ಕುಡಿಯುವ ನೀರಿನ ಬೇಡಿಕೆಗೆ ವಿರೋಧವಿಲ್ಲ : ಗೋವಾ ಪರ ವಕೀಲ
ಪಣಜಿ, ಡಿಸೆಂಬರ್ 27: ಕುಡಿಯುವ ನೀರಿನ ಬೇಡಿಕೆಗೆ ಯಾವ ರಾಜ್ಯ ಕೂಡಾ ವಿರೋಧ ವ್ಯಕ್ತಪಡಿಸಲು ಸಾಧ್ಯವೇ ಇಲ್ಲ. ಆದರೆ, ಕರ್ನಾಟಕದ ಬೇಡಿಕೆಯಲ್ಲೇ ಲೋಪವಿದೆ ಎಂದು ಗೋವಾ ಪರ ವಕೀಲ, ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆತ್ಮಾರಾಮ ನಾಡಕರ್ಣಿ ಅಭಿಪ್ರಾಯಪಟ್ಟಿದ್ದಾರೆ.
ಗೋವಾದ ಮುಖ್ಯಮಂತ್ರಿ ಮನೋಹರ್ ಪರಿಕ್ಕಾರ್ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರಕ್ಕೆ ಯಾವುದೇ ಕಾನೂನು ಮಾನ್ಯತೆ ಇಲ್ಲ. ರಾಜಕೀಯ ಲಾಭ ನಷ್ಟದ ಬಗ್ಗೆ ನಾನು ಪ್ರತಿಕ್ರಿಯಿಸಲಾರೆ ಎಂದು ಆತ್ಮಾರಾಮ್ ಹೇಳಿದರು.
ಕರ್ನಾಟಕ 7.56 ಟಿಎಂಸಿ ನೀರು ಕೇಳುತ್ತಿದೆ. ಆದರೆ, ಜಲಾನಯನ ಪ್ರದೇಶದ ಬಳಕೆಯನ್ನು ಮಾತ್ರ ಪರಿಗಣಿಸಿದರೆ ಬೆಳಗಾವಿ, ಖಾನಾಪುರ, ಪ್ರದೇಶಕ್ಕೆ ಎಷ್ಟು ಕುಡಿಯುವ ನೀರು ಬೇಕೋ ಅದನ್ನು ಅವರು ತೆಗೆದುಕೊಳ್ಳಲು ಯಾವುದೇ ವಿರೋಧವಿಲ್ಲ. ಈ ಬಗ್ಗೆ ನ್ಯಾಯಾಧೀಕರಣದ ಮುಂದೆ ಕೂಡಾ ಸ್ಪಷ್ಟಪಡಿಸಲಾಗಿದೆ. ಅದರಂತೆ, ಬೆಳಗಾವಿ ಖಾನಾಪುರ ಜನರಿಗೆ 0.1 ಟಿಎಂಸಿ ನೀರು ಬಿಡಲು ಸಿದ್ಧ ಎಂದರು.
ಒಂದು ಹನಿ ನೀರನ್ನೂ ಕೊಡುವುದಿಲ್ಲ ಎಂದು ಹೋರಾಟಗಾರರು, ರಾಜಕೀಯ ಮುಖಂಡರಂತೆ ನ್ಯಾಯಾಧೀಕರಣದ ಮುಂದೆ ವಾದಿಸಲು ಸಾಧ್ಯವಿಲ್ಲ. ಹುಬ್ಬಳ್ಳಿ-ಧಾರವಾಡ ಭಾಗದ ಕುಡಿಯುವ ನೀರಿನ ಅಗತ್ಯಕ್ಕಾಗಿ ಬೇಡಿಕೆ ಇದೆ. ಆದರೆ, ಜಲಾನಯನ ಪ್ರದೇಶವಲ್ಲದ ಭಾಗಗಳಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದರು.

ನ್ಯಾಯಾಧಿಕರಣದಲ್ಲಿ ಕೇಸ್ ಗೋವಾ ಪರವಿದೆ
ನ್ಯಾಯಾಧಿಕರಣದಲ್ಲಿ ಕೇಸ್ ಗೋವಾ ಪರ ಇದೆ. ಗೋವಾ ವಕೀಲರ ತಂಡ ರಾಜ್ಯದ ಹಿತಾಸಕ್ತಿಗಾಗಿ ಹೋರಾಟ ಮಾಡುತ್ತಿದೆ. ಮಹದಾಯಿ ವಿಚಾರಣೆ ಕೊನೆಯ ಹಂತಕ್ಕೆ ಬಂದಿದೆ. ಎಲ್ಲಾ ಸಾಕ್ಷಿ, ಪುರಾವೆಗಳ ಪರಿಶೀಲನೆ ಮುಗಿದಿದೆ ಎಂದರು.
ಜನವರಿ 15ರೊಳಗೆ ಕರ್ನಾಟಕ ಪರಿಶೀಲನೆ ಅರ್ಜಿ ಸಲ್ಲಿಸಬಹುದು, ಫೆಬ್ರವರಿ 6ರಿಂದ ವಾದ ಶುರುವಾಗಲಿದ್ದು, ಆಗಸ್ಟ್ 2018ರ ವೇಳೆಗೆ ನ್ಯಾಯಾಧಿಕರಣದ ಅವಧಿ ಕೂಡ ಮುಕ್ತಾಯವಾಗುತ್ತದೆ. ಅದಕ್ಕೂ ಮುನ್ನ ಅವರು ತೀರ್ಪು ಪ್ರಕಟಿಸಬೇಕು

ಮಹಾದಾಯಿ ನದಿ ನೀರು ಹಂಚಿಕೆ ವಸ್ತುಸ್ಥಿತಿ ಏನಿದೆ?
ಮಾಂಡೋವಿ(ಮಹಾನದಿ) ನೀರಲ್ಲಿ 7.56 ಟಿಎಂಸಿ ಪಾಲು ಕೇಳಿರುವ ಕರ್ನಾಟಕ ಸರ್ಕಾರಕ್ಕೆ ಅಗತ್ಯ ನೀರು ನೀಡಲು ಗೋವಾ ಹಾಗೂ ಮಹಾರಾಷ್ಟ್ರ ಹಿಂದೇಟು ಹಾಕುತ್ತಿದೆ. ಕರ್ನಾಟಕದಲ್ಲಿ 29 ಕಿ.ಮೀ ಹಾಗೂ 52 ಕಿ.ಮೀ ಗೋವಾದಲ್ಲಿ ಹರಿಯುತ್ತದೆ. ಆದರೆ, 200 ಟಿಎಂಸಿ ನೀರು ವ್ಯರ್ಥವಾಗಿ ಅರಬ್ಬಿ ಸಮುದ್ರ ಸೇರುತ್ತಿದೆ.ಕರ್ನಾಟಕದಲ್ಲಿ 29 ಕಿ.ಮೀ ಹಾಗೂ 52 ಕಿ.ಮೀ ಗೋವಾದಲ್ಲಿ ಹರಿಯುತ್ತದೆ. ಆದರೆ, 200 ಟಿಎಂಸಿ ನೀರು ವ್ಯರ್ಥವಾಗಿ ಅರಬ್ಬಿ ಸಮುದ್ರ ಸೇರುತ್ತಿದೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಗೋವಾ ಪರ ವಾದ ಹೇಗೆ?
ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಗೆ ಆಯ್ಕೆಯಾಗುವ ವಕೀಲರು ರಾಜ್ಯ ಸರ್ಕಾರಗಳು, ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಗಳ ಪರ ವಕಾಲತ್ತು ಮಾಡಬಹುದು. ಆದರೆ, ಇದಕ್ಕೆ ಕೇಂದ್ರ ಸರ್ಕಾರದ ಅನುಮತಿ ಅಗತ್ಯ. ಕೇಂದ್ರ ಹಾಗೂ ಗೋವಾ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಯಲ್ಲಿದ್ದರೂ ಗೋವಾ ಪರ ವಕಾಲತ್ತು ವಹಿಸಲು ಆತ್ಮಾರಾಮ್ ನಾಡಕರ್ಣಿ ಅವರಿಗೆ ಅನುಮತಿ ಸಿಕ್ಕಿದೆ.

ಆತ್ಮಾರಾಮ್ ವಾದಕ್ಕೆ ಹೋರಾಟಗಾರರ ಆಕ್ಷೇಪ
ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಗೆ ನೇಮಕಗೊಳ್ಳುವ ಮುನ್ನ ನಾಡಕರ್ಣಿ ಗೋವಾದ ಅಡ್ವೊಕೇಟ್ ಜನರಲ್ ಆಗಿದ್ದರೂ ಅವರ ವಾದ ತಟಸ್ಥ ನೀತಿಯನ್ನು ಅನುಸರಿಸುವುದಿಲ್ಲ. ಮೊದಲೆ ಕೇಂದ್ರ ಸರ್ಕಾರಕ್ಕೂ ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೂ ಆಗಿ ಬರುವುದಿಲ್ಲ. ಹೀಗಾಗಿ, ನಿಷ್ಪಕ್ಷಪಾತ ವಾದ, ಸಲಹೆ ಆತ್ಮಾರಾಮ್ ರಿಂದ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಕಳಸಾ ಬಂಡೂರಿ ಹೋರಾಟಗಾರರಾದ ವಿಜಯ್ ಕುಲಕರ್ಣಿ ಹಾಗೂ ಸಂಗಡಿಗರು ಅವರು ಇಂಡಿಯಾ ಗೇಟ್ ಎದುರು ಪ್ರತಿಭಟನೆ ನಡೆಸಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications