ಮಹಾರಾಷ್ಟ್ರ ಚುನಾವಣೆ: ಬಿಜೆಪಿ - ಮಿತ್ರ ಪಕ್ಷಗಳ ನಡುವೆ ಕಚ್ಚಾಟ, ದಂಗಾದ ಬಿಜೆಪಿ ಹೈಕಮಾಂಡ್!
ಮಹಾರಾಷ್ಟ್ರ ಚುನಾವಣೆಗೆ ಇನ್ನು ಸರಿಯಾಗಿ ಕೇವಲ 5 ದಿನಗಳು ಬಾಕಿ ಉಳಿದಿವೆ. ಈ ಸಂದರ್ಭದಲ್ಲಿ ಬಿಜೆಪಿಯ ಮಿತ್ರಪಕ್ಷಗಳ ನಡುವೆಯೇ ಭಾರೀ ಮುಜುಗರದ ಪ್ರಸಂಗ ಎದುರಾಗುತ್ತಿದೆ. ಬಿಜೆಪಿ ಮೈತ್ರಿಕೂಟ ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿ ಇವೆ. ಮಹಾಯುತಿ ಎನ್ನುವ ಹೆಸರು ಈ ಮಿತ್ರ ಪಕ್ಷಗಳಿಗೆ ಇವೆ. ಮಹಾಯಿತಿಯ ಭಾಗವಾಗಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಅಜಿತ್ ಪವಾರ್) ಹಾಗೂ ಬಿಜೆಪಿ ನಾಯಕರ ನಡುವೆ ಬೆಂಕಿ ಹೊತ್ತುಕೊಂಡಿದೆ.
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಅಜಿತ್ ಪವಾರ್) ಹಾಗೂ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿರುವ ಅಜಿತ್ ಪವಾರ್ ಅವರು ನೀಡಿರುವ ಹೇಳಿಕೆ ಇದೀಗ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿರುವ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರು ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದಲ್ಲಿ ಇದೇ 20ಕ್ಕೆ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಗೆ 5 ದಿನಗಳು ಬಾಕಿ ಉಳಿದಿರುವಾಗ ಎಬ್ಬರು ಪ್ರಮುಖ ನಾಯಕರ ನಡುವೆ ನಡೆದಿರುವ ವಾಕ್ಸಮರ ಬಿಜೆಪಿ ಹೈಕಮಾಂಡ್ಗೆ ಹೊಸ ತಲೆನೋವನ್ನೇ ಸೃಷ್ಟಿ ಮಾಡಿದೆ.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳಿಗೆ ಟಾಂಗ್ ನೀಡುವುದಕ್ಕೆ ಬಿಜೆಪಿ ಮುಂದಾಗಿದೆ. ಇದರ ಭಾಗವಾಗಿ"ಬಾಟಂಗೆ ತೋ ಕಟೆಂಗೆ (ವಿಭಜನೆಯೇ ವಿನಾಶ)" ಎನ್ನುವ ಘೋಷಣೆಯನ್ನು ಪ್ರಯೋಗಿಸುತ್ತಿದೆ. ಇದರ ಅರ್ಥ ವಿರೋಧ ಪಕ್ಷಗಳು (ಮಹಾವಿಕಾಸ್ ಅಘಾಡಿ) ಮಹಾರಾಷ್ಟ್ರದ ಜನರನ್ನು ವಿಭಜನೆ ಮಾಡಲು ಪ್ರಯತ್ನಿಸುತ್ತಿವೆ.
ಮಹಾರಾಷ್ಟ್ರದಲ್ಲಿ ಯಾವುದೇ ಕಾರಣಕ್ಕೂ ವಿರೋಧ ಪಕ್ಷಗಳು ನಮ್ಮನ್ನು ವಿಭಜನೆ ಮಾಡುವುದಕ್ಕೆ ಬಿಡಬಾರದು ಎಂದು ಬಿಜೆಪಿ ಪ್ರಚಾರ ಮಾಡುತ್ತಿದೆ. ಆದರೆ, ಇದೀಗ ಬಿಜೆಪಿಯ ಮೈತ್ರಿ ಪಕ್ಷವಾಗಿರುವ ಅಜಿತ್ ಪವಾರ್ ಅವರ ಬಣವೇ ಈ ಹೇಳಿಕೆಯ ವಿರುದ್ಧ ತಿರುಗಿ ಬಿದ್ದಿದ್ದು. ಬಿಜೆಪಿ ಮೈತ್ರಿ ಪಕ್ಷಗಳ ಈ ನಡವಳಿಕೆ ವಿರೋಧ ಪಕ್ಷ ಹಾಗೂ ಜನರ ಮುಂದೆ ನಗೆಪಾಟಲಿಗೆ ಗುರಿಯಾಗಿದೆ.
"ಬಾಟಂಗೆ ತೋ ಕಟೆಂಗೆ (ವಿಭಜನೆಯೇ ವಿನಾಶ)" ಎನ್ನುವ ಘೋಷಣೆಗೆ ಮಹಾರಾಷ್ಟ್ರದಲ್ಲಿ ಅವಕಾಶ ಇಲ್ಲ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಹೇಳಿದ್ದಾರೆ. ಇದಕ್ಕೆ ಮತ್ತೊಬ್ಬ ಉಪ ಮುಖ್ಯ (ಮಹಾರಾಷ್ಟ್ರದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳು) ದೇವೇಂದ್ರ ಫಡ್ನವಿಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿಯು (ಅಜಿತ್ ಪವಾರ್ ಬಣ) ಹೆಚ್ಚು ಜನ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಈ ನಡುವೆ ಬಿಜೆಪಿಯ ಉಗ್ರ ಹಿಂದುತ್ವದಿಂದ ಅಜಿತ್ನೇತೃತ್ವದ ಮಿತ್ರ ಪಕ್ಷವು ಅಂತರ ಕಾಪಾಡಿಕೊಳ್ಳುತ್ತಿದೆ. ಈ ಬೆಳವಣಿಗೆ ಬಿಜೆಪಿ ನಾಯಕರನ್ನು ಕೆಣಕಿಸಿದೆ.

ಇದೀಗ ಈ ಬಗ್ಗೆ ಮಾತನಾಡಿರುವ ದೇವೇಂದ್ರ ಫಡ್ನಿವೀಸ್ ಅವರು ಅಜಿತ್ ಪವಾರ್ ಅವರು, ಅವರ ಹಿಂದಿನ ಮಿತ್ರರ ಪ್ರಭಾವದಿಂದ (ಮೂಲ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ) ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಹಾಗೂ ಮಹಾರಾಷ್ಟ್ರದಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕ ಯೋಗಿ ಆದಿತ್ಯನಾಥ್ ಅವರು ಮಹಾರಾಷ್ಟ್ರದ ಪ್ರಚಾರ ರ್ಯಾಲಿಯಲ್ಲಿ "ಬಟೇಂಗೆ ತೋ ಕಿಟೆಂಗೆ" (ನಾವು ವಿಭಜಿತರಾದರೆ ಮುಗಿಸುತ್ತಾರೆ) ಎಂಬರ್ಥದಲ್ಲಿ ಮಾತನಾಡಿದ್ದರು. ಬಿಜೆಪಿಯು ಈ ಘೋಷಾವಾಕ್ಯವನ್ನೇ ಚುನಾವಣೆಯ ಅಸ್ತ್ರವನ್ನಾಗಿಸಿಕೊಂಡಿದೆ. ಭಾರೀ ಜಾಹೀರಾತು ಸಹ ನೀಡುತ್ತಿದೆ. ಆದರೆ, ಅಜಿತ್ ಪವಾರ್ ಅವರ ಹೇಳಿಕೆ ಬಿಜೆಪಿಗೆ ನುಂಗಲಾಗದ ಬಿಸಿ ತುಪ್ಪವಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications