Maharashtra Assembly Election 2024: ಬಿಜೆಪಿ ಏಕಾಂಗಿಯಾಗಿ ಚುನಾವಣೆ ಗೆಲ್ಲಲಾಗದು!
ಮುಂಬೈ, ಅಕ್ಟೋಬರ್ 29: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ-2024 ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಿಗೆ ಮಹತ್ವದ್ದು. ಆದರೆ ಎರಡೂ ರಾಜಕೀಯ ಪಕ್ಷಗಳು ರಾಜ್ಯದಲ್ಲಿ ಏಕಾಂಗಿಯಾಗಿ ಚುನಾವಣೆಯನ್ನು ಎದುರಿಸುತ್ತಿಲ್ಲ. ರಾಜ್ಯದ 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.
ಸದ್ಯ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿ 'ಮಹಾಯುತಿ' ಮೈತ್ರಿಕೂಟ ಅಧಿಕಾರದಲ್ಲಿದೆ. 2024ರ ಚುನಾವಣೆಯನ್ನು ಸಹ ಇದೇ ಮೈತ್ರಿಕೂಟದ ಮೂಲಕ ಎದುರಿಸಲಾಗುತ್ತದೆ. ಮೈತ್ರಿಕೂಟದಲ್ಲಿ ಬಿಜೆಪಿಗೆ ಹೆಚ್ಚಿನ ಸೀಟುಗಳು ಸಿಕ್ಕಿವೆ. 146 ಕ್ಷೇತ್ರಗಳಿಗೆ ಪಕ್ಷ ಈಗಾಗಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

'ಮಹಾಯುತಿ' ಮೈತ್ರಿಕೂಟದ ಸರ್ಕಾರದಲ್ಲಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಉಪ ಮುಖ್ಯಮಂತ್ರಿಗಳು. 2024ರ ಚುನಾವಣೆಗೆ ಅವರು ನಾಗ್ಪುರ ನೈಋತ್ಯ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದು, ನಾಮಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಅಲ್ಲದೇ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸುವ ಕುರಿತು ಮಾತನಾಡಿದ್ದಾರೆ.
ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ ದೇವೇಂದ್ರ ಫಡ್ನವೀಸ್, "ಬಿಜೆಪಿ ಏಕಾಂಗಿಯಾಗಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಆದರೆ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ" ಎಂದರು.
"ತಳಮಟ್ಟದ ಪರಿಸ್ಥಿತಿಯ ಕುರಿತು ಪ್ರಮಾಣಿಕರಾಗಿರಬೇಕು. ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿರುವ ಮಹಾಯುತಿ ಮೈತ್ರಿಕೂಟ ಒಟ್ಟಾಗಿ ಚುನಾವಣೆ ಎದುರಿಸಿ ಗೆಲುವು ಸಾಧಿಸಲಿವೆ" ಎಂದು ಹೇಳಿದರು.
"ಬಿಜೆಪಿ ಏಕಾಂಗಿಯಾಗಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಆದರೆ ಇದು ಸಹ ಸತ್ಯ ಬಿಜೆಪಿಯೇ ಅತಿ ಹೆಚ್ಚು ಸೀಟುಗಳಲ್ಲಿ ಗೆಲುವು ಸಾಧಿಸಲಿದೆ, ಹೆಚ್ಚು ಮತಗಳನ್ನು ಗಳಿಸಲಿದೆ. ಚುನಾವಣೆ ಬಳಿಕ ಬಿಜೆಪಿಯೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಮೂರು ಪಕ್ಷಗಳು ಸೇರಿ ಸರ್ಕಾರವನ್ನು ರಚನೆ ಮಾಡಲಿವೆ" ಎಂದು ದೇವೇಂದ್ರ ಫಡ್ನವೀಸ್ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಪಕ್ಷದ ಹಲವು ಆಕಾಂಕ್ಷಿಗಳಿಗೆ ಟಿಕೆಟ್ ಸಿಕ್ಕಿಲ್ಲ ಎಂಬ ಟೀಕೆಗಳ ಕುರಿತು ಮಾತನಾಡಿದ ಫಡ್ನವೀಸ್, "ಪಕ್ಷ ಎಲ್ಲರಿಗೂ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮೈತ್ರಿಕೂಟ ಮಾಡಿಕೊಂಡಾಗ ಇತರ ಪಕ್ಷಗಳಿಗೆ ಸಹ ಆದ್ಯತೆ ನೀಡಬೇಕಾಗುತ್ತದೆ. ಮುಖ್ಯವಾಗಿ ಪಕ್ಷ ಅಧಿಕಾರಕ್ಕೆ ಬರಬೇಕು" ಎಂದರು.
2024ರ ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿದ ದೇವೇಂದ್ರ ಫಡ್ನವೀಸ್, "ಲೋಕಸಭೆ ಚುನಾವಣೆಯಲ್ಲಿ ವೋಟ್ ಜಿಹಾದ್ ನಡೆದಿದೆ. 48 ಕ್ಷೇತ್ರಗಳ ಪೈಕಿ ಮಹಾಯತಿ ಮೈತ್ರಿಕೂಟ 17 ಸೀಟುಗಳಲ್ಲಿ ಮಾತ್ರ ಜಯಗಳಿಸಿದೆ. ಆದರೆ ಲೋಕಸಭೆ ಚುನಾವಣೆ ಫಲಿತಾಂಶ ವಿಧಾನಸಭೆ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ" ಎಂದು ಹೇಳಿದರು.
2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 105 ಸೀಟುಗಳಲ್ಲಿ ಜಯಗಳಿಸಿತ್ತು. ಶಿವಸೇನೆ 56, ಎನ್ಸಿಪಿ 54 ಸೀಟು ಮತ್ತು ಕಾಂಗ್ರೆಸ್ 44 ಸೀಟುಗಳಲ್ಲಿ ಜಯಗಳಿಸಿದ್ದವು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications