Maharashtra Election: ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಪ್ಲಾನ್: ಸಂಜಯ್ ರಾವುತ್
ಮುಂಬೈ, ಅಕ್ಟೋಬರ್ 20: ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಹರಿಯಾಣ ಗೆದ್ದಿರುವ ಬಿಜೆಪಿಯು ಇದೀಗ ಮಹಾರಾಷ್ಟ್ರದಲ್ಲಿ ಕಮಾಲ್ ಮಾಡಲು ಮುಂದಾಗಿದೆ. ಇಲ್ಲಿ ಸಹ ವಿವಿಧ ಪಕ್ಷಗಳ ಜೊತೆಗೆ ಬಿಜೆಪಿ, ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿವೆ. ಹೀಗಾಗಿ ಇಲ್ಲೂ ಸಹ ತೀವ್ರ ಪೈಪೋಟಿ ನಡೆಯಲಿದೆ. ಈ ಮಧ್ಯೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಬಿಜೆಪಿ ಪ್ಲಾನ್ ಮಾಡಿಕೊಂಡಿದೆ ಎಂದು ಗಂಭೀರ ಆರೋಪ ಕೇಳಿ ಬಂದಿದೆ.
ಹೌದು, ಕೇಂದ್ರ ಬಿಜೆಪಿ ವಿರುದ್ಧ ಭಾನುವಾರ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಮುಖ್ಯ ವಕ್ತಾರ ಸಂಜಯ್ ರಾವುತ್ ವಾಗ್ದಾಳಿ ನಡೆಸಿದರು. ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಜೊತೆಗೆ ವಿರೋಧ ಪಕ್ಷದ ಮಹಾವಿಕಾಸ್ ಅಗಾಡಿ (ಎಂವಿಎ) ಅಧಿಕಾರದಿಂದ ದೂರ ಇಡಲು ಸಂಚು ಮಾಡಲಾಗಿದೆ ಎಂದು ಆಪಾದಿಸಿದ್ದಾರೆ.

ಈ ಸಂಚಿನ ಮೂಲ ರೂವಾರಿಗಳು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಚಾಣಕ್ಯ ಅಮಿತ್ ಶಾ ಇವರು ಎಂದು ಶಿವಸೇನೆ ನೇರ ವಾಗ್ದಾಳಿ ಮಾಡಿದೆ. ರಾವುತ್ ಪ್ರಕಾರ ಬಿಜೆಪಿ ಜತೆಗಿನ ಪಕ್ಷಗಳು ಸೋಲು ಕಾಣಲಿವೆ ಎಂದು ಭವಿಷ್ಯ ನುಡಿದಿದ್ದಾರೆ.
ಮಹಾ ವಿಕಾಸ್ ಅಘಾಡಿ (I.N.D.I.A.) ಮೈತ್ರಿಕೂಟವು ಬಿಜೆಪಿ ಜೊತೆಗೆ ಭಾರತೀಯ ಚುನಾವಣಾ ಆಯೋಗವನ್ನು ಟೀಕಿಸಿದರು. ಬಿಜೆಪಿ ಚುನಾವಣಾ ಆಯೋಗದ ಜೊತೆಗೆ ಚುನಾವಣೆ ಎದುರಿಸಲಿದೆ ಎಂದು ಕಿಡಿ ಕಾರಿದೆ.
ಮಹಾರಾಷ್ಟ್ರದಲ್ಲಿ 14ನೇ ವಿಧಾನಸಭೆ ಅವಧಿಯು ಮುಂದಿನ ತಿಂಗಳ ನವೆಂಬರ್ 26 ದಿನಗಳು ಕೊನೆಗೊಳ್ಳಲಿದೆ. ರಾಜ್ಯದ 15ನೇ ವಿಧಾನಸಭಾ ಚುನಾವಣೆಗೆ ಬಿಜೆಪಿಯು 99 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮತದಾನವು ನವೆಂಬರ್ 20 ರಂದು ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಅದಾಗಿ ಎರಡು ದಿನದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ ಎಂದು ಸಂಜಯ್ ರಾವುತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ವಿರುದ್ಧ ಸರ್ಕಾರ ರಚನೆಯ ಬಗ್ಗೆ ಚರ್ಚಿಸಲು ಮಹಾ ವಿಕಾಸ್ ಅಘಾಡಿಗೆ ಸಿದ್ಧವಾಗಿದೆ. ಪ್ರತಿ ತಂತ್ರ ಹೆಣೆದು ಮಹಾರಾಷ್ಟ್ರದಲ್ಲಿ ಅತ್ಯಧಿಕ ಸೀಟು ಗೆಲ್ಲಲು ಪ್ಲಾನ್ ಮಾಡಿಕೊಳ್ಳುತ್ತಿದೆ. ಮಹಾ ವಿಕಾಸ್ ಅಘಾಡಿ ಎರಡು ದಿನಗಳಲ್ಲಿ ವಿಶ್ವಾಸ ಸಾಧಿಸಲು ಆಗದಿದ್ದರೆ, ರಾಜ್ಯಪಾಲರು ಆರು ತಿಂಗಳ ಕಾಲ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಬಹುದು ಎಂದು ರಾಹುತ್ ತಿಳಿಸಿದ್ದಾರೆ.
ಇನ್ನೂ ಬಿಜೆಪಿಯು ಹರಿಯಾಣದಲ್ಲಿ ತಳಮಟ್ಟದಲ್ಲಿ ಸಭೆ ನಡೆಸಿ ಎಲ್ಲ ಸಮುದಾಯದ ಜನರನ್ನು ಸಂಪರ್ಕಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಅಂತಹದ್ದೆ ಗೆಲುವಿನ ಯೋಚನೆ ಮಹಾರಾಷ್ಟ್ರದಲ್ಲೂ ಮಾಡಿದೆ ಎನ್ನಲಾಗಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮಹತ್ವದ ಪಾತ್ರ ವಹಿಸುವ ಸಾಧ್ಯತೆ ಇದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications