Maharashtra assembly election 2024: ಸೇಡು ತೀರಿಸಿಕೊಂಡಿದ್ದೇವೆ ಪೋಸ್ಟರ್ ವೈರಲ್
ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ. ಮಹಾರಾಷ್ಟ್ರ ಚುನಾವಣೆ ದಿನಾಂಕ ಘೋಷಣೆ ಬಗ್ಗೆ ಶೀಘ್ರ ಮಾಹಿತಿ ನೀಡುವುದಾಗಿ ಭಾರತೀಯ ಚುನಾವಣಾ ಆಯೋಗವು ಸಹ ಹೇಳಿದೆ. ಈ ನಡುವೆ ಬಿಜೆಪಿ ಮಹಾರಾಷ್ಟ್ರ ಚುನಾವಣೆಗೆ ಹೊಸ ಮಾದರಿಯ ಸಿದ್ಧತೆಯೊಂದನ್ನು ಪ್ರಾರಂಭಿಸಿದೆ. ಈ ಮೂಲಕ ಮಹಾರಾಷ್ಟ್ರದ ಪ್ರಮುಖ ನಾಯಕ ಹಾಗೂ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮುನ್ನೆಲೆಗೆ ತರುವ ಪ್ರಯತ್ನ ನಡೆದಿದೆ.
ಇಲ್ಲಿನ ಬದ್ಲಾಪುರ್ ಶಾಲೆಯೊಂದರಲ್ಲಿ ನಾಲ್ಕನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ಇಬ್ಬರು ಸಣ್ಣ ಹೆಣ್ಣುಮಕ್ಕಳ ಮೇಲೆ ಕಸಗುಡಿಸುವ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿದ್ದ. ಈ ಆರೋಪಿ ಮಹಾರಾಷ್ಟ್ರದ ಪೊಲೀಸರ ಎನ್ಕೌಂಟರ್ ಮಾಡಲಾಗಿತ್ತು. ಇದೀಗ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬಂದೂಕು ಹಿಡಿದಿರುವ ಹಾಗೂ ನಾವು ಸೇಡು ತೀರಿಸಿಕೊಂಡಿದ್ದೇವೆ ಎನ್ನುವ ಪೋಸ್ಟರ್ಗಳು (ಫ್ಲೆಕ್ಸ್ಗಳು) ವೈರಲ್ ಆಗಿವೆ. ಈ ಫ್ಲೇಕ್ಸ್ನಲ್ಲಿ ದೇವೇಂದ್ರ ಫಡ್ನವೀಸ್ ಬಂದೂಕು ಗುರಿ ಇಟ್ಟಿರುವ ಚಿತ್ರವನ್ನು ಬಳಸಲಾಗಿದೆ.

ನಾವು ಸೇಡು ತೀರಿಸಿಕೊಂಡಿದ್ದೇವೆ ಎನ್ನುವ ಪೋಸ್ಟ್
ಈ ಪೋಸ್ಟರ್ನಲ್ಲಿ ನಾವು ಸೇಡು ತೀರಿಸಿಕೊಂಡಿದ್ದೇವೆ ಎಂದು ಬರೆಯಲಾಗಿದೆ. ಅಲ್ಲದೇ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅವರ ಕೈಯಲ್ಲಿ ಬಂದೂಕು ಹಿಡಿದುಕೊಂಡಿರುವ ಚಿತ್ರವು ಸಹ ಇದೆ. ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇದೆ. ಮಹಾರಾಷ್ಟ್ರದಲ್ಲಿ ಈಗ ಬಿಜೆಪಿ, ಶಿವಸೇನೆ ಹಾಗೂ ಎನ್ಸಿಪಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇದೆ. ಆದರೆ, ಈ ಪೋಸ್ಟರ್ನಲ್ಲಿ ಬೇರೆ ಯಾವುದೇ ಪಕ್ಷದ ನಾಯಕರ ಚಿತ್ರ ಇಲ್ಲ. ಈ ಮೂಲಕ ಮಿತ್ರ ಪಕ್ಷಗಳನ್ನು ಬಿಜೆಪಿ ಸೈಡ್ ಲೈನ್ ಮಾಡುತ್ತಿದೆಯೇ ಎನ್ನುವ ಪ್ರಶ್ನೆಯೂ ಎದುರಾಗಿದೆ.
ದೇವೇಂದ್ರ ಫಡ್ನವೀಸ್ ಪ್ರಚಾರದ ಭಾಗ ?
ಈ ರೀತಿ ಪೋಸ್ಟರ್ಗಳು ಕಾಣಿಸಿಕೊಳ್ಳುತ್ತಿರುವುದು ದೇವೇಂದ್ರ ಫಡ್ನವೀಸ್ ಅವರ ಪ್ರಚಾರದ ಭಾಗ ಎಂದೇ ವಿಶ್ಲೇಷಿಸಲಾಗುತ್ತಿದೆ. ಕಳೆ ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಇಲ್ಲಿ ಏಕಾಂಗಿಯಾಗಿ 105 ಸೀಟುಗಳನ್ನು ಗೆದಿತ್ತು. ಆದರೆ, ಏಕಾಂಗಿಯಾಗಿ ಅಧಿಕಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಮುಂದೆ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದರೂ, ಫಡ್ನವೀಸ್ ಅವರು ಮುಖ್ಯಮಂತ್ರಿಯಾಗಲು ಸಾಧ್ಯವಾಗಲಿಲ್ಲ. ಉಪ ಮುಖ್ಯಮಂತ್ರಿಯಾಗುವುದಕ್ಕೂ ಹಿಂದೇಟು ಹಾಕಿದ್ದ ಅವರನ್ನು ಬಿಜೆಪಿ ಹೈಕಮಾಂಡ್ ಒತ್ತಾಯದ ಮೇಲೆ ಉಪ ಮುಖ್ಯಮಂತ್ರಿಯಾಗುವುದಕ್ಕೆ ಒಪ್ಪಿಸಿತ್ತು. ಆದರೆ, ಈಚೆ ನಡೆದ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಗೆ ನಿರೀಕ್ಷಿತ ಪ್ರಮಾಣದಲ್ಲಿ ಸೀಟುಗಳು ಸಿಕ್ಕಿರಲಿಲ್ಲ.
ಮುಂದುವರಿದು ಈಗ ವಿಧಾನಸಭೆ ಚುನಾವಣೆಗೆ ಸಿದ್ಧತೆ ಪ್ರಾರಂಭವಾಗಿರುವಾಗ ಬಿಜೆಪಿಯ ನಾಯಕನನ್ನು ಮುನ್ನೆಲೆಗೆ ತರುತ್ತಿಲ್ಲ. ಬಿಜೆಪಿ ಹೈಕಮಾಂಡ್ ಮಹಾರಾಷ್ಟ್ರದಲ್ಲಿ ಹೊಸ ಮುಖವನ್ನು ಹುಡುಕುತ್ತಿದೆಯೇ ಎನ್ನುವ ಪ್ರಶ್ನೆಯೂ ಎದುರಾಗಿದೆ. ಮಿತ್ರ ಹಾಗೂ ಸಣ್ಣ ಪಕ್ಷಗಳು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ನಮ್ಮ ಪಕ್ಷದಿಂದಲೇ ಆಗಲಿದ್ದಾರೆ ಎಂದು ಘೋಷಿಸುತ್ತಿವೆಯಾದರೂ, ಬಿಜೆಪಿ ಈ ನಿಟ್ಟಿನಲ್ಲಿ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಇದೀಗ ಫಡ್ನವೀಸ್ ಬಗ್ಗೆ ಜೋರು ಚರ್ಚೆ ನಡೆದಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications