ಮಹಿಳಾ ಪೊಲೀಸ್ ಪೇದೆಗೆ ಲಿಂಗ ಬದಲಾವಣೆಗೆ ಅವಕಾಶ ನೀಡಿದ ಸರ್ಕಾರ
ಭೋಪಾಲ್, ಆಗಸ್ಟ್ 17: ಮನುಷ್ಯನಿಗೆ ಇರವಂತಹ ಆಸೆಗಳಿಗೆ ಮೀತಿಯೆ ಇಲ್ಲದಾಗಿದೆ. ಇತ್ತೀಚೆಗೆ ವಿದೇಶದಲ್ಲೊಬ್ಬ ವ್ಯಕ್ತಿ ನಾಯಿ ಆಗುವ ಆಸೆ ಕಂಡಿದ್ದ. ಇದೀಗ ಮಹಿಳಾ ಪೊಲೀಸ್ ಪೇದೆ ಪುರುಷನಾಗಲು ಬಯಸಿ ಸರ್ಕಾರದಿಂದಲೇ ಅನುಮತಿ ಪಡೆಯುವಲ್ಲಿ ಅವರು ಯಶಸ್ವಿಯಾಗಿದ್ದಾರೆ.
ಮಧ್ಯಪ್ರದೇಶದ ಭೋಪಾಲ್ ನಲ್ಲಿ ಮಹಿಳಾ ಪೊಲೀಸ್ ಕಾನ್ಸ್ ಟೆಬಲ್ವೊಬ್ಬರು ಪುರುಷನಾಗಿ ಬದಲಾಗುವ ಆಸೆ ವ್ಯಕ್ತಪಡಿಸಿದ್ದರು. ಈ ಸಂಬಂಧ ಲಿಂಗ ಬದಲಾವಣೆ ಅವಕಾಶ ನೀಡುವಂತೆ ಅವರು ಆಪರೇಷನ್ ಮಾಡಿಸಿಕೊಳ್ಳಲು ಅನುಮತಿ ಕೋರಿದ್ದರು. ಅವರ ಕೋರಿಕೆಗೆ ಸಹಮತ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಸರ್ಕಾರ ಲಿಂಗ ಬದಲಾವಣೆಯ ಆಪರೇಷನ್ ಮಾಡಿಸಿಕೊಳ್ಳಲು ಗ್ರೀನ್ ಸಿಗ್ನಲ್ ನೀಡಿದೆ.

ಪುರುಷನಾಗಿ ಬದಲಾಗುವ ಇಂಗಿತ ವ್ಯಕ್ತಪಡಿಸಿದ್ದ ಮಹಿಳಾ ಪೇದೆ ಹೆಸರು ದೀಪಿಕಾ ಕೊಥಾರಿ ಎಂದು ಗೊತ್ತಾಗಿದೆ. ದೀಪಿಕಾ ಆವರು ಮಧ್ಯಪ್ರದೇಶದ ರಾತ್ಲಮ್ ಜಿಲ್ಲೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಲಿಂಗ ಬದಲಾವಣೆ ಬಯಸಿ ಅವರು ಗೃಹ ಇಲಾಖೆಗೆ 2022ರಲ್ಲಿ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಪುರಸ್ಕರಿಸಿರುವ ಗೃಹ ಇಲಾಖೆ ಶಸ್ತ್ರಚಿಕಿತ್ಸೆಗೆ ಅನುಮತಿ ನೀಡಿದೆ.
ಗೃಹ ಇಲಾಖೆ ಪ್ರತಿಕ್ರಿಯೆ
ಈ ಮೂಲಕ ಲೈಂಗಿಕ ಬದಲಾವಣೆಗೆ ಅನುಮತಿ ಪಡೆದ ಮಧ್ಯಪ್ರದೇಶ ರಾಜ್ಯದ ಎರಡನೇ ಮಹಿಳಾ ಪೊಲೀಸ್ ಪೇದೆ ಇವರಾಗಿದ್ದಾರೆ ಎಂದು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೇಶ್ ಜೋಹರಾ ತಿಳಿಸಿದ್ದಾರೆ.
ರಾಜ್ಯ ಗೃಹ ಇಲಾಖೆ ಸೋಮವಾರ ಹೊರಡಿಸಿದ ಆದೇಶದಲ್ಲಿ, ಕೊಠಾರಿ 'ಲಿಂಗ ಗುರುತಿನ ಅಸ್ವಸ್ಥತೆ' ಹೊಂದಿದ್ದರು.
ಪೇದೆ ಸಲ್ಲಿಸಿದ್ದ ವೈದ್ಯಕೀಯ ವರದಿಗಳನ್ನು ಪರಿಶೀಲಿಸಲಾಗಿದೆ. ಅವುಗಳ ಆಧಾರದ ಮೇಲೆ ಲಿಂಗ ಬದಲಾವಣೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದದೆ.
ಸರ್ಕಾರಿ ಉದ್ಯೋಗಗಿಳಿಗೆ ಲಿಂಗ ಬದಲಾವಣೆ ಅವಕಾಶ ನೀಡುವಲ್ಲಿ ಯಾವುದೇ ಸ್ಪಷ್ಟ ನಿಯಮಗಳಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಲಿಂಗ ಬದಲಾವಣೆಯ ಬಳಿಕ ಪುರುಷನಾಗುವ ದೀಪಿಕಾ ಅವರಿಗೆ ಮಹಿಳಾ ಉದ್ಯೋಗಿಗಳಿಗೆ ಸಿಗುವ ಯಾವ ಸೌಕರ್ಯಗಳು ಸಿಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕಾನೂನು ಇಲಾಖೆ, ಸುಪ್ರೀಂ ಕೋರ್ಟ್ ತೀರ್ಪನ್ನು ಪರಿಗಣಿಸಿದ ನಂತರವೇ ದೀಪಿಕಾ ಅವರಿಗೆ ಲಿಂಗ ಬದಲಾವಣೆಗೆ ಅನುಮತಿ ನೀಡುವ ನಿರ್ಧಾರ ಮಾಡಲಾಯಿತು ಎಂದು ಸರ್ಕಾರ ಮಾಹಿತಿ ನೀಡಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications