Maharashtra Assembly Election 2024: ಚುನಾವಣಾ ಆಯೋಗದಿಂದ ಮಹತ್ವದ ಅಪ್ಡೇಟ್ಸ್
ಮಹಾರಾಷ್ಟ್ರ ಚುನಾವಣೆ ಇನ್ನು ಕೆಲವೇ ದಿನಗಳಲ್ಲಿ ನಡೆಯಬೇಕಿದೆ. ಆದರೆ ಚುನಾವಣೆ ದಿನಾಂಕ ಇಲ್ಲಿಯವರೆಗೆ ಪ್ರಕಟವಾಗಿಲ್ಲ. ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟವಾಗದೆ ಇರುವುದು ಏಕೆ, ಯಾವಾಗ ಚುನಾವಣೆ ನಡೆಯಲಿದೆ ಎನ್ನುವುದು ಸೇರಿದಂತೆ ಮಹಾರಾಷ್ಟ್ರ ಚುನಾವಣೆಗೆ ಸಂಬಂಧಿಸಿದಂತೆ ಪ್ರಮುಖ ವಿಷಯಗಳ ಬಗ್ಗೆ ಭಾರತೀಯ ಚುನಾವಣಾ ಆಯೋಗದ ಮುಖ್ಯಸ್ಥರಾದ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
ಭಾರತೀಯ ಚುನಾವಣಾ ಆಯೋಗವು ಸೆಪ್ಟೆಂಬರ್ 26ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದು, ಈ ವೇಳೆ ವಿವಿಧ ಇಲಾಖೆಗಳೊಂದಿಗೆ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದೆ. ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಬದ್ಧವಾಗಿದೆ. ಇನ್ನು ಮಹಾರಾಷ್ಟ್ರದಲ್ಲಿ ಜಿಲ್ಲಾಡಳಿತ, ಪೊಲೀಸ್ ಸೂಪರಿಡೆಂಟೆಂಟ್ ಹಾಗೂ ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳೊಂದಿಗೆ ಸಭೆ ನಡೆಸಲಿದ್ದೇವೆ ಎಂದು ಅವರು ಹೇಳಿದ್ದಾರೆ. ಅಲ್ಲದೇ ಮಹಾರಾಷ್ಟ್ರ ಚುನಾವಣೆಯನ್ನು ಕಾಲಮಿತಿಯಲ್ಲಿ ನಡೆಸಲಾಗುವುದು ಎಂದೂ ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಚುನಾವಣೆ ವಿಳಂಬಕ್ಕೆ ಇದೇ ಕಾರಣ
ಮಹಾರಾಷ್ಟ್ರದಲ್ಲಿ ಚುನಾವಣೆ ಯಾವ ಕಾರಣಕ್ಕೆ ವಿಳಂಬವಾಗುತ್ತಿದೆ ಎನ್ನುವುದರ ಬಗ್ಗೆ ಭಾರತೀಯ ಚುನಾವಣಾ ಆಯೋಗವು ಮಾಹಿತಿ ನೀಡಿದೆ. ಕಳೆದ ಬಾರಿ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗಳು ನಡೆದಿರಲಿಲ್ಲ. ಹೀಗಾಗಿ, ನಾವು ಹರಿಯಾಣ ಹಾಗೂ ಮಹಾರಾಷ್ಟ್ರ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸಲು ಸಾಧ್ಯವಾಗಿತ್ತು. ಆದರೆ, ಈ ಬಾರಿ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಇದೆ. ಅಲ್ಲದೇ ಈ ವರ್ಷಾಂತ್ಯ ಹಾಗೂ ಮುಂದಿನ ವರ್ಷದ ಪ್ರಾರಂಭದಲ್ಲಿ ಪ್ರಮುಖ ರಾಜ್ಯಗಳಲ್ಲಿ (ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ಜಾರ್ಖಂಡ್, ಮಹಾರಾಷ್ಟ್ರ ಹಾಗೂ ದೆಹಲಿ) ಚುನಾವಣೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಬೇಕಾದ ಹಿನ್ನೆಲೆಯಲ್ಲಿ ಈ ವಿಳಂಬವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ಇರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿ ನಿಯೋಜಿಸಲಾಗಿದೆ. ಹೀಗಾಗಿ, ಮಹಾರಾಷ್ಟ್ರದಲ್ಲಿ ಚುನಾವಣಾ ದಿನಾಂಕ ನಿಗದಿ ಮಾಡುವುದು ವಿಳಂಬವಾಗಿದೆ.
ಅಲ್ಲದೇ, ಮಹಾರಾಷ್ಟ್ರದಲ್ಲಿ ಇತ್ತೀಚಿನ ದಿನಗಳಲ್ಲಿ ಭಾರೀ ಮಳೆಯಾಗಿದ್ದು, ಕೆಲವು ಭಾಗದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿತ್ತು. ಮತ್ತೊಂದು ಪ್ರಮುಖ ಅಂಶವೆಂದರೆ ಮಹಾರಾಷ್ಟ್ರದಲ್ಲಿ ಈಗ ಸರಣಿ ಹಬ್ಬಗಳು ಇವೆ. ಈ ಎಲ್ಲಾ ಕಾರಣಗಳಿಂದ ಮಹಾರಾಷ್ಟ್ರ ಚುನಾವಣೆ ದಿನಾಂಕ ಘೋಷಣೆ ಮಾಡುವುದು ವಿಳಂಬವಾಗಿದೆ ಎಂದು ಭಾರತೀಯ ಚುನಾವಣಾ ಆಯೋಗವು ಮಾಹಿತಿ ನೀಡಿದೆ. ಇನ್ನು ಈಚೆಗೆ ಚುನಾವಣಾ ಆಯೋಗವು ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣದ ಚುನಾವಣೆಯ ದಿನಾಂಕವನ್ನು ಘೋಷಿಸಿತ್ತು. ಆದರೆ, ಮಹಾರಾಷ್ಟ್ರ ಚುನಾವಣಾ ದಿನಾಂಕವನ್ನು ನಿಗದಿ ಮಾಡಿರಲಿಲ್ಲ. ಮಹಾರಾಷ್ಟ್ರದ ವಿಧಾನಸಭೆಯ ಅವಧಿಯು ನವೆಂಬರ್ 3ಕ್ಕೆ ಮುಕ್ತಾಯವಾಗಲಿದ್ದರೆ, ಹರಿಯಾಣದ ವಿಧಾನಸಭೆಯ ಅವಧಿಯು ನವೆಂಬರ್ 26ಕ್ಕೆ ಮುಕ್ತಾಯವಾಗಲಿದೆ.
ಮಹಾರಾಷ್ಟ್ರ ಚುನಾವಣೆಯು ಹಲವು ಕಾರಣಗಳಿಂದ ಪ್ರಾಮುಖ್ಯತೆ ಪಡೆದುಕೊಂಡಿದೆ. ಈ ಬಾರಿ ಈ ರಾಜ್ಯದಲ್ಲಿ ಬಿಜೆಪಿ ಮೈತ್ರಿ ಪಕ್ಷಗಳು ಹಾಗೂ ಕಾಂಗ್ರೆಸ್ ಮೈತ್ರಿ ಪಕ್ಷಗಳ ನಡುವೆ ಸೆಣಸಾಟ ಇದೆ. ಈ ರಾಜ್ಯದಲ್ಲಿ ಕಳೆದ ಐದು ವರ್ಷದ ಅವಧಿಯಲ್ಲಿ ಹಲವು ಮಹತ್ವದ ಬದಲಾವಣೆಗಳು ಆಗಿವೆ. ಪಕ್ಷಗಳು ಎರಡಾಗಿ ವಿಭಜನೆಯಾಗಿವೆ. ಇದಕ್ಕೆಲ್ಲ ಮತದಾರರು ಹೇಗೆ ಉತ್ತರಿಸಲಿದ್ದಾರೆ ಎನ್ನುವ ಕುತೂಹಲ ಎದುರಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications