Madhya Pradesh schools: ಮಧ್ಯಪ್ರದೇಶದ ಶಾಲೆಗಳಲ್ಲಿ ಭಗವದ್ಗೀತೆ, ರಾಮಾಯಣ, ಮಹಾಭಾರತ ಬೋಧಿಸಲಾಗುತ್ತದೆ: ಸಿಎಂ
ಭೋಪಾಲ್, ಜನವರಿ 23: ಭಗವದ್ಗೀತೆ, ರಾಮಾಯಣ, ಮಹಾಭಾರತ ಮತ್ತು ಇತರ ಧಾರ್ಮಿಕ ಪುಸ್ತಕಗಳ ಆಯ್ದ ಭಾಗಗಳನ್ನು ಮಧ್ಯಪ್ರದೇಶದ ಶಾಲೆಗಳಲ್ಲಿ ಬೋಧಿಸಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ಹೇಳಿದ್ದಾರೆ.
"ರಾಮಾಯಣ, ಮಹಾಭಾರತ, ವೇದ, ಉಪನಿಷತ್ತು ಮತ್ತು ಶ್ರೀಮದ್ ಭಗವದ್ಗೀತೆ ನಮ್ಮ ಅಮೂಲ್ಯ ಗ್ರಂಥಗಳು. ಈ ಪುಸ್ತಕಗಳು ಮನುಷ್ಯನನ್ನು ನೈತಿಕವಾಗಿ ಮತ್ತು ಪರಿಪೂರ್ಣನನ್ನಾಗಿ ಮಾಡುವ ಸಾಮರ್ಥ್ಯ ಹೊಂದಿವೆ. ಆದ್ದರಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನಮ್ಮ ಧಾರ್ಮಿಕ ಪುಸ್ತಕಗಳ ಬೋಧನೆಯನ್ನು ಜಾರಿಗೊಳಿಸಲಾಗುವುದು" ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
Ramayana, Mahabharata, Vedas, Upanishads will be taught to children in the state...There're some people in the country who take pleasure in criticising our culture, spirituality, religion and great men, but they don't now much harm they're causing to the country: MP CM SS Chouhan pic.twitter.com/hjdUNGwkv0
— ANI MP/CG/Rajasthan (@ANI_MP_CG_RJ) January 23, 2023
"ಶಾಲೆಗಳಲ್ಲಿ ಈ ಪವಿತ್ರ ಪುಸ್ತಕಗಳ ಆಯ್ದ ಭಾಗಗಳನ್ನು ಕಲಿಸುವ ಮೂಲಕ, ನಾವು ನಮ್ಮ ಮಕ್ಕಳನ್ನು ನೈತಿಕತೆ ಹೊಂದಿರುವ ಮತ್ತು ಪರಿಪೂರ್ಣ ಮನುಷ್ಯರನ್ನಾಗಿ ಮಾಡುತ್ತೇವೆ" ಎಂದು ತಿಳಿಸಿದ್ದಾರೆ.

"ಶಿಕ್ಷಣವು ಮಾನವನನ್ನು ಮನುಷ್ಯನನ್ನಾಗಿ ಮಾಡುವಂಥದ್ದು, ನೈತಿಕ ಶಿಕ್ಷಣ ಮತ್ತು ಆಧ್ಯಾತ್ಮಿಕ ಶಿಕ್ಷಣ ಎಲ್ಲರಿಗೂ ಅಗತ್ಯ, ಸ್ವಾಮಿ ವಿವೇಕಾನಂದರು ನೈತಿಕ ಶಿಕ್ಷಣದ ಅಗತ್ಯತೆಯನ್ನು ಒತ್ತಿ ಹೇಳಿದ್ದಾರೆ. ವಿದ್ಯಾಭಾರತಿ ಸಂಸ್ಥೆಯು ಈ ನೈತಿಕ ಶಿಕ್ಷಣವನ್ನು ನೀಡುತ್ತದೆ" ಎಂದು ಮಾಹಿತಿ ನೀಡಿದ್ದಾರೆ.
"ಹೇಳಲು ಬೇಸರವಾದರೂ ನಿಜ ಏನೆಂದರೆ, ನಮ್ಮ ದೇಶದಲ್ಲಿ ಕೆಲವರು ನಮ್ಮ ಸಂಸ್ಕೃತಿ, ಸಂಪ್ರದಾಯ, ಜೀವನ ತತ್ವಗಳು, ಮಹಾಪುರುಷರು, ಆಧ್ಯಾತ್ಮಿಕತೆ ಮತ್ತು ಧರ್ಮವನ್ನು ಟೀಕಿಸುವುದನ್ನು ಆನಂದ ಪಡುತ್ತಾರೆ. ಅಂತಹ ಜನರಿಗೆ ಅವುಗಳ ಮಹತ್ವ ತಿಳಿದಿಲ್ಲ, ಅವರು ಈ ಸಂಸ್ಕೃತಿಯನ್ನು ಹಾನಿ ಮಾಡುತ್ತಿದ್ದಾರೆ ಎಂದು ಅವರಿಗೆ ತಿಳಿದಿಲ್ಲ" ಎಂದು ಟೀಕಿಸಿದ್ದಾರೆ.
ಮುಂದುವರಿದು, "ರಾಮನಿಲ್ಲದೆ ಈ ದೇಶವಿಲ್ಲ, ನಮ್ಮೆಲ್ಲರಲ್ಲೂ ರಾಮನಿದ್ದಾನೆ, ಈ ದೇಶದಲ್ಲಿ ಸುಖ ಬಂದಾಗ ರಾಮನ ಹೆಸರನ್ನು ಉಚ್ಚರಿಸಲಾಗುತ್ತದೆ. ಹಾಗೇಯೇ ದುಃಖವಿದ್ದಾಗಲೂ ರಾಮನ ಹೆಸರನ್ನು ಉಚ್ಚರಿಸಲಾಗುತ್ತದೆ. ಇಂತಹ ಮಹಾಪುರುಷರನ್ನು ಅವಮಾನಿಸುವವರಿದ್ದಾರೆ. ಇದೆಲ್ಲವನ್ನೂ ಸಹಿಸುವುದಿಲ್ಲ" ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications