Maharashtra CM: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ
ಮುಂಬೈ, ಡಿಸೆಂಬರ್ 4: ಮಹಾರಾಷ್ಟ್ರ ರಾಜ್ಯದಲ್ಲಿ 'ಮಹಾಯತಿ' ಮೈತ್ರಿಕೂಟದ ಹೊಸ ಸರ್ಕಾರ ರಚನೆಯ ಪ್ರಕ್ರಿಯೆ ಆರಂಭವಾಗಿದೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ಗುರುವಾರ ಮುಂಬೈನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಏಕನಾಥ್ ಶಿಂಧೆ, ಅಜಿತ್ ಪವಾರ್ ಸಹ ಪ್ರಮಾಣ ವಚನವನ್ನು ಸ್ವೀಕಾರ ಮಾಡಲಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ 145. 'ಮಹಾಯತಿ' ಮೈತ್ರಿಕೂಟ 230 ಶಾಸಕರ ಬಲ ಹೊಂದಿದೆ.
ಬುಧವಾರ ನಡೆದ ಬಿಜೆಪಿಯ ಸಭೆಯಲ್ಲಿ 54 ವರ್ಷದ ದೇವೇಂದ್ರ ಫಡ್ನವೀಸ್ ರಾಜ್ಯದ ನೂತನ ಮುಖ್ಯಮಂತ್ರಿ ಎಂದು ತೀರ್ಮಾನಿಸಲಾಗಿದೆ. ಈ ಮೂಲಕ ನವೆಂಬರ್ 23ರ ಬಳಿಕ ರಾಜ್ಯದ ಮುಖ್ಯಮಂತ್ರಿ ಯಾರು? ಎಂದು ಎದ್ದಿದ್ದ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಏಕನಾಥ್ ಶಿಂಧೆ, ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಲಿದ್ದಾರೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20ರಂದು ಮತದಾನ ನಡೆದಿತ್ತು. ಚುನಾವಣೆಯಲ್ಲಿ 'ಮಹಾಯತಿ' ಮೈತ್ರಿಕೂಟ 230 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಸ್ಪಷ್ಟ ಬಹುಮತವನ್ನು ಪಡೆದಿದ್ದು, ಹೊಸ ಸರ್ಕಾರವನ್ನು ರಚನೆ ಮಾಡಲಿದೆ. ಚುನಾವಣೆಯಲ್ಲಿ 132 ಸೀಟುಗಳನ್ನು ಗೆದ್ದಿರುವ ಬಿಜೆಪಿಗೆ ಮುಖ್ಯಮಂತ್ರಿ ಪಟ್ಟ ಸಿಕ್ಕಿದೆ. ಮೈತ್ರಿಕೂಟದಲ್ಲಿರುವ ಶಿವಸೇನೆ (ಏಕನಾಥ್ ಶಿಂಧೆ ಬಣ) 57, ಎನ್ಸಿಪಿ (ಅಜಿತ್ ಪವಾರ್ ಬಣ) 41 ಸೀಟುಗಳನ್ನು ಹೊಂದಿವೆ.
ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ: ಬುಧವಾರ ನಡೆದ ಮಹಾರಾಷ್ಟ್ರ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ಹೆಸರು ಅಂತಿಮಗೊಳಿಸಲಾಗಿದೆ. ಕೇಂದ್ರದಿಂದ ವೀಕ್ಷಕರಾಗಿ ಬಂದಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನೇತೃತ್ವದಲ್ಲಿ ಈ ಸಭೆ ನಡೆಯಿತು.
ಶಾಸಕಾಂಗ ಪಕ್ಷದ ಸಭೆಯಲ್ಲಿ ಕೋರ್ ಕಮಿಟಿ ಸಭೆಯ ತೀರ್ಮಾನವನ್ನು ಅಧಿಕೃತವಾಗಿ ಘೋಷಣೆ ಮಾಡಿ ಬಳಿಕ ಮಹಾಯತಿ ಮೈತ್ರಿಕೂಟದ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಹೊಸ ಸರ್ಕಾರ ರಚನೆ ಮಾಡುವ ಹಕ್ಕು ಮಂಡಿಸಲಿದ್ದಾರೆ.
ಮುಂಬೈ ನಗರದ ಆಜಾದ್ ಮೈದಾನದಲ್ಲಿ ಗುರುವಾರ ಸಂಜೆ 5 ಗಂಟೆಗೆ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಏಕನಾಥ್ ಶಿಂಧೆ, ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗುವ ನಿರೀಕ್ಷೆ ಇದ್ದು, ಈ ಕುರಿತು ಅಧಿಕೃತ ಘೋಷಣೆ ಬಾಕಿ ಇದೆ.
ದೇವೇಂದ್ರ ಫಡ್ನವೀಸ್ 2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ನಾಗ್ಪುರ ನೈಋತ್ಯ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ 4ನೇ ಬಾರಿಗೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಫಡ್ನವೀಸ್ ಕ್ಷೇತ್ರದಲ್ಲಿ 1,29,401 ಮತಗಳನ್ನು ಪಡೆದು 39,710 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಎದುರಾಳಿ, ಕಾಂಗ್ರೆಸ್ ಅಭ್ಯರ್ಥಿ ಪ್ರಫುಲ್ಲ ಗುಡಧೆ 89,691 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
ದೇವೇಂದ್ರ ಫಡ್ನವೀಸ್ 2014-2019ರ ತನಕ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. 2022ರಲ್ಲಿ ಮಹಾಯತಿ ಮೈತ್ರಿಕೂಟದ ಸರ್ಕಾರ ರಚನೆಗೊಂಡಾಗ ಅವರು ಉಪ ಮುಖ್ಯಮಂತ್ರಿಯಾಗಿದ್ದರು. ಆಗ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಲು ಫಡ್ನವೀಸ್ ಅವಕಾಶ ನೀಡಬಾರದಿತ್ತು ಎಂಬ ಮಾತುಗಳು ಈಗಲೂ ಸಹ ನಡೆಯುತ್ತಿವೆ.
ದೇವೇಂದ್ರ ಫಡ್ನವೀಸ್ ಆರ್ಎಸ್ಎಸ್ ಮತ್ತು ಕೇಂದ್ರ ಬಿಜೆಪಿ ನಾಯಕರ ಆಪ್ತರು. 1990ರ ದಶಕದ ಮಧ್ಯದಲ್ಲಿ ರಾಜಕೀಯ ಜೀವನ ಆರಂಭಿಸಿದ ಫಡ್ನವೀಸ್ 27 ವರ್ಷವಿದ್ದಾಗ 1997ರಲ್ಲಿ ನಾಗ್ಪುರದ ಅತ್ಯಂತ ಕಿರಿಯ ಮೇಯರ್ ಆಗಿದ್ದರು.
ಎರಡು ವರ್ಷಗಳ ಬಳಿಕ ಅವರು ನಾಗ್ಪುರ ಪಶ್ಚಿಮ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. 2004ರಲ್ಲಿ ಮತ್ತೆ ಆಯ್ಕೆಯಾಗಿ ಕ್ಷೇತ್ರ ಉಳಿಸಿಕೊಂಡರು. ಕ್ಷೇತ್ರ ಪುನರ್ ವಿಂಗಡನೆ ಬಳಿಕ ನಾಗ್ಪುರ ನೈಋತ್ಯ ಕ್ಷೇತ್ರ ರಚನೆಗೊಂಡಿತು. ಆಗ ದೇವೇಂದ್ರ ಫಡ್ನವೀಸ್ ಕ್ಷೇತ್ರ ಬದಲಾವಣೆ ಮಾಡಿದರು.
2009ರ ಚುನಾವಣೆಯಲ್ಲಿ ಅವರು 27, 775 ಮತ, 2014ರಲ್ಲಿ 58,942 ಮತಗಳ ಅಂತರದಿಂದ ನಾಗ್ಪುರ ನೈಋತ್ಯದಲ್ಲಿ ಗೆಲುವು ಸಾಧಿಸಿದರು. 2019ರ ಚುನಾವಣೆಯಲ್ಲಿ ದೇವೇಂದ್ರ ಫಡ್ನವೀಸ್ ಗೆಲುವಿನ ಅಂತರ 49,344 ಮತಗಳು.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications