ಅಮಿತಾಬ್, ಮಾಧುರಿ ವಿರುದ್ಧ ಎಫ್ ಐಆರ್ ಹಾಕಿ: ಕೋರ್ಟ್
ಮುಜಾಫರ್ ನಗರ, ಜೂ. 02: ನೆಸ್ಲೆ ಸಂಸ್ಥೆಯ 2 ಮಿನಿಟ್ ನ ರೆಡಿಮೇಡ್ ಫುಡ್ ಮ್ಯಾಗಿ ಉತ್ಪನ್ನಗಳ ಕಳಪೆ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿನ ಸ್ಥಳೀಯ ನ್ಯಾಯಾಲಯವೊಂದು ಎಲ್ಲಾ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ತೀವ್ರಗೊಳಿಸುವಂತೆ ಪೊಲೀಸರಿಗೆ ಆದೇಶಿಸಿದೆ.
ಮ್ಯಾಗಿ ಪರ ಪ್ರಚಾರ ನಡೆಸಿದ ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್ ಹಾಗೂ ಪ್ರೀತಿ ಜಿಂಟಾ ವಿರುದ್ಧ ಎಫ್ ಐಆರ್ ದಾಖಲಿಸಲಾಗುತ್ತದೆ.
ನೆಸ್ಲೆ ಸಂಸ್ಥೆಯ 2 ಮಿನಿಟ್ ನ ರೆಡಿಮೇಡ್ ಫುಡ್ ಮ್ಯಾಗಿ ಉತ್ಪನ್ನಗಳ ಪರ ಪ್ರಚಾರ ನಡೆಸಿದ್ದಕ್ಕೆ ನೋಟಿಸ್ ಪಡೆದಿದ್ದ ಮಾಧುರಿ ದೀಕ್ಷಿತ್, ಅಮಿತಾಬ್ ಬಚ್ಚನ್, ನಟಿ ಪ್ರೀತಿ ಜಿಂಟಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನೆಸ್ಲೆ ಸಂಸ್ಥೆ ಸೇರಿ ಐವರ ವಿರುದ್ಧ ಪ್ರತ್ಯೇಕ ಪ್ರಕರಣಗಳು ಬಾರಾಬಂಕಿ ಎಸಿಜೆಎಂ ಕೋರ್ಟಿನಲ್ಲಿ ದಾಖಲಾಗಿದೆ.
ಎಫ್ಎಸ್ಡಿಎ ಆಯುಕ್ತ ಪಿ.ಪಿ.ಸಿಂಗ್ರವರ ಅನುಮತಿ ಮೇರೆಗೆ ಇಲ್ಲಿನ ಹೆಚ್ಚುವರಿ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ನೆಸ್ಲೆ ಇಂಡಿಯಾ ವಿರುದ್ಧ ಪ್ರಕರಣವೊಂದನ್ನು ದಾಖಲಿಸಲಾಗಿದೆ ಎಂದು ಬಾರಾಬಂಕಿಯ ಆಹಾರ ಸುರಕ್ಷತಾ ಅಧಿಕಾರಿ ವಿ.ಕೆ.ಪಾಂಡೆ ತಿಳಿಸಿದ್ದಾರೆ. [ಮ್ಯಾಗಿ ಪರ ಪ್ರಚಾರ, ಮಾಧುರಿ, ಬಿಗ್ ಬಿ, ಪ್ರೀತಿ ಮೇಲೆ ಕೇಸ್]

ನೆಸ್ಲೆ ಇಂಡಿಯಾದ ಮ್ಯಾಗಿ ಉತ್ಪನ್ನಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಮೊನೊಸೋಡಿಯಂ ಗ್ಲುಟಮೇಟ್ ಮತ್ತು ಸತುವಿನ ಅಂಶಗಳು ಮಾದರಿ ಪರೀಕ್ಷೆಯ ಸಂದರ್ಭದಲ್ಲಿ ಕಂಡುಬಂದಿತ್ತು.
ಬಾರಾಬಂಕಿಯಲ್ಲಿರುವ ಈಸೀ ಡೇ ಅಂಗಡಿ ಮಳಿಗೆಯಿಂದ ಮ್ಯಾಗಿಯ ಮಾದರಿ ಪ್ಯಾಕೆಟ್ಗಳನ್ನು ಎಫ್ಎಸ್ಡಿಎ ಅಧಿಕಾರಿಗಳು ಸಂಗ್ರಹಿಸಿದ್ದು, ಪ್ರಯೋಗಾಲಯದಲ್ಲಿ ಪರೀಕ್ಷೆಗೆಂದು ಕಳುಹಿಸಿದ್ದರು. [ಮ್ಯಾಗಿ ಪರ ಪ್ರಚಾರ, ಮಾಧುರಿಗೆ ಬಂತು ಗ್ರಹಚಾರ!]
ಮ್ಯಾಗಿ ಉತ್ಪನ್ನಗಳಲ್ಲಿ ಸತುವಿನ ಅಂಶ 17 ಪಟ್ಟು ಅಧಿಕವಾಗಿರುವುದು ಪತ್ತೆಯಾಗಿದೆ. ಐಪಿಸಿ ಸೆಕ್ಷನ್ 420, 272, 273 ಹಾಗೂ 109 ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ. [ಕವನ ಹಂಚಿದ ಬಿಗ್ ಬಿ ಅಮಿತಾಬ್ ಗೆ 'ಬಿಗ್' ಶಾಕ್]
ರಾಷ್ಟ್ರೀಯ ಗ್ರಾಹಕ ವ್ಯಾಜ್ಯ ಆಯೋಗದಲ್ಲಿ ಈ ಬಗ್ಗೆ ದೂರು ದಾಖಲಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು, ದೇಶದ ಯುವ ಜನತೆ ಹಾಗೂ ಮಕ್ಕಳ ಆರೋಗ್ಯದ ಜೊತೆ ಚೆಲ್ಲಾಟವಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಪ್ರತಿಕ್ರಿಯಿಸಿದ್ದಾರೆ. (ಪಿಟಿಐ)
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications