Mahadayi Row : ಮಹಾದಾಯಿ ನದಿ ನೀರು ವಿವಾದಕ್ಕೆ ಶೀಘ್ರವೇ ಪರಿಹಾರ: ಕೇಂದ್ರ ಸಚಿವ
ನವದೆಹಲಿ, ಜನವರಿ 12: ಗೋವಾ ಮತ್ತು ಕರ್ನಾಟಕ ನಡುವೆ ನಡೆಯುತ್ತಿರುವ ಮಹದಾಯಿ ನದಿ ನೀರಿನ ವಿವಾದದಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗುರುವಾರ ಈ ಸಮಸ್ಯೆಗೆ ಪರಿಹಾರವನ್ನು ಶೀಘ್ರವಾಗಿ ನೀಡಲಾಗುವುದು ಎಂದು ಹೇಳಿದ್ದಾರೆ.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ನಿಯೋಗ ಗುರುವಾರ ದೆಹಲಿಯ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದೆ ಎಂದು ಶೇಖಾವತ್ ಟ್ವೀಟ್ ಮಾಡಿದ್ದಾರೆ. ಕರ್ನಾಟಕವು ಮಹಾದಾಯಿ ನದಿಯ ಉಪನದಿಗಳಾದ ಕಳಸಾ ಮತ್ತು ಬಂಡೂರಿಗೆ ಅಣೆಕಟ್ಟುಗಳನ್ನು ನಿರ್ಮಿಸುವ ಮೂಲಕ ನದಿ ನೀರನ್ನು ತಿರುಗಿಸುವ ವಿಚಾರದಲ್ಲಿ ಗೋವಾ ಮತ್ತು ಕರ್ನಾಟಕ ರಾಜ್ಯಗಳ ನಡುವೆ ವಿವಾದ ಈಗ ಜೋರಾಗಿದೆ.
ಉತ್ತರ ಗೋವಾದ ಕೆಳಭಾಗದಲ್ಲಿರುವ ಮಹದಾಯಿ ವನ್ಯಜೀವಿ ಅಭಯಾರಣ್ಯದ ಮೂಲಕ ಕರ್ನಾಟಕವು ಮಹದಾಯಿ ನದಿಯಿಂದ ನೀರನ್ನು ತಿರುಗಿಕೊಳ್ಳುತ್ತಿದ್ದು, ಇದು ಸಾಧ್ಯವಿಲ್ಲ ಎಂದು ಗೋವಾ ಸರ್ಕಾರ ವಾದಿಸಿದೆ. ಎರಡು ಅಣೆಕಟ್ಟುಗಳ ನಿರ್ಮಾಣಕ್ಕಾಗಿ ಕರ್ನಾಟಕ ಸಲ್ಲಿಸಿದ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಕೇಂದ್ರವು ಇತ್ತೀಚೆಗೆ ಅನುಮೋದಿಸಿದೆ.

ಗೋವಾ ರಾಜ್ಯದ ಸಿಎಂ ಸಾವಂತ್ ನೇತೃತ್ವದ ನಿಯೋಗ ಬುಧವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಹದಾಯಿ ನದಿ ನೀರು ತಿರುಗಿಸುವ ಸಮಸ್ಯೆಯನ್ನು ಪರಿಹರಿಸಲು ತಕ್ಷಣವೇ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚಿಸುವಂತೆ ಒತ್ತಾಯಿಸಿದೆ. ಬಳಿಕವಷ್ಟೇ ಗೋವಾದ ನಿಯೋಗವು ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಸಚಿವ ಶೇಖಾವತ್ ಅವರನ್ನು ಭೇಟಿ ಮಾಡಿತು.
ಸಭೆಯ ನಂತರ ಶೇಖಾವತ್ ಅವರು ಟ್ವೀಟ್ನಲ್ಲಿ, "ಗೋವಾ ಮುಖ್ಯಮಂತ್ರಿಗಳು ಇತರ ಪ್ರತಿನಿಧಿಗಳೊಂದಿಗೆ ನನ್ನ ದೆಹಲಿ ನಿವಾಸದಲ್ಲಿ ನನ್ನನ್ನು ಭೇಟಿಯಾಗಲು ಬಂದಿದ್ದರು. ಮಹದಾಯಿ ನದಿ ನೀರು ಹಂಚಿಕೆ ಕುರಿತು ಚರ್ಚೆ ನಡೆಸಿದ್ದೇವೆ. ಖಚಿತವಾಗಿ, ಸಮಸ್ಯೆಗೆ ಪರಿಹಾರವನ್ನು ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಸಚಿವ ಶಾ ಅವರೊಂದಿಗಿನ ಸಭೆಯ ಸಂದರ್ಭದಲ್ಲಿ ಸಿಎಂ ಸಾವಂತ್ ಮಾತನಾಡಿ, "ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ"ವನ್ನು ತಕ್ಷಣವೇ ರಚಿಸಬೇಕು. ಕೇಂದ್ರ ಜಲ ಆಯೋಗವು ಮಂಜೂರು ಮಾಡಿದ ಕರ್ನಾಟಕದ ಡಿಪಿಆರ್ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ 2019ರಲ್ಲಿ ಅಂತರರಾಜ್ಯ ಜಲ ವಿವಾದ ನ್ಯಾಯಮಂಡಳಿ ನೀಡಿದ ಪ್ರಶಸ್ತಿಯನ್ನು ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರಗಳು ಪ್ರಶ್ನಿಸಿವೆ. ಸದ್ಯ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ.












Click it and Unblock the Notifications