ಐದು ಹೆಣ ಬಿದ್ದ ಮೇಲೆ ರೈತರ ಕೂಗಿಗೆ ತಲೆಬಾಗಿದ ಮಧ್ಯ ಪ್ರದೇಶ ಸರ್ಕಾರ
ರೈತ ಚಳುವಳಿಗೆ ಕೊನೆಗೂ ತಲೆಬಾಗಿದ ಮಧ್ಯಪ್ರದೇಶ. ರೈತರ ಸುಮಾರು 6 ಸಾವಿರ ಕೋಟಿ ರು. ಸಾಲ ಮನ್ನಾಕ್ಕೆ ಒಪ್ಪಿಗೆ. ರೈತರ ಸಾಲದೊಂದಿಗೆ ಬಡ್ಡಿಯನ್ನೂ ಮನ್ನಾ ಮಾಡಲು ಒಪ್ಪಿಗೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ನೇತೃತ್ವದ ಸಚಿವ ಸಂಪುಟದಲ್ಲಿ ನಿರ್ಧಾರ
ಮಂದ ಸೌರ್ (ಮಧ್ಯ ಪ್ರದೇಶ), ಜೂನ್ 8: ಸಾಲ ಮನ್ನಾ ಹಾಗೂ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ನಡೆಸುತ್ತಿದ್ದ ಮಧ್ಯಪ್ರದೇಶ ಸರ್ಕಾರದ ರೈತರ ಬೇಡಿಕೆಗಳಿಗೆ ಕೊನೆಗೂ ಮಧ್ಯ ಪ್ರದೇಶ ಸರ್ಕಾರ ಒಪ್ಪಿದೆ.
ಕಳೆದ ಕೆಲವಾರು ದಿನಗಳಿಂದಲೂ ನಡೆಯುತ್ತಿದ್ದ ರೈತರ ಚಳುವಳಿ ಹಿಂಸಾಚಾರಕ್ಕೆ ಸಿಲುಕಿದ ಇತ್ತೀಚೆಗೆ ಗೋಲಿಬಾರ್ ನಡೆಸಿದ್ದ ಮಧ್ಯಪ್ರದೇಶದ ಪೊಲೀಸರು 5 ರೈತರ ಸಾವಿಗೆ ಕಾರಣವಾಗಿದ್ದರು.

ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ದರಿಂದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ನೇತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ರೈತರ ಸಾಲ ಹಾಗೂ ಅದರ ಮೇಲಿನ ಬಡ್ಡಿಯನ್ನೂ ಮನ್ನಾ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಸುಮಾರು 6 ಸಾವಿರ ಕೋಟಿ ರು.ಗಳಷ್ಟು ರೈತರ ಸಾಲ ಮನ್ನಾ ಮಾಡಲು ಅಲ್ಲಿನ ರಾಜ್ಯ ಸರ್ಕಾರ ನಿರ್ಧರಿಸಿದೆ. ಇತ್ತೀಚೆಗೆ ಶುರುವಾಗಿದ್ದ ರೈತರ ಚಳವಳಿಯು ಜೂನ್. 7ರಂದು ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ಗೋಲಿಬಾರ್ ನಡೆಸಿದ್ದರು. ಆಗ, 6 ರೈತರು ಸಾವಿಗೀಡಾಗಿದ್ದರು.
ಆದರೆ, ತಾವೇ ಮಾಡಿದ್ದ ಗೋಲಿಬಾರ್ ಅನ್ನೂ ಪೊಲೀಸರು ಒಪ್ಪಿಕೊಂಡಿರಲಿಲ್ಲ. ಚಳುವಳಿ ನಿರತ ರೈತರ ಗುಂಪಿನಲ್ಲಿದ್ದ ಯಾರೋ ದುಷ್ಕರ್ಮಿಗಳು ಗೋಲಿಬಾರ್ ಮಾಡಿದ್ದಾರೆಂದು ಈ ಪ್ರಕರಣವನ್ನು ತೇಲಿಸಲು ಹೊರಟಿದ್ದರು.
ಅತ್ತ ಗೃಹ ಸಚಿವ ಭೂಪೇಂದ್ರ ಸಿಂಗ್ ಕೂಡಾ, ಭೂಮಿ ತಾಯಿಯ ಮಕ್ಕಳ ಸಾವಿಗೆ ಪೊಲೀಸರು ಕಾರಣರಲ್ಲ ಎಂದ ಹೇಳುವ ಮೂಲಕ ವಿವಾದಕ್ಕೀಡಾಗಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications