ಸಕಲ ಮಾನಸಿಕ ಸಮಸ್ಯೆಗಳಿಗೆ ಮಹಾಭಾರತದಲ್ಲಿ ಉತ್ತರ: ಐಎಂಎ ಮುಖ್ಯಸ್ಥ
ಮಹಾಭಾರತದಲ್ಲಿ ಎಲ್ಲಾ ಮಾನಸಿಕ ಸಮಸ್ಯೆಗಳಿಗೆ ಉತ್ತರ. ಭಾರತೀಯ ವೈದ್ಯಕೀಯ ಸಂಸ್ಥೆಯ (ಐಎಂಎ) ರಾಷ್ಟ್ರೀಯ ಅಧ್ಯಕ್ಷ ಕೆ.ಕೆ. ಅಗರ್ವಾಲ್ ಪ್ರತಿಪಾದನೆ. ನಿಯತಕಾಲಿಕೆಯೊಂದರಲ್ಲಿ ಹೇಳಿಕೆ.
ನವದೆಹಲಿ, ಜುಲೈ 26: ಮಾನವನು ನಿತ್ಯ ಅನುಭವಿಸುವ ಎಲ್ಲಾ ರೀತಿಯ ಮಾನಸಿಕ ಸಮಸ್ಯೆಗಳಿಗೆ 'ಮಹಾಭಾರತ' ಪುರಾಣದಲ್ಲಿ ಉತ್ತರವಿದೆ ಎಂದು ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ಮುಖ್ಯಸ್ಥ ಕೆ.ಕೆ. ಅಗರ್ವಾಲ್ ತಿಳಿಸಿದ್ದಾರೆ. ಅಲ್ಲದೆ, ಮಹಾಭಾರತದಲ್ಲಿ ಬರುವ ಶ್ರೀ ಕೃಷ್ಣನು ಅತಿ ದೊಡ್ಡ ಸಲಹೆಗಾರ (ಕೌನ್ಸೆಲರ್) ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಈಕ್ವೆಟಾರ್ ಲೈನ್ ಎಂಬ ನಿಯತಕಾಲಿಕೆಯ ಇತ್ತೀಚೆಗಿನ ಸಂಚಿಕೆಯಾದ 'ಕಾಬ್ವೆಬ್ಸ್ ಇನ್ ಸೈಡ್ ಅಸ್' , ''ಭಾರತದ ಮನೋವಿಜ್ಞಾನವು ಭಗವದ್ಗೀತೆಯಿಂದಲೇ ಆರಂಭವಾಗಿದೆ ಎನ್ನಲಡ್ಡಿಯಿಲ್ಲ. ಏಕೆಂದರೆ, ಅಂದು ಶ್ರೀ ಕೃಷ್ಣನು, ಅರ್ಜುನನೊಂದಿಗೆ ನಡೆಸಿದ ಸಂವಾದವೇ ಭಗವದ್ಗೀತೆಯಾಗಿ ರೂಪುಗೊಂಡಿತು. ಶ್ರೀಕೃಷ್ಣನು ಅರ್ಜುನನಿಗೆ ನೀಡಿದ ಉಪದೇಶದಿಂದ ಅರ್ಜುನ ಮಾನಸಿಕವಾಗಿ ಸದೃಢನಾಗುತ್ತಾನೆ. ಹಾಗಾಗಿ, ಶ್ರೀ ಕೃಷ್ಣನನ್ನು ಜಗದ್ವಿಖ್ಯಾತ ಸಲಹೆಗಾರ ಎನ್ನುವುದರಲ್ಲಿ ತಪ್ಪಿಲ್ಲ'' ಎಂದಿದ್ದಾರೆ.

ನಮ್ಮ ಭಾರತದಲ್ಲಿ ಮನೋ ವಿಜ್ಞಾನ ಎಂದರೇನು, ಮನೋ ಕಾಯಿಲೆಗಳಿಗೆ ಔಷಧಿಗಳು ಇವೆಯೇ ಎಂಬುದು ಅರಿವಿಗೆ ಬರುವುದಕ್ಕೂ ಮುನ್ನವೇ ನಮ್ಮ ಹಿಂದೂ ಋಷಿ ಮುನಿಗಳು ಮನಸ್ಸಿನ ನಾನಾ ವಿಚಾರಗಳನ್ನು ತಮ್ಮ ಗ್ರಂಥಗಳಲ್ಲಿ ತಿಳಿಸಿದ್ದರು. ಅದಕ್ಕೂ ಮುನ್ನವೇ ಶ್ರೀ ಕೃಷ್ಣನು ಭಗವದ್ಗೀತೆಯ ಮೂಲಕ ಭಾರತೀಯ ಮನೋಶಾಸ್ತ್ರಕ್ಕೆ ನಾಂದಿ ಹಾಡಿದ ಮಹಾಪುರುಷನಾಗಿದ್ದಾನೆ ಎಂದು ಅವರು ಹೇಳಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications