Kunal Kamra: ಕುನಾಲ್ ಕಾಮ್ರಾಗೆ ಬಿಗ್ ರಿಲೀಫ್ ಕೊಟ್ಟ ಮದ್ರಾಸ್ ಹೈಕೋರ್ಟ್
ಬಂಧನದ ಭೀತಿಯಲ್ಲಿದ್ದ ಸ್ಟ್ಯಾಂಡ್ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾಗೆ ಮದ್ರಾಸ್ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕುನಾಲ್ ವಿರುದ್ಧ ಮುಂಬೈನಲ್ಲಿ ದಾಖಲಾಗಿರುವ ಎಫ್ಐಆರ್ ಗೆ ಸಂಬಂಧಿಸಿದಂತೆ ಶುಕ್ರವಾರ ಮದ್ರಾಸ್ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಬಗ್ಗೆ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಕುನಾಲ್ ವಿರುದ್ಧ ದೂರು ದಾಖಲಾಗಿತ್ತು.
ನ್ಯಾಯಮೂರ್ತಿ ಸುಂದರ್ ಮೋಹನ್ ಅವರು ಕುನಾಲ್ ಕಾಮ್ರಾ ಅವರಿಗೆ ಏಪ್ರಿಲ್ 7ರವರೆಗೆ ನಿರೀಕ್ಷಣಾ ಜಾಮೀನು ನೀಡಿದೆ. ತಮಿಳುನಾಡು ಸರ್ಕಾರ ಮತ್ತು ಮುಂಬೈನ ಖಾರ್ ಪೊಲೀಸ್ ಠಾಣೆಗೆ ನೋಟಿಸ್ ಜಾರಿ ಮಾಡಿದೆ.

ಕುನಾಲ್ ಕಾಮ್ರಾ ಪರ ವಕೀಲ ವಿ ಸುರೇಶ್ ವಾದ ಮಾಡಿದರು. ಕುನಾಲ್ಗೆ ಏಕನಾಥ್ ಶಿಂಧೆ ನಾಯಕತ್ವದ ಶಿವಸೇನೆಯ ಸದಸ್ಯರು, ಮಂತ್ರಿಗಳು ಸೇರಿದಂತೆ ಹಲವರಿಂದ ಕೊಲೆ ಬೆದರಿಕೆ ಮತ್ತು ದೈಹಿಕ ಹಲ್ಲೆಯ ಬೆದರಿಕೆಗಳು ಬರುತ್ತಿವೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಕುನಾಲ್ ಕಾಮ್ರಾ ಯಾರ ಹೆಸರನ್ನೂ ಉಲ್ಲೇಖಿಸಿಲ್ಲ, ಅವರು ಕೋಟ್ಯಧಿಪತಿಯ ಮಗನ ಬಗ್ಗೆ ಮತ್ತು ಇತರ ಹಲವು ವಿಚಾರಗಳ ಬಗ್ಗೆ ಹಾಸ್ಯ ಮಾಡಿದ್ದಾರೆ ಎಂದು ವಕೀಲ ಸುರೇಶ್ ವಾದಿಸಿದರು. ಅದೆಲ್ಲವೂ ವಿಡಂಬನಾತ್ಮಕವಾಗಿ ಮಾಡಿದ ಹಾಸ್ಯವಾಗಿದೆ. ವಿಡಂಬನೆಯು ನಾಗರಿಕರ ಮೂಲಭೂತ ವಾಕ್ ಸ್ವಾತಂತ್ರ್ಯದ ಹಕ್ಕಿನ ಅಂಗೀಕೃತ ಭಾಗವಾಗಿದೆ ಎಂದು ವಾದಿಸಿದರು.
ವಾದ ವಿವಾದ ಕೇಳಿದ ಮದ್ರಾಸ್ ಹೈಕೋರ್ಟ್, ಅರ್ಜಿದಾರರು ಸ್ಟ್ಯಾಂಡ್-ಅಪ್ ಹಾಸ್ಯಗಾರ. ಜನವರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಡಿದ್ದ ಹಾಸ್ಯದ ತುಣುಕುಗಳ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ. ಅರ್ಜಿದಾರರು ತಮಗೆ ಜೀವ ಬೆದರಿಕೆ ಇದೆ, ಮಹಾರಾಷ್ಟ್ರದ ನ್ಯಾಯಾಲಗಳನ್ನು ಸಂಪರ್ಕಿಸಲು ಆಗುತ್ತಿಲ್ಲ ಎಂದಿದ್ದಾರೆ. ಈ ನ್ಯಾಯಾಲದ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಒಲವು ತೋರುತ್ತಿದೆ ಎಂದು ಹೇಳಿದೆ.
ಹಲವು ಎಫ್ಐಆರ್ ದಾಖಲು
ಏಕನಾಥ್ ಶಿಂಧೆ ಅವರ ವಿರುದ್ಧದ ಹೇಳಿಕೆ ನೀಡಿದ್ದಕ್ಕಾಗಿ ಕುನಾಲ್ ಕಾಮ್ರಾ ವಿರುದ್ಧ ಹಲವು ಎಫ್ಐಆರ್ ದಾಖಲಾಗಿವೆ. ಕಾಮ್ರಾ ಶುಕ್ರವಾರ ಬೆಳಿಗ್ಗೆ ಮದ್ರಾಸ್ ಹೈಕೋರ್ಟ್ಗೆ ಪ್ರಯಾಣಿಕ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು.
ವಕೀಲ ಸುರೇಶ್ ತಮಿಳುನಾಡಿನ ವಿಲ್ಲುಪುರಂ ಪಟ್ಟಣದ ಖಾಯಂ ನಿವಾಸಿಯಾಗಿದ್ದು, ಮದ್ರಾಸ್ ಹೈಕೋರ್ಟ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆಲಿಸಲು ನ್ಯಾಯವ್ಯಾಪ್ತಿಯನ್ನು ಹೊಂದಿದೆ ಎಂದು ಸೂಚಿಸಿ, ಕಮ್ರಾ ಅವರ ಅರ್ಜಿಯ ತುರ್ತು ವಿಚಾರಣೆ ಮಾಡಬೇಕು ಎಂದು ಮನವಿ ಮಾಡಿದರು.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications