ್ಳದಿದ್ದರೂ ಬಿಎಸ್ಪಿಯಿಂದ ಟಿಕೆಟ್ ವಂಚಿತರಾದ ಹಲವರು ಕಾಂಗ್ರೆಸ್ ಸೇರಿದ್ದಾರೆ. ಅವರಲ್ಲಿ ಗೆಲ್ಲಬಹುದಾದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಲು ನಿರ್ಧರಿಸಿದೆ. ಇದರಿಂದ ಮೂಲ ಕಾಂಗ್ರೆಸ್ಸಿಗರಲ್ಲಿ ಅಸಮಾಧಾನ ಉಂಟಾಗಿದೆ. ಬಹುಜನ ಸಮಾಜವಾದಿ(ಬಿಎಸ್ಪಿ) ಮತ್ತು ಸಮಾಜವಾದಿ(ಎಸ್ಪಿ) ಪಕ್ಷದಿಂದ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಇವರನ್ನು ಓಲೈಸುವ ಅವಸರದಲ್ಲಿರುವ ಪಕ್ಷ, ಮೂಲ ಕಾಂಗ್ರೆಸ್ಸಿಗರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬ ಕೂಗು ಕೇಳಿಬರುತ್ತಿದೆ.

ಭುಗಿಲೆದ್ದ ಆಕ್ರೋಶ!
ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಸೋಲು ಕಂಡವರಿಗೂ ಕಾಂಗ್ರೆಸ್ ಟಿಕೆಟ್ ನೀಡಿದೆ ಎನ್ನಲಾಗಿದೆ. ಇವರೆಲ್ಲ ಬೇರೆ ಪಕ್ಷದಿಂದ ಕಾಂಗ್ರೆಸ್ಸಿಗೆ ಟಿಕೆಟ್ ಗಾಗಿಯೇ ಸೇರಿದವರು ಎಂಬುದು ಮೂಲಕಾಂಗ್ರೆಸ್ಸಿಗರ ವಾದ. 25,000 ಮತಗಳ ಅಂತರದಿಂದ ಸೋಲುಂಡವರಿಗೂ ಟಿಕೆಟ್ ನೀಡಲಾಗಿದೆ. ಈ ಬಗ್ಗೆ ವಿಚಾರಿಸಿದರೆ, 'ಕಾಂಗ್ರೆಸ್ ಅಭ್ಯರ್ಥಿ ಇದಕ್ಕಿಂತಲೂ ಹೆಚ್ಚಿನ ಅಮತರದಲ್ಲಿ ಸಸೋತಿದ್ದಾರೆ' ಎಂಬ ಸಮಜಾಯಿಷಿ ಸಿಗುತ್ತಿದೆ! ಪಕ್ಷದ ಕುರಿತು ನಿಷ್ಠೆಯಿಂದ ಕೆಲಸ ಮಾಡಿದವರನ್ನು ಹೀಗೆ ನಡೆಸಿಕೊಳ್ಳುತ್ತಿರುವುದು ಕಾರ್ಯಕರ್ತರ ಮಟ್ಟದಲ್ಲೂ ಸಾಕಷ್ಟು ಅಸಮಾಧಾನ ಸೃಷ್ಟಿಸಿದೆ. ಚುನಾವಣೆಯ ಸಮಯದಲ್ಲಿ ಈ ಆಕ್ರೋಶ ಸ್ಫೋಟವಾದರೆ ಅಚ್ಚರಿಯೇನಿಲ್ಲ.

ಸಾಮೂಹಿಕ ರಾಜೀನಾಮೆಯ ಬೆದರಿಕೆ
ಇಲ್ಲಿನ ರೆವಾ ಮತ್ತು ಬುಂದೇಲ್ಖಂಡ್, ಪನ್ನಾ ಪ್ರದೇಶಗಳಲ್ಲಿ ಟಿಕೆಟ್ ಹಂಚಿಕೆ ದೊಡ್ಡ ತಲೆನೋವಾಗಿದೆ. ಕ್ರಿಮಿನಲ್ ಪ್ರಕರಣಗಳಿರುವ ಮತ್ತು ಗಣಿ ಹಗರಣಗಳಲ್ಲಿ ಸಿಲುಕಿಕೊಂಡ ನಾಯಕರಿಗೆ ಟಿಕೆಟ್ ನೀಡಿದ್ದೇ ಆದಲ್ಲಿ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಸ್ಥಳಿಯ ನಾಯಕರು ಬೆದರಿಕೆ ಒಡ್ಡಿದ್ದಾರೆ! ಬಿಎಸ್ಪಿಯಿಂದ ಬಂದ ಮಹೇಂದರ್ ವರ್ಮಾ, ಬೃಜೇಂದ್ರ ಕುಮಾರ್ ವ್ಯಾಸ್ ಮತ್ತು ಎಸ್ಪಿಯಿಂದ ಬಂದ ಚರಣ್ ಸಿಂಗ್ ಯಾದವ್ ಇವರುಗಳಿಗೆ ಟಿಕೆಟ್ ನೀಡುವುದು ಸ್ಥಳೀಯ ನಾಯಕರಿಗೆ ಸುತಾರಾಂ ಇಷ್ಟವಿಲ್ಲ!

ನ.28 ರಂದು ಚುನಾವಣೆ
ಮಧ್ಯಪ್ರದೇಶದಲ್ಲಿ ನವೆಂಬರ್ 28 ರಂದು ಚುನಾವಣೆ ನಡೆಯಲಿದ್ದು, ಡಿ.11 ರಂದು ಫಲಿತಾಂಶ ಹೊರಬೀಳಲಿದೆ. ಒಟ್ಟು ವಿಧಾನಸಭಾ ಕ್ಷೇತ್ರಗಳು 230. ಪ್ರಸ್ತುತ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. ಅಧಿಕಾರ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 116.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications