ನಗೆ ಬೀರಿದ ಓವೈಸಿ, ರಾಜ್ ಠಾಕ್ರೆಗೆ ಭಾರೀ ಮುಖಭಂಗ
ಮುಂಬೈ, ಅ 20: ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಯಲ್ಲಿ ಎರಡು ಅನಿರೀಕ್ಷಿತ ಫಲಿತಾಂಶ ಹೊರಬಿದ್ದಿದೆ. ಒಂದು ಹೈದರಾಬಾದ್ ಮೂಲದ ಓವೈಸಿ ನೇತೃತ್ವದ ಎಂಐಎಂ ಪಕ್ಷ ಖಾತೆ ತೆರೆದಿದ್ದರೆ, ಇನ್ನೊಂದೆಡೆ ಎಂಎನ್ಎಸ್ ಹೀನಾಯ ಸೋಲು ಕಂಡಿದೆ.
ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ನೇತೃತ್ವದ ಮಜ್ಲೀಸ್ -ಇ-ಇತ್ತೆಹದಾಲ್-ಮುಸ್ಲಿಮೀನ್ (ಎಂಐಎಂ) ಪಕ್ಷದ ಇಬ್ಬರು ಅಭ್ಯರ್ಥಿಗಳು ಜಯಭೇರಿ ಬಾರಿಸುವ ಮೂಲಕ ಪಕ್ಷ ಮಹಾರಾಷ್ಟ್ರದಲ್ಲಿ ಶುಭಾರಂಭ ಮಾಡಿದೆ.
ಇತ್ತ, ರಾಜ್ ಠಾಕ್ರೆಯ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಭ್ಯರ್ಥಿಗಳು ಹೀನಾಯ ಸೋಲು ಅನುಭವಿಸಿ ಪಕ್ಷ ಮುಖಭಂಗ ಅನುಭವಿಸುವಂತಾಗಿದೆ. (ಮಕಾಡೆ ಮಲಗಿದ ಕಾಂಗ್ರೆಸ್ː ರಾಹುಲ್ ಎಲ್ಲಿ)

ಮರಾಠಿಪರ ನಿಲುವು ತಾಳಿ, ಮಹಾರಾಷ್ಟ್ರದಲ್ಲಿ ಮರಾಠಿಯೇತರರ ಮೇಲೆ ದಾಳಿ ನಡೆಸುವ ಮೂಲಕ ಮತ್ತು ಟೋಲ್ ಧ್ವಂಸಗೊಳಿಸುವ ಮೂಲಕ ಕಾನೂನನ್ನು ಕೈಗೆತ್ತಿಕೊಂಡಿದ್ದ ಎಂಎನ್ಎಸ್ ಪಕ್ಷ ಈ ಬಾರಿಯ ಚುನಾವಣೆಯಲ್ಲಿ ಇನ್ನಿಲ್ಲದಂತೆ ಹಿನ್ನಡೆ ಅನುಭವಿಸಿದೆ.
ಎಂಐಎಂ ಪಕ್ಷದ ಮತ್ತು ಮಾಜಿ ಪತ್ರಕರ್ತ ಇಮ್ತಿಯಾಜ್ ಜಲೀಲ್, ಔರಂಗಾಬಾದ್ ಸೆಂಟ್ರಲ್ ಕ್ಷೇತ್ರದಲ್ಲಿ ಶಿವಸೇನೆಯ ಅಭ್ಯರ್ಥಿ ಪ್ರದೀಪ್ ಜೈಸ್ವಾಲ್ ಅವರನ್ನು ಇಪ್ಪತ್ತು ಸಾವಿರ ಮತಗಳಿಂದ ಸೋಲಿಸಿದ್ದಾರೆ.
ಪಕ್ಷದ ಇನ್ನೊಬ್ಬ ಅಭ್ಯರ್ಥಿ ವಾರಿಶ್ ಯೂಸಫ್ ಪಠಾಣ್ ಮುಂಬೈ ಮಹಾನಗರ ವ್ಯಾಪ್ತಿಯ 'ಬೈಕುಲಾ' ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಪಠಾಣ್, ಬಿಜೆಪಿಯ ಮಧುಕರ್ ಚವಾಣ್ ಅವರನ್ನು 1357 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಬೈಕುಲಾದಲ್ಲಿ ಮಾಜಿ ಭೂಗತ ಲೋಕದ ಡಾನ್ ಅರುಣ್ ಗಾವ್ಲಿ ಪುತ್ರಿ ಮತ್ತು ಅಖಿಲ ಭಾರತೀಯ ಸೇನೆಯ ಗೀತಾ ಗಾವ್ಲಿ ಕೂಡಾ ಕಣದಲ್ಲಿದ್ದರು. ಈ ಕ್ಷೇತ್ರದಲ್ಲಿ ಶಿವಸೇನೆ ತನ್ನ ಅಭ್ಯರ್ಥಿಯನ್ನು ಕಣ್ಣಕ್ಕಿಳಿಸಿರಲಿಲ್ಲ.
ಔರಂಗಾಬಾದ್ ಮತ್ತು ಬೈಕುಲಾ ಎರಡೂ ಕ್ಷೇತ್ರಗಳು ಮುಸ್ಲಿಂ ಪ್ರಾಭಲ್ಯವಿರುವ ಕ್ಷೇತ್ರವಾಗಿದೆ. 288 ಶಾಸಕರ ಬಲದ ಅಸೆಂಬ್ಲಿಯಲ್ಲಿ ಎಂಐಎಂ 24 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು.

ರಾಜ್ ಠಾಕ್ರೆ ಪಕ್ಷದಿಂದ ಎಸ್ಬಿ ಸೋನಾವಾನೆ ಮಾತ್ರ ಗೆದ್ದ ಅಭ್ಯರ್ಥಿ. ಇವರು ಜುನ್ನರ್ ಕ್ಷೇತ್ರದಲ್ಲಿ ಶಿವಸೇನೆಯ ಅಭ್ಯರ್ಥಿ ಎಡಿ ಬುಚ್ಕೆ ಅವರನ್ನು ಹದಿನೇಳು ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ.
ಕಳೆದ ಅಸೆಂಬ್ಲಿ (2009) ಚುನಾವಣೆಯಲ್ಲಿ ಹದಿಮೂರು ಕ್ಷೇತ್ರ ಗೆದ್ದಿದ್ದ ಎಂಎನ್ಎಸ್ ಈ ಬಾರಿ 219 ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು, ಆದರೆ ಗೆದ್ದಿದ್ದು ಒಂದೇ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications