ಮಹಾರಾಷ್ಟ್ರ ಚುನಾವಣೆ 2024: ಕಾಂಗ್ರೆಸ್ನಿಂದ 28 ಬಂಡಾಯ ಶಾಸಕರಿಗೆ ಗೇಟ್ಪಾಸ್, ಪಟ್ಟಿ
ಮುಂಬೈ, ನವೆಂಬರ್ 12: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2024 ಕಣ ರಂಗೇರುತ್ತಿದೆ. ಮತದಾನಕ್ಕೆ ದಿನಗಣನೆ ಶುರುವಾದ ಬೆನ್ನಲ್ಲೆ, ಸ್ವಪಕ್ಷದ ಹಿತಕ್ಕೆ ದ್ರೋಹ ಬಗೆದು, ಎದರಾಳಿ ಪಕ್ಷದೊಂದಿಗೆ ಪರೋಕ್ಷವಾಗಿ ಒತ್ತಾಸೆಯಾಗಿ ನಿಂತಿರುವ ಅನೇಕ ಬಂಡಾಯ ಅಭ್ಯರ್ಥಿಗಳಿಗೆ ಕಾಂಗ್ರೆಸ್ ತಾತ್ಕಾಲಿಕ ಗೇಟ್ ಪಾಸ್ ನೀಡಿದೆ. ಈ ಮೂಲಕ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವವರಿಗೆ ಸ್ಪಷ್ಟ ಸಂದೇಶ ರವಾನಿಸಿದೆ.
ಮಹಾರಾಷ್ಟ್ರ ಕಾಂಗ್ರೆಸ್ ಸರ್ಕಾರದ ಮನವೊಲಿಕೆಗೆ ಮುಂದಾದರೂ ಸಹಿತ ಕೇಳದೇ ವಿರೋಧಿ ಪಕ್ಷಗಳ ಜೊತೆಗೆ ಕೈ ಜೋಡಿಸಿದೆ. ಆ ಪಕ್ಷಗಳ ಚಟುವಟಿಕೆಗಳಲ್ಲಿ ಭಾಗವಹಿಸಿದ ಸುಮಾರು 28 ಬಂಡಾಯ ಅಭ್ಯರ್ಥಿಗಳನ್ನು ಕಾಂಗ್ರೆಸ್ ಅಮಾನತು ಮಾಡಿದೆ. ಬರೋಬ್ಬರಿ ಮುಂದಿನ ಆರು ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಿ ಕಟ್ಟುನಿಟ್ಟಿನ ಕ್ರಮ ಜರುಗಿಸಿದೆ.

ಎಐಸಿಸಿ ಉಸ್ತುವಾರಿ ರಮೇಶ್ ಚೆನ್ನಿತ್ತಲ ಅವರ ನಿರ್ದೇಶನದ ಮೇರೆಗೆ ಪಕ್ಷವು ಎರಡು ಡಜನ್ಗೂ ಹೆಚ್ಚು ಬಂಡಾಯ ಅಭ್ಯರ್ಥಿಗಳಿಗೆ ಪಕ್ಷದಲ್ಲಿ ಸ್ಥಾನವಿಲ್ಲದಂತೆ ಮಾಡಿದೆ. ಹಾಗಾದರೆ ಅಮಾನತುಗೊಂಡವರು ಯಾರು, ಅವರೆ ಹೆಸರುಗಳು ಪಟ್ಟಿ ಇಲ್ಲಿದೆ.
ಕಾಂಗ್ರೆಸ್ನಿಂದ ಅಮಾನತುಗೊಂಡ ನಾಯಕರು
ಚಂದ್ರಪಾಲ್ ಚೌಕ್ಸೆ, ಆನಂದರಾವ್ ಗೆಡಂ, ಶಿಲು ಚಿಮುರ್ಕರ್, ಸೋನಾಲ್ ಕೋವ್, ಭರತ್ ಯೆರಮೆ, ಅಭಿಲಾಷ ಗವಟೂರೆ, ಪ್ರೇಮಸಾಗರ್ ಗನ್ವೀರ್, ಅಜಯ್ ಲಾಂಜೇವರ್, ಮನೀಶ್ ಆನಂದ್, ಸುರೇಶ್ ಕುಮಾರ್ ಜೇತ್ಲಿಯಾ, ಶಮಕಾಂತ್ ಸಾನೆರ್, ರಾಜೇಂದ್ರ ಠಾಕೂರ್, ಅಬಾ ಬಾಗುಲ್, ಅವಿನಾಶ್ ಲಾಡ್, ಯಗ್ವಾಲ ಜಿಚ್ಕರ್, ರಾಜು ಜೋಡೆ, ಕಲ್ಯಾಣ್ ಬೋರಡೆ, ಅಜಯ್ ಲಾಂಜೇವರ್, ಹಂಸಕುಮಾರ್ ಪಾಂಡೆ; ಕಮಲ ವ್ಯಾವಹರೆ, ಮೋಹನರಾವ್ ದಾಂಡೇಕರ್, ಮಂಗಲ್ ವಿಲಾಸ್ ಭುಜ್ವಾಲ್, ಮನೋಜ್ ಶಿಂಧೆ, ಸುರೇಶ್ ಪಾಟೀಲ್ ಖೇಡೆ, ವಿಜಯ್ ಖಡ್ಸೆ, ಶಬೀರ್ ಖಾನ್, ರಾಜೇಂದ್ರ ಮುಖಾ ಅವರನ್ನು ಕಾಂಗ್ರೆಸ್ ಪಕ್ಷ ಮುಂದಿನ ಆರು ವರ್ಷ ಅಮಾನತು ಮಾಡಿ ಆದೇಶಿಸಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications