Maharashtra Assembly Elections 2024: ಕಾಂಗ್ರೆಸ್ನ ಎಂವಿಎ ಮೈತ್ರಿಕೂಟಕ್ಕೆ ಹೊಸ ಸವಾಲು
ಮುಂಬೈ, ಅಕ್ಟೋಬರ್ 11: ಹರಿಯಾಣ ಮತ್ತು ಜಮ್ಮು & ಕಾಶ್ಮೀರ ವಿಧಾನಸಭೆ ಚುನಾವಣೆ ಫಲಿತಾಂಶ ಮುಂಬರುವ ಜಾರ್ಖಂಡ್ ಮತ್ತು ಮಹಾರಾಷ್ಟ್ರ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ? ಎಂಬ ಚರ್ಚೆ ಆರಂಭವಾಗಿದೆ. ಹರಿಯಾಣದಲ್ಲಿ ಕಾಂಗ್ರೆಸ್ಗೆ ಭಾರೀ ಮುಖಭಂಗವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜೊತೆ ಮೈತ್ರಿ ಮಾಡಿಕೊಂಡರೂ ಸಹ ಪಕ್ಷ ನಿರೀಕ್ಷೆ ಮಾಡಿದಷ್ಟು ಸ್ಥಾನ ಗೆಲ್ಲಲು ವಿಫಲವಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ 'ಮಹಾಯುತಿ' ಮತ್ತು ಕಾಂಗ್ರೆಸ್ ನೇತೃತ್ವದ 'ಮಹಾವಿಕಾಸ್ ಅಘಾಡಿ' ಮೈತ್ರಿಕೂಟಗಳು ತಮ್ಮದೇ ಆದ ಸವಾಲುಗಳನ್ನು ಎದುರಿಸಲಿವೆ.
ಕೇಂದ್ರ ಚುನಾವಣಾ ಆಯೋಗ ಯಾವುದೇ ಕ್ಷಣದಲ್ಲಿ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಸದ್ಯದ ಮಾಹಿತಿ ಪ್ರಕಾರ ನವೆಂಬರ್ 2ನೇ ವಾರದ ಮಹಾರಾಷ್ಟ್ರದ 288 ಸದಸ್ಯ ಬಲದ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳಿಗೆ ಮಹತ್ವದ್ದಾಗಿದೆ.

ಹರಿಯಾಣದ 90 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 48 ಸೀಟುಗಳಲ್ಲಿ ಗೆಲ್ಲುವ ಮೂಲಕ 3ನೇ ಬಾರಿಗೆ ಅಧಿಕಾರವನ್ನು ಪಡೆದು, ಐತಿಹಾಸಿಕ ಸಾಧನೆ ಮಾಡಿದೆ. ಕಾಂಗ್ರೆಸ್ 37, ಐಎನ್ಎಲ್ಡಿ 2, ಪಕ್ಷೇತರರು 3 ಸ್ಥಾನದಲ್ಲಿ ಜಯಗಳಿಸಿದ್ದಾರೆ. 90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ 42, ಕಾಂಗ್ರೆಸ್ 6 ಸ್ಥಾನಗಳಲ್ಲಿ ಜಯಗಳಿಸಿವೆ. ಬಿಜೆಪಿ ರಾಜ್ಯದಲ್ಲಿ 29 ಸ್ಥಾನ ಗೆದ್ದಿದೆ. ಈ ಚುನಾವಣೆ ಫಲಿತಾಂಶ ಮಹಾರಾಷ್ಟ್ರದ ಮೇಲೆ ಬೀರುವ ಪರಿಣಾಮ ಏನು?.
ಮಹಾವಿಕಾಸ್ ಅಘಾಡಿಗೆ ಚಿಂತೆ: ಸದ್ಯ ಮಹಾರಾಷ್ಟ್ರ ರಾಜ್ಯದಲ್ಲಿ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟ ಅಧಿಕಾರದಲ್ಲಿದೆ. ರಾಜ್ಯದ ವಿರೋಧ ಪಕ್ಷಗಳು ಕಾಂಗ್ರೆಸ್ ನೇತೃತ್ವದಲ್ಲಿ 'ಮಹಾವಿಕಾಸ್ ಅಘಾಡಿ' ಮೈತ್ರಿಕೂಟ ರಚನೆ ಮಾಡಿಕೊಂಡಿವೆ. ಇದರಲ್ಲಿ ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್ಸಿಪಿ (ಶರದ್ ಪವಾರ್) ಪಕ್ಷಗಳಿವೆ.
2024ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮಹಾವಿಕಾಸ್ ಅಘಾಡಿ ಮೈತ್ರಿಕೂಟ ಉತ್ತಮ ಸಾಧನೆ ಮಾಡಿದೆ. ಆದರೆ ಈಗ, ಹರಿಯಾಣ, ಜಮ್ಮು & ಕಾಶ್ಮೀರ ಫಲಿತಾಂಶ ಮೈತ್ರಿಕೂಟಕ್ಕೆ ಚಿಂತೆ ತಂದಿದೆ. ಹರಿಯಾಣದ ಫಲಿತಾಂಶ 'ಮಹಾಯತಿ'ಯ ಉತ್ಸಾಹ ಹೆಚ್ಚಿಸಿದೆ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದ್ದರೂ ಸಹ ಕಾಂಗ್ರೆಸ್ ಅಧಿಕಾರವನ್ನು ಪಡೆಯಲು ವಿಫಲವಾಗಿದೆ.
ಮಹಾವಿಕಾಸ್ ಅಘಾಡಿ ಮೈತ್ರಿಕೂಟದ ಸೀಟು ಹಂಚಿಕೆ ಕುರಿತು ಇನ್ನೂ ಅಂತಿಮ ಚಿತ್ರಣ ಲಭ್ಯವಾಗಿಲ್ಲ. ಜಮ್ಮು ಮತ್ತು ಕಾಶ್ಮೀರದಂತೆ ಕಾಂಗ್ರೆಸ್ಗೆ ಕಡಿಮೆ ಸೀಟು ಬಂದರೆ ಸರ್ಕಾರ ರಚನೆ ಮಾಡುವುದು ಹೇಗೆ? ಎಂಬುದು ಶಿವಸೇನೆ (ಉದ್ಧವ್ ಠಾಕ್ರೆ ಬಣ)ಯ ಚಿಂತೆಯಾಗಿದೆ. ಕಾಂಗ್ರೆಸ್ಗಿಂತ ಹೆಚ್ಚು ಸ್ಥಾನಗಳಲ್ಲಿ ಕಣಕ್ಕಿಳಿಯಬೇಕು ಎಂದು ಪಕ್ಷ ಚಿಂತಿಸುತ್ತಿದೆ.
ದಸರಾ ಸಂದರ್ಭದಲ್ಲಿಯೇ ಸೀಟು ಹಂಚಿಕೆ ಘೋಷಣೆ ಮಾಡಿ, ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಮಹಾವಿಕಾಸ್ ಅಘಾಡಿ ಮೈತ್ರಿಕೂಟ ತೀರ್ಮಾನಿಸಿತ್ತು. ಆದರೆ ಇನ್ನೂ ಸಹ ಸೀಟು ಹಂಚಿಕೆ ಅಂತಿಮವಾಗಿಲ್ಲ.
ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಮಾತನಾಡಿ, "ಹರಿಯಾಣದಲ್ಲಿ ಬಿಜೆಪಿ ಜಯಗಳಿಸಿದ್ದರೂ ಸಹ ಅದೇ ಮಾದರಿ ಮಹಾರಾಷ್ಟ್ರದಲ್ಲಿ ಕೆಲಸ ಮಾಡುವುದಿಲ್ಲ. ಎರಡೂ ರಾಜ್ಯಗಳ ಚಿತ್ರಣ ಬೇರೆ-ಬೇರೆ. ರಾಜ್ಯದ ಜನರು ಶಿವಸೇನೆ-ಬಿಜೆಪಿ-ಎನ್ಸಿಪಿ ಸರ್ಕಾರದ ಭಷ್ಟ್ರಾಚಾರವನ್ನು ನೋಡಿ ಆಕ್ರೋಶಗೊಂಡಿದ್ದಾರೆ" ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಗೆಲ್ಲಬೇಕು ಎಂದು ಎರಡೂ ಮೈತ್ರಿಕೂಟಗಳು ತಂತ್ರ ರೂಪಿಸುತ್ತಿವೆ. ಚುನಾವಣೆ ನವೆಂಬರ್ನಲ್ಲಿ ನಡೆಯಲಿದ್ದು, ಈ ವಿಧಾನಸಭೆ ಚುನಾವಣೆ ಫಲಿತಾಂಶ ದೇಶದ ಕುತೂಹಲಕ್ಕೆ ಕಾರಣವಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications