Maharashtra: ಥಾಣೆಯಲ್ಲಿ 40 ಅಡಿ ಉದ್ದದ ಗೋಡೆ ಕುಸಿತ, ಪ್ರತ್ಯೇಕ ಘಟನೆಯಲ್ಲಿ 2 ಸಾವು
ಮುಂಬೈ, ಜೂನ್ 26: ನೆರೆಯ ಮಹಾರಾಷ್ಟ್ರ ರಾಜ್ಯದ ಥಾಣೆಯಲ್ಲಿ ನಿರಂತರವಾಗಿ ಮಳೆ ಸುರಿದಿದೆ. ಪರಿಣಾಮ ಥಾಣೆ ಪಶ್ಚಿಮದ ವರ್ತಕ್ ನಗರ ಪ್ರದೇಶದಲ್ಲಿ ವಿವಿಯಾನ ಮಾಲ್ ಹಿಂದೆ ಬೃಹತ್ ಗೋಡೆಯೊಂದು ಕುಸಿದಿದೆ. ಅದೃಷ್ಟಿವಶಾತ್ ಯಾವುದೇ ಹಾನಿಯಾಗಿಲ್ಲ ಎಂದು ವರದಿ ಆಗಿದೆ.
ಮುಂಬೈ ಭಾಗದಲ್ಲಿ ನಿರಂತರ ಮಳೆ ಸುರಿದ ಕಾರಣ ಥಾಣೆಯಲ್ಲಿನ 40 ಅಡಿ ಉದ್ದದ ಗೋಡೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಯಾರಿಗೂ ತೊಂದರೆ ಆಗಿಲ್ಲ, ಜೀವ ಹಾನಿಗಳು ಸಂಭವಿಸಿಲ್ಲ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿ ಗೋಡೆ ತೆರವು, ಪರಿಶೀಲನೆ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಸಿಗಬೇಕಿದೆ ಎಂದು ಎಎನ್ಐ ವರದಿ ಮಾಡಿದೆ.

ಈ ಮಧ್ಯೆ ಭಾನುವಾರ ಬೆಳಗ್ಗೆ ಮುಂಬೈನ ರಾಜವಾಡಿ ಕಾಲೋನಿ ಘಾಟ್ಕೋಪರ್ (ಪೂರ್ವ ಭಾಗ) ನಲ್ಲಿ ಕಟ್ಟಡದ ಒಂದು ಭಾಗವು ಕುಸಿದು ಬಿದ್ದಿತ್ತು. ಇದಕ್ಕೂ ಭಾರೀ ಮಳೆಯೇ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಸಿದ ಈ ಕಟ್ಟಡದ ಅವಶೇಷಗಳ ಅಡಿಯಲ್ಲಿ ಕೆಲವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆ ಪೈಕಿ ಘಟನೆ ಬಳಿಕ ರಕ್ಷಣಾ ತಂಡಗಳು ಜನರನ್ನು ಸ್ಥಳಾಂತರಿಸಲು ಪ್ರಾರಂಭಿಸಿದರು. ಗಾಯಗೊಂಡ ನಾಲ್ಕು ಜನರನ್ನು ರಕ್ಷಸಿಸಲಾಗಿದೆ. ಕೆಲವರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಇನ್ನೂ ಇಬ್ಬರು 3 ಅಂತಸ್ತಿನ ಕಟ್ಟಡದ ಒಂದು ಭಾಗದೊಳಗೆ ಇಬ್ಬರು ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು.
ಹೆಣವಾಗಿ ಪತ್ತೆ: ಜನರ ಸ್ಥಳಾಂತರ
ಭಾನುವಾರ ನಡೆದಿದ್ದ ಘಟನೆಯಲ್ಲಿ ಇಬ್ಬರ ಮೃತದೇಹಗಳು ಸೋಮವಾರ ಪತ್ತೆ ಆಗಿವೆ. ಮೃತದೇಹಗಳನ್ನು ರಾಜವಾಡಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲಿ ವೈದ್ಯರು ತಪಾಸಣೆ ನಡೆಸಿದ್ದು, ಇವರು ಅವಶೇಷಗಳಡಿಯೇ ಉಸಿರು ಚೆಲ್ಲಿದ್ದಾರೆ ಎಂದು ಘೋಷಿಸಿದರು. ಘಟನಾ ಸ್ಥಳದ ಸುತ್ತಮುತ್ತಲಿನ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ಸ್ಥಳದಲ್ಲಿ ಮುಂಬೈ ಅಗ್ನಿಶಾಮಕ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (NDRF), ಪೊಲೀಸ್, ವಾರ್ಡ್ ಸಿಬ್ಬಂದಿ, 108 ಆಂಬ್ಯುಲೆನ್ಸ್ ಹಾಗೂ ಮಹಾರಾಷ್ಟ್ರ ವಸತಿ ಮತ್ತು ಪ್ರದೇಶಾಭಿವೃದ್ಧಿ ಪ್ರಾಧಿಕಾರ (MHADA) ರಕ್ಷಣಾ ಕಾರ್ಯಾಚರಣೆ ಮುಂದುವರೆಸಿವೆ.
ಭಾನುವಾರ ಬೆಳಗ್ಗೆ ಮುಂಬೈ ನಗರದ ನಾನಾವತಿ ಆಸ್ಪತ್ರೆ ಬಳಿ ಸೇಂಟ್ ಬ್ರಾಜ್ ರಸ್ತೆಯ ಪಕ್ಕದ ಕಟ್ಟಡದ ಬಾಲ್ಕನಿಯ ಪ್ರದೇಶ ಕುಸಿದಿತ್ತು. ಈ ಅವಘಡದಲ್ಲಿ ಸುಮಾರು ಐವರು ಗಾಯಗೊಂಡಿದ್ದರು. ಗಾಯಾಳುಗಳನ್ನು ವಿಲೆ ಪಾರ್ಲೆ ಗೌಥಾನ್ ನ ನಿವಾಸಿಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications