ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರದಲ್ಲಿ ಮಕ್ಕಳ ಕಳ್ಳರೆಂದು ಐವರ ಭೀಕರ ಹತ್ಯೆ

|
Google Oneindia Kannada News

ಧುಲೆ, ಜುಲೈ 01: ಮಕ್ಕಳ ಕಳ್ಳರೆಂದು ಐವರನ್ನು ಜನರೇ ಹೊಡೆದು ಕೊಂದ ಘಟನೆ ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ರೈನಪದ ಎಂಬ ಹಳ್ಳಿಯಲ್ಲಿ ಮಕ್ಕಳನ್ನು ಅಪಹರಣ ಮಾಡುವವರೆಂದು ಶಂಕಿಸಿ, ಐವರನ್ನು ಜನರೇ ಹೊಡೆದು ಕೊಂದಿದ್ದಾರೆ.

ಕೆಲವು ದಿನಗಳ ಹಿಂದೆ ಈ ಊರಿಗೆ ಬಂದಿದ್ದ ಪರವೂರಿನ ಐವರನ್ನು ಮಕ್ಕಳ ಕಳ್ಳರೆಂದು ಕರೆಯಲಾಗುತ್ತಿತ್ತು. ಅವರು ಮಕ್ಕಳನ್ನು ಅಪಹರಣ ಮಾಡಿದ್ದಾರೆ ಎಂಬುದಕ್ಕೆ ಇದುವರೆಗೂ ಯಾವುದೇ ಸಾಕ್ಷಿಯಾಗಲೀ, ಮಾಹಿತಿಯಾಗಲೀ ಲಭ್ಯವಿಲ್ಲ.

ಮಕ್ಕಳ ಕಳ್ಳನೆಂದು ಥಳಿಸಿ ಕೊಂದ ಸ್ಥಳೀಯರು: 9 ಮಂದಿ ಬಂಧನಮಕ್ಕಳ ಕಳ್ಳನೆಂದು ಥಳಿಸಿ ಕೊಂದ ಸ್ಥಳೀಯರು: 9 ಮಂದಿ ಬಂಧನ

ಇತ್ತೀಚೆಗೆ ವಾಟ್ಸಾಪ್ ಗ್ರೂಪ್ ಗಳಲ್ಲಿ ಕೆಲವರ ವಿಡಿಯೋಗಳು ಓಡಾಡುತ್ತಿದ್ದವು. ಇವರನ್ನು ಮಕ್ಕಳ ಅಪಹರಣಕಾರರರು ಎನ್ನಲಾಗುತ್ತಿತ್ತು. ಈ ವಿಡಿಯೋದಲ್ಲಿರುವ ವ್ಯಕ್ತಿಗಳು ಈ ಐವರನ್ನು ಹೋಲುತ್ತಿದ್ದರಿಂದ ಅವರನ್ನು ಹೊಡೆದು ಸಾಯಿಸಲಾಗಿದೆ ಎನ್ನಲಾಗುತ್ತಿದೆ.

Maharashtra: 5 lynched to death after child lifting rumour

ಈ ಸಂಬಂಧ ಈಗಾಗಲೇ ಇಲ್ಲಿನ ಪಿಂಪಾಲ್ನೇರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲೂ ಮಕ್ಕಳ ಕಳ್ಳನೆಂದು ಭಾವಿಸಿ ವ್ಯಕ್ತಿಯೋರ್ವನನ್ನು ಅಮಾನುಷವಾಗಿ ಹೊಡೆದು ಕೊಂದ ಘಟನೆ ಮೇ 23 ರಂದು ನಡೆದಿತ್ತು. ಪ್ರಕರಣಕ್ಕೆ ಸಂಬಮಧಿಸಿದಂತೆ 9 ಮಂದಿಯನ್ನು ಪೊಲಿಸರು ವಶಕ್ಕೆ ಪಡೆದಿದ್ದರು.

English summary
In yet another incident of mob violence, five people were lynched to death by villagers in Maharashtra's Dhule district on suspicion of being child-lifters.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X